Home Posts tagged #v4news karnataka (Page 136)

ಎಸ್‍ಸಿಡಿಸಿಸಿ ಬ್ಯಾಂಕ್‍ಗೆ ಸಹಕಾರಿ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿ

ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್‍ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಪ್ರಥಮ ಪ್ರಶಸ್ತಿ 20ನೇ ಭಾರಿಗೆ ಲಭಿಸಿದೆ.ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ

ಬಂದರು ಮೂಲಕ ರಫ್ತು ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ : ಪ್ರಧಾನಿ ಮೋದಿ

ಬಂದರು ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು. ಸಾಗರ ಪ್ರವಾಸೋದ್ಯಮಕ್ಕೆ ಮಂಗಳೂರು ಬಂದರು ಅತ್ಯುತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ವರ್ಷದಲ್ಲಿ 15 ಸಾವಿರ ವಿದೇಶಿ ಪ್ರವಾಸಿಗರು ಮಂಗಳೂರು ಬಂದರು ಮೂಲಕ ಬಂದಿರುತ್ತಾರೆ. ಸಾಗರ ಪ್ರವಾಸೋದ್ಯಮದ ಪ್ರಯೋಜನ ಹಾಗೂ ಲಾಭವನ್ನು ಟ್ಯಾಕ್ಸಿ, ಆಟೋ ಚಾಲಕರು ಸಣ್ಣ ವ್ಯಾಪಾರಿಗಳು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು. ವಿಸ್ತಾರವಾದ ಕರಾವಳಿಯನ್ನು ಹೊಂದಿರುವ ನಮ್ಮ

ಪ್ರಧಾನಿ ಮೋದಿ ಅವರಿಂದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ

ಕಂಟೇನರ್‍ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ ನೀರಿನ ಸಂರಕ್ಷಣೆ, 30 ಎಂಎಲ್‍ಡಿ ಲವಣ ನೀರು ಶುದ್ಧೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ. ಎನ್‍ಎಂಪಿಯಲ್ಲಿ ಸಮಗ್ರ ಎಲ್‍ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಸ್ಥಾಪನೆ. 2,200 ಜನರಿಗೆ ಉದ್ಯೋಗವಕಾಶಗಳು,

ರೈತರಿಗೆ ಮತ್ತು ಮೀನುಗಾರರಿಗೆ ಸೌಲಭ್ಯ ವಿತರಿಸಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಮತ್ಸ್ಯಾ ಸಂಪಾದನಾ ಯೋಜನೆಯ ಆಳ ಸಮುದ್ರ ಮೀನುಗಾರಿಕೆಯ ಬೋಟ್ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವೇದಿಕೆಯಲ್ಲಿ ವಿತರಿಸಿದರು.

ಮಂಗಳೂರು ಮಲ್ಲಿಗೆ, ಪರಶುರಾಮನ ಸ್ಮರಣಿಕೆಯೊಂದಿಗೆ ಸ್ವಾಗತ

ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ ರತ್ನ ಮಾಲೆ ಮತ್ತು ಉಡುಪಿ ಶ್ರೀಕೃಷ್ಣನ ಸ್ಮರಣಿಕೆ ನೀಡಿ ಸ್ವಾಗತಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ಮಲ್ಲಿಗೆ ಮಾಲಾರ್ಪಣೆ ಮಾಡಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಪರಶುರಾಮನ ಸ್ಮರಣಿಕೆಯನ್ನು ನೀಡಿ

ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ : ನವಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಪ್ರಧಾನಿ ನರೇಂದ್ರ ಮೋದಿ ಅವರು, ನವಮಂಗಳೂರಿನ ಬಂದರಿನಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೋನೊವಾಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹರ್ದಿಪ್ ಸಿಂಗ್ ಪುರಿ, ಶ್ರೀಪಾದ್ ಯಶೋನಾಯಕ್, ಸಂತುನು ಠಾಕೂರ್

ಪೆರುವಾಜೆಯಲ್ಲಿ ಅಕ್ಷಯ ಫಾರ್ಮ್ ಪ್ರೆಶ್ ಚಿಕನ್ ಸೆಂಟರ್ ಶುಭಾರಂಭ

ಸುಳ್ಯ ತಾಲೂಕಿನ ಬೆಳ್ಳಾರೆಯ ಪೆರುವಾಜೆಯಲ್ಲಿ ಯತೀಶ್ ಕುಮಾರ್ ಪೆಲತಡ್ಕ ಮಾಲಕತ್ವದ ಅಕ್ಷಯ ಫಾರ್ಮ್ ಪ್ರೆಶ್ ಚಿಕನ್ ಸೆಂಟರ್ ಶುಭಾರಂಭಗೊಂಡಿತು. ಇಲ್ಲಿ ಬಾಯ್ಲರ್, ಟೈಸನ್ ಮತ್ತು ನಾಟಿ ಕೋಳಿಗಳು ರಖಂ ಮತ್ತು ಚಿಲ್ಲರೆ ವ್ಯಾಪಾರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೆಚ್ಚಿನ

ಮೋದಿ ಮಂಗಳೂರು ಭೇಟಿ ಹಿನ್ನಲೆ: ಪಡುಬಿದ್ರಿಯಿಂದ ಘನ ವಾಹನಗಳಿಗೆ ಪ್ರವೇಶ ನಿಷೇಧ

ಉಡುಪಿ ಕಡೆಯಿಂದ ಮಂಗಳೂರು ಕಡೆ ಪ್ರಯಾಣಿಸುವ ಘನ ವಾಹನಗಳ ಸಹಿತ ಗೂಡ್ಸ್ ವಾಹನಗಳಿಗೆ ಪ್ರವೇಶ ನಿರಾಕರಿಸಿ ಕಾರ್ಕಳ ರಸ್ತೆಯಾಗಿ ಪ್ರಯಾಣ ಮುಂದುವರಿಸಲು ಪೊಲೀಸರು ಸೂಚನೆ ನೀಡಿದ್ದರೂ ಸುತ್ತು ಬಳಸಿ ಹೋಗುವುದನ್ನು ತಪ್ಪಿಸಲು ಬ್ರಹತ್ ಟ್ರಕ್ ಗಳು ಕಾರ್ಕಳ ರಸ್ತೆಯುದ್ಧಕ್ಕೂ ಹೆದ್ದಾರಿಗಂಟಿಕೊಂಡೇ ನಿಂತಿರುವುದರಿಂದ ಮತ್ತೊಂದು ಸಮಸ್ಯೆ ಸೃಷ್ಠಿಗೆ ಸಿದ್ದತೆ ನಡೆಸಿದಂತ್ತಿದೆ.ಮುಂಜಾನೆ ಆರು ಗಂಟೆಯಿಂದ ಸಂಜೆ ಆರರ ವರಗೆ ಈ ಪ್ರಕೃಯೆ ನಡೆಯಲಿರುವುದರಿಂದ ಪಡುಬಿದ್ರಿ

ಬಂಟ್ವಾಳ: ಛತ್ರಪತಿ ಶಿವಾಜಿ ವೃತ್ತ ಉದ್ಘಾಟನೆ

ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ ಛತ್ರಪತಿ ಶಿವಾಜಿ ವೃತ್ತ ಉದ್ಘಾಟನಾ ಸಮಾರಂಭ ನೆರವೇರಿತು. ನೂತನ ಛತ್ರಪತಿ ಶಿವಾಜಿ ವೃತ್ತವನ್ನು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಉದ್ಘಾಟಸಿ, ದೀಪ ಪ್ರಜ್ವಲಿಸಿದರು. ಈ ಸಂದರ್ಭ ಬಜರಂಗದಳ

ಮೂಡುಬಿದರೆ: ಮನೆಗೆ ನುಗ್ಗಿ ಮಹಿಳೆಗೆ ತಲವಾರು ಝಳಪಿಸಿ ಕರಿಮಣಿ ಸರ ದರೋಡೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಮುಸುಕುಧಾರಿ ವ್ಯಕ್ತಿಗಳಬ್ಬರು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ದುಡಿಯುತ್ತಿರುವ ಕಮಲ ಶೆಟ್ಟಿ ದರೋಡೆಗೊಳಗಾದ ಮಹಿಳೆ ಇವರ ಇಬ್ಬರು ಗಂಡು ಮಕ್ಕಳು ಮೃತಪಟ್ಟಿದ್ದು, ಪತಿ ಕಳೆದ ವರ್ಷ ನಿಧನ ಹೊಂದಿದ್ದರು.