ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24),
ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ ಅಪರೂಪದ ತಿಮಿಂಗಲದ ಪ್ರಭೇದ ಎಂದು ತಿಳಿಸಿದ್ದಾರೆ. ತ್ರಾಸಿ ಕಡಲ ತೀರದಲ್ಲಿ ಬೃಹತ್ ಮೀನು ಬಿದ್ದು ಕೊಳೆತ ಸ್ಥಿತಿಯಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಸ್ಥಳೀಯ ” ಬೀಚ್ ಬಾಯ್ಸ್’
ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಂಕೆಯಲ್ಲಿ ಬಂಧಿತ ಆರೋಪಿ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ ಶಿವಮೊಗ್ಗ ಪೊಲೀಸರು ಬಂಟ್ವಾಳದ ನಾವೂರು ಸಮೀಪ ಹಲವೆಡೆ ಮಹಜರು ನಡೆಸಿದರು. ನೇತ್ರಾವತಿ ನದಿ ಕಿನಾರೆಯಲ್ಲಿ ಹಾಗೂ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈತ ಸ್ಫೋಟಕಗಳನ್ನು ಬಚ್ಚಿಟ್ಟಿರುವ ಶಂಕೆಯಿಂದ ಈ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ. ಮಂಗಳೂರಿನಿಂದ ಈತನನ್ನು ಬಂಟ್ವಾಳಕ್ಕೆ ಕರೆತಂದ ಪೊಲೀಸರು ರಾತ್ರಿವರೆಗೂ ಪರಿಶೀಲನೆ ನಡೆಸಿದರು.ಶಂಕಿತ
ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆಸಿದೆ.ಯಾವ ಪ್ರಕರಣಕ್ಕೆ ಎಂಬ ವಿಚಾರವನ್ನು ಇಲ್ಲಿನ ಪೊಲೀಸರು ಮಾಹಿತಿ
ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ
ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯಾ ಅವರ ರೂ. 8 ಸಾವಿರ ನಗದು ಹಣವಿದ್ದ ಪರ್ಸನ್ನು ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕೆಯೊಬ್ಬಳು ಕಳವು ಮಾಡಿದ ಘಟನೆ ಮಂಗಳವಾರ ನಡೆದಿದ್ದು, ಕಳವು ಮಾಡಿರುವ ತಮಿಳುನಾಡು ಮೂಲದ ಕಳ್ಳಿಯನ್ನು ಪುತ್ತೂರು ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಸೆಲ್ವಂ ಎಂಬರ ಪತ್ನಿ ನಲ್ಲಮ್ಮ
ಯುಎಇ ಯ ಗಮ್ಮತ್ ಕಲಾವಿದೆರ್ ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟಟೈನ್ಮೆಂಟ್ ಸಹಯೋಗದಲ್ಲಿ ಹವ್ಯಾಸಿ ತುಳು ರಂಗ ನಾಟಕ ತಂಡವು ಪ್ರಸಿದ್ಧ ಬರಹಗಾರ, ಚಲನಚಿತ್ರ ಮತ್ತು ತುಳು ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಖ್ಯಾತ ಸಾಹಿತಿಗಳು ಬರೆದ ತುಳು ಹಾಸ್ಯ ಮತ್ತು ಸಾಮಾಜಿಕ ನಾಟಕ ‘ಕುಟುಂಬ’ ಪ್ರದರ್ಶನ ಕಂಡಿತು. ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟರ್ಟೈನ್ಮೆಂಟ್ ಸಹಯೋಗದಲ್ಲಿ ಯಶಸ್ವಿಯಾಗಿ ಕುಟುಂಬ ನಾಟಕವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ
ಎಡಪಂಥೀಯ ಚಿಂತಕರೂ, ಪ್ರಗತಿಪರ ಚಿಂತಕರ ವೇದಿಕೆಯ ಅಧ್ಯಕ್ಷರೂ,ಜಿಲ್ಲಾ ವಿಚಾರವಾದಿ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆಯ ಸಕ್ರಿಯ ಸದಸ್ಯರೂ,ಮೆಸ್ಕಾಂನ ನಿವ್ರತ್ತ ಹಿರಿಯ ಅಧಿಕಾರಿಗಳಾದ ಐ.ಎ.ಪ್ರಸನ್ನ (80ವರ್ಷ)ರವರು ಇಂದು(21-09-2022)ಅಲ್ಪ ಕಾಲದ ಅಸೌಖ್ಯದಿಂದಾಗಿ ನಗರದ ಖಾಸಗೀ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ಚಿಂತನೆಯಿಂದ ಪ್ರಭಾವಿತರಾದ ಪ್ರಸನ್ನರವರು, ತನ್ನ ವಿದ್ಯಾರ್ಥಿ ಜೀವನದಲ್ಲಿ ಪ್ರಗತಿಪರ ವಿಧ್ಯಾರ್ಥಿ
ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ವ್ಯತ್ಯಯವಾಗಿದೆ. ಟಿಪ್ಪರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲೆಲ್ಲಾ ಜಲ್ಲಿಕಲ್ಲುಗಳು ಚೆಲ್ಲಿ ಹೋಗಿದ್ದು ಬಳಿಕ ಅದನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಆರಂಭಗೊಂಡಿತು. ಹೊಯ್ಸಳ
ಉಳ್ಳಾಲ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಉಳ್ಳಾಲ ನಗರಸಭೆಯಲ್ಲಿ ಕಾಮಗಾರಿ, ಲೈಸೆನ್ಸ್ , ಡೋರ್ ನಂಬರ್, ತೆರಿಗೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಇಲ್ಲಿನ ಆಡಳಿತ ಪಕ್ಷ ಮತ್ತು ಅಧಿಕಾರಿಗಳು ಬೇಕಾಬಿಟ್ಟಿ ಆಡಳಿತ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು ನಡೆಯುತ್ತಿದೆ. ಅನುದಾನ ಬಿಡುಗಡೆ ಸಂದರ್ದಲ್ಲೂ ತಾರತಮ್ಯ ನೀತಿಯನ್ನು ಆಡಳಿತ ಮಂಡಳಿ ಅನುಸರಿಸುತ್ತಿದೆ .




























