ಪಣಂಬೂರು : ಅಂತರಾಷ್ಟ್ರೀಯ ಮಟ್ಟದ ಸೌಕರ್ಯವನ್ನು ಪಣಂಬೂರು ಬೀಚ್ನಲ್ಲಿ ಬರುವ ಪ್ರವಾಸಿಗರಿಗೆ ನೀಡುವ ಸಲುವಾಗಿ ಸರಕಾರಿ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು. ಸೋಮವಾರ ಸಂಜೆ 7.5 ಕೋಟಿ ರೂ.ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು
ಮಂಗಳೂರಿನ ಪ್ರತಿಷ್ಠಿತ ದ್ವಿಚಕ್ರ ವಾಹನಗಳ ಶೋರೂಂ ಆದ ವೆಸ್ಟ್ ಕೋಸ್ಟ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡುತ್ತಿದ್ದಾರೆ.ದ್ವಿಚಕ್ರ ವಾಹನಗಳ ಫ್ರೀ ವಾಶ್ ಜೊತೆಗೆ ತೈಲದ ಮೇಲೆ ಶೇ.10ರಷ್ಟು ರಿಯಾಯಿತಿ, ಲೇಬರ್ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ, ದ್ವಿಚಕ್ರ ವಾಹನಗಳ ಬಿಡಿಭಾಗಗಳ ಮೇಲೆ ಶೇ.5ರಷ್ಟು ರಿಯಾಯಿತಿಯನ್ನು ನೀಡುತ್ತಿದ್ದಾರೆ. ಇದರ ಜೊತೆಗೆ ನೂತನ ದ್ವಿಚಕ್ರ ವಾಹನ ಖರೀದಿದಾರರಿಗೆ ಫುಲ್ ಟ್ಯಾಂಕ್ ಪೆಟ್ರೋಲ್
ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು. ದಾನಿ ಕೃಷ್ಣ ಶೆಟ್ಟಿ ಶ್ರೀದ್ವಾರ ಅವರು ನಿರ್ಮಿಸಿದ ಹೆದ್ದಾರಿ ಬದಿಯ ರಾಜಗೋಪುರದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಚಿತ್ರಾಪುರ
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ ಬಂಗಾರು ಅರಸರು ಉದ್ಘಾಟಿಸಿದರು. ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ವಿಟ್ಲದಿಂದ ಕುದ್ದುಪದವು-
ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ ಅಸಹಾಯಕ ಜನರಿಗೆ ವಾಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಮಚಂದ್ರ ಕೆಂಬಾರೆ ಆಗ್ರಹಿಸಿದರು ಅವರು ಎಸ್
ಮಂಗಳೂರಿನ ಬಂದರಿನಲ್ಲಿರುವ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ನಗರದ ಪೋಲಿಸ್ ಲೈನ್ನ ನಾಸಿಕ್ ಬಿ. ಎಚ್ ಬಂಗೇರ ಸಭಾ ಭವನದಲ್ಲಿ ನಡೆಯಿತು. ಸಂಘದ ಲೋಗೋ ಅನವರಣಗೊಳಿಸಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾಡಿದ ಮಂಗಳೂರು ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರು.ಸರ್ಕಾರದ ವತಿಯಿಂದ ಇತರ ಚಾಲಕರಿಗೆ ಹಾಗೂ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳು ಟೆಂಪೋ ಚಾಲಕರಿಗೆ ಸಿಗಬೇಕು ಟೆಂಪೋ ಚಾಲಕರನ್ನು ಯಾಕೆ ಕಡೆಗಣಿಸಲಾಗುವುದು
ವಿಟ್ಲ: ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ. ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ -ಪುಟ್ಟ ಗಾಯಾವಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ
ಉಡುಪಿ: ನಿವೃತ್ತ ಪ್ರಾಂಶುಪಾಲ ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಅವರಿಗೆ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ವತಿಯಿಂದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಚಿವ ಸಿ.ಎಸ್. ನಾಡಗೌಡ ಅಪ್ಪಾಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಕಾಲಜ್ಞಾನ ಮಠದ ಶ್ರೀ ಅಪ್ಪಯ್ಯ
ಔರಾ 2023 – ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್ ಬ್ಯಾಚ್ 2022ರ ಫ್ರೆಶರ್ಸ್ ಡೇ ಅನ್ನು ಫೆಬ್ರವರಿ 7, 2023 ರಂದು ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮತ್ತು ಗ್ಲೋಬಲ್ ಆರ್ಎಂಜಿ ಮುಖ್ಯಸ್ಥರಾದ ಶ್ರೀ ಚಕ್ರವರ್ತಿ ಇ.ಎಸ್. ಹಾಗೂ ಗೌರವ ಅತಿಥಿಗಳಾಗಿ ಶ್ರೀ ಎನ್. ಶಶಿಕುಮಾರ್ IPS, DIGP ಮತ್ತು ಪೊಲೀಸ್ ಆಯುಕ್ತರು, ಮಂಗಳೂರು ಇವರುಗಳು ಭಾಗವಹಿಸಿದರು.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.