Home Posts tagged #v4news karnataka (Page 134)

ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದಿನ ಪೂರ್ತಿ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದಿದ್ದರು. ಆದರೆ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ

ಕರ್ನಾಟಕ ರಾಜ್ಯ ರೈತಸಂಘ : ಪಾಣೆಮಂಗಳೂರು ಗ್ರಾಮ ರೈತ ಘಟಕ ರಚನೆ ಕುರಿತಾಗಿ ಪೂರ್ವಭಾವಿ ಸಭೆ

ಪಾಣೆಮಂಗಳೂರು ಗ್ರಾಮ ರೈತ ಘಟಕ ರಚನೆ ಕುರಿತಾಗಿ ದಿನಾಂಕ 06-09-2022ರ ಮಂಗಳವಾರ ಮೇಲ್ಕಾರಿನ ಬಿರ್ವ ಸಂಕೀರ್ಣದ ಸಭಾಭವನದಲ್ಲಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತುರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕಿರಣ್ ಪುಣಚ ಪ್ರಾಸ್ತವಿಕವಾಗಿ ಮಾತಾನಾಡಿ ರೈತಸಂಘದ ಹುಟ್ಟು ,ಸೈದ್ಧಾಂತಿಕ ಹಿನ್ನೆಲೆ, ವೈಚಾರಿಕತೆ, ಮತ್ತು ಮುಂದಿನ ಗುರಿಗಳ

ಬೆಳ್ಳಾರೆ : ಮನೆಗೆ ಬೆಂಕಿ ಬಿದ್ದು ಮನೆ ಯಜಮಾನ ಜೀವಂತ ದಹನ

ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ ಸುಧಾಕರರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು

ಸುಬ್ರಹ್ಮಣ್ಯ: ಕುಲ್ಕುಂದಲ್ಲಿ ರಸ್ತೆ ಕಾಮಗಾರಿಗೆ ಸಚಿವ ಅಂಗಾರರಿಂದ ಗುದ್ದಲಿ ಪೂಜೆ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08

ದುಬೈನಲ್ಲಿ ಈ-ಮಣ್ಣು ಚಲನಚಿತ್ರ ಪ್ರದರ್ಶನ

ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಈ ಚಲನಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಶಿವಧ್ವಜ್ ಶೆಟ್ಟಿ ನಿರ್ದೇಶಿಸಿದ್ದು, ದುಬೈನ ಅನಿವಾಸಿ ಕನ್ನಡಿಗ ಈಶ್ವರಿದಾಸ್ ಶೆಟ್ಟಿ ನಿರ್ಮಿಸಿದ್ದಾರೆ. ಈ ಚಲನಚಿತ್ರದ ಕನ್ನಡ ಭಾಷೆ ಮತ್ತು ಲಾಭ ರಹಿತ ಪ್ರದರ್ಶನಕ್ಕೆ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದಾಗ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಿದಂತ್ತಾಗುತ್ತದೆ. ಅಲ್ಲದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್

ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆಗೆ ಭರತನಾಟ್ಯದಲ್ಲೂ ಸೈ ಎನಿಸಿಕೊಂಡ ವೆನಿಲ್ಲಾ

ಬಂಟ್ವಾಳ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಪ್ರತಿಭೆಗಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಬಲು ವಿರಳ. ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆ ಜೊತೆಗೆ ಭರತನಾಟ್ಯದಲ್ಲೂ ಪ್ರವೀಣ್ಯತೆ ಪಡೆದುಕೊಂಡ ಅಪರೂಪದ ಬಹುಮುಖ ಪ್ರತಿಭೆ ವೆನಿಲ್ಲಾ ಮಣಿಕಂಠ. ಜೂಡೋದಲ್ಲಿ ಬ್ಲಾಕ್‍ಬೆಲ್ಟ್ ಪಡೆದು ರಾಷ್ಟ್ರೀಯ ಮಟ್ಟದ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದುಕೊಂಡಿರುವ ಬಂಟ್ವಾಳದ ಈ ಪ್ರತಿಭೆ ಭರತನಾಟ್ಯದಲ್ಲೂ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಬೆಳ್ಳಂಬೆಳಗ್ಗೆ ಸುಳ್ಯ, ಪುತ್ತೂರಿನ 32 ಸ್ಥಳಗಳಿಗೆ ಎನ್. ಐ. ಎ.‌ ದಾಳಿ.

ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ‌ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.

ಉಡುಪಿ:ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಶಿಕ್ಷಕರಿಗೆ ಗೌರವ ಪುರಸ್ಕಾರ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು. ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್ (ಶಿಕ್ಷಣ ಹಾಗೂ ರಂಗಭೂಮಿ) , ರಾಜೇಂದ್ರ ಭಟ್ ಕೆ (ಶಿಕ್ಷಣ ಹಾಗೂ ನಿರೂಪಣೆ ) , ಪ್ರೊ. ನಾರಾಯಣ ಎಂ.

ಆದಿವಾಸಿ‌ ಯುವಕನೊಬ್ಬನ ದಾರುಣ ಕತೆ

ಇದು ಶ್ರೀನಿವಾಸ್ ಗೌಡ್ಲು (ಮಲೆಕುಡಿಯ) ಎಂಬ ಆದಿವಾಸಿ‌ ಯುವಕನೊಬ್ಬನ ದಾರುಣ ಕತೆ ಮಾತ್ರ ಅಲ್ಲ. ಆರೋಗ್ಯ ಕ್ಷೇತ್ರ ವ್ಯಾಪಾರೀಕರಣ ಗೊಂಡಿರುವ‌ ಸಂದರ್ಭದಲ್ಲಿ‌ ಬಡವರು, ಆರ್ಥಿಕವಾಗಿ ಸಬಲರಲ್ಲ ಎಲ್ಲರ ವ್ಯಥೆ. ಶ್ರೀನಿವಾಸ ಗೌಡ್ಲು ಎಂಬ ಆದಿವಾಸಿ ಮಲೆಕುಡಿಯ ಸಮುದಾಯಕ್ಕೆ ಸೇರಿದ ಶೃಂಗೇರಿ ಸಮೀಪದ ಹೊರನಾಡು ನಿವಾಸಿ ತೋಟಗಳಲ್ಲಿ‌ ದುಡಿಯುವ ಕೂಲಿಯಾಳು. 34 ವರ್ಷದ ಇವರು ಕುಟುಂಬದ ಸಂಕಷ್ಟಗಳ ಕಾರಣಕ್ಕಾಗಿ ಇನ್ನೂ ಮದುವೆಯಾಗಿಲ್ಲ.ಮನೆಯಲ್ಲಿ ಕೂಲಿ ಕೆಲಸ ಮಾಡುವ ವೃದ್ದ