Home Posts tagged #v4news karnataka (Page 148)

ಡಾ.ಬಿ.ಯಶೋವರ್ಮ ಶಿಕ್ಷಣ ವಲಯದ ಪ್ರೇರಕ ಶಕ್ತಿ: ಡಾ. ಸತೀಶ್ಚಂದ್ರ ಎಸ್

ಉಜಿರೆ: ಕಲಾಭಿಮಾನಿಯಾಗಿ, ಕಲಾ ಪೋಷಕರಾಗಿದ್ದ ಡಾ.ಬಿ.ಯಶೋವರ್ಮ ಅವರು ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಚಿಂತನೆಗಳು ನಮ್ಮೆಲ್ಲರ ಪ್ರೇರಕ ಶಕ್ತಿ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಹೇಳಿದರು.     ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಡಾ.ಬಿ.ಯಶೋವರ್ಮ ಅವರ

ಶಂಕಿತ ನಕ್ಸಲ್ ವಾದಿಗಳ ಪ್ರಕರಣದ ತನಿಖೆ ಸೆಕ್ಷನ್ ನ್ಯಾಯಾಲಯಕ್ಕೆ

ಕುಂದಾಪುರ : ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಶಂಕಿತ ನಕ್ಸಲ್ ವಾದಿಗಳಾದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರ ಮೇಲಿನ 7 ಪ್ರಕರಣಗಳ ವಿಚಾರಣೆಯನ್ನು ಸೆಕ್ಷನ್ ನ್ಯಾಯಾಲಯಕ್ಕೆ ವರ್ಗಾಯಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ್ ಯಡಿಯಾಳ ಕೊಲೆ ಪ್ರಕರಣವೂ ಸೇರಿದಂತೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 11 ಪ್ರಕರಣಗಳಿದ್ದು, ಶಂಕರನಾರಾಯಣ ಠಾಣಾ ವ್ಯಾಪ್ತಿಯ 6 ಹಾಗೂ ಕೊಲ್ಲೂರು ಠಾಣೆ

ಸೋಲಿನ ಕಲಿಕೆಯಿಂದ ಗೆಲುವು ನಿಶ್ಚಿತ- ಮುರಳಿ ಕೃಷ್ಣ

ಉಜಿರೆ: ಜೀವನದಲ್ಲಿ ಎಲ್ಲಾ ರೀತಿಯ ಅನುಭವಗಳು ಅಗತ್ಯ. ಅನುಭವಗಳ ಕೊರತೆ ಇದ್ದಾಗ ಮಾತ್ರ ಸೋಲು ಎದುರಾಗುತ್ತದೆ. ಆದರೆ, ಅಂತಹ ಸೋಲುಗಳಿಂದ ಕಲಿತು ಜೀವನಕ್ಕೆ ಅಳವಡಿಸಿಕೊಳ್ಳುವುದು ಬಹಳಷ್ಟಿದೆ ಎಂದು, ಅಮೇಜಾನ್ ವೆಬ್ ಸರ್ವಿಸ್ ಸಂಸ್ಥೆಯ ಹಿರಿಯ ಪ್ರಧಾನ ಅಭಿಯಂತರ, ಮುರಳಿ ಕೃಷ್ಣ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಸಭಾಂಗಣದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಬಿ.ವೋಕ್

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಚರ್ಚಾ ಸ್ಪರ್ಧೆ : ಪುತ್ತೂರಿನ ವಿವೇಕಾನಂದ ಕಾಲೇಜಿಗೆ ಪ್ರಥಮ

ಅ. 17ರಂದು ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಪೂಜ್ಯ ಶ್ರೀ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯ ಪರ – ವಿರೋಧ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು ಪ್ರಥಮ ಸ್ಥಾನಪಡೆದುಕೊಂಡಿದೆ. ದ್ವೀತಿಯ ಸ್ಥಾನವನ್ನು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜು ಗಳಿಸಿಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ಸೆಂಟ್ಫಿಲೋಮಿನಾ ಕಾಲೇಜಿನ ಶ್ರೀದೇವಿ ಕೆ ಪಡೆದುಕೊಂಡರು.ಸ್ಪರ್ಧೆಯು ಆಕರ್ಷಕ ಬಹುಮಾನವನ್ನು ಒಳಗೊಂಡಿದ್ದು,

“ಅಬತರ” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ನಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಬಹುನಿರೀಕ್ಷಿತ “ಅಬತರ” ತುಳು ಸಿನಿಮಾ ಗುರುವಾರ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಚಿತ್ರ ನಿರ್ಮಾಪಕನಿಖಿಲ್ ಕೀರ್ತಿ ಸಾಲ್ಯಾನ್ ಹಾಗೂ ಸಹ ನಿರ್ಮಾಪಕರಾದ ವೀರಾಜ್ ಅತ್ತಾವರ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, “ತುಳು ರಂಗಭೂಮಿ ಇಂದು

ವೆಸ್ಟ್ ಕೋಸ್ಟ್ ಉತ್ಸವ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ

ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಹೆಸರುವಾಸಿಯಾದ ಹೀರೋ ಕಂಪೆನಿಯ ಅಧಿಕೃತ ಶೋರೂಂ ಆದ ವೆಸ್ಟ್ ಕೋಸ್ಟ್ ಮೋಟಾರ್ಸ್‍ನಲ್ಲಿ ನಿರಂತರವಾಗಿ ಒಂದು ತಿಂಗಳ ಕಾಲ ವೆಸ್ಟ್‍ಕೊಸ್ಟ್ ಉತ್ಸವವನ್ನು ಹಮ್ಮಿಕೊಂಡಿದ್ದರು. ದ್ವಿಚಕ್ರ ವಾಹನ ಖರೀದಿರಾರಿಗೆ ಲಕ್ಕಿ ಕೂಪನನ್ನು ಆಯೋಜಿಸಿದ್ದು, ಎರಡನೇ ವಾರದ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಲಕ್ಕಿ ಕೂಪನ್ ವಿಜೇತರಿಗೆ ವಿಶೇಷ ಬಹುಮಾನಗಳನ್ನು ವಿತರಿಸುತ್ತಿದ್ದಾರೆ. ಇನ್ನು ಎರಡನೇ ವಾರದ ಲಕ್ಕಿ ಡ್ರಾ

ತಲಪಾಡಿ : ಸ್ಥಳೀಯರಿಗೆ ಶಾಪವಾದ ರಸ್ತೆ ಸಮಸ್ಯೆ

ಮಂಜೇಶ್ವರ : ತಪಾಡಿಯಿಂದ ಕಾಸರಗೋಡು ತನಕದ ರಾ.ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಬೃಹತಕಾರದ ಹೊಂಡಗಳನ್ನು ಜಲ್ಲಿ ಕಲ್ಲು ಹಾಗೂ ಜಲ್ಲಿ ಹುಡಿಯನ್ನು ಹಾಕಿ ಮುಚ್ಚುತ್ತಿರುವುದು ಪ್ರಯಾಣಿಕರಿಗೂ ಸ್ಥಳೀಯರಿಗೂ ಶಾಪವಾಗಿ ಪರಿಣಮಿಸಿದೆ.ರಾಷ್ಟ್ರೀಯ ಹೆದ್ದಾರಿ ಪುನರ್ ನವೀಕರಣದ ಭಾಗವಾಗಿ ರಸ್ತೆ ನಿರ್ಮಾಣ ನಡೆಯುತ್ತಿರುವ ಭಾಗಗಳಲ್ಲಿ ಮಳೆಗಾಲದಲ್ಲಿ ಮಳೆ ನೀರು ಕಟ್ಟಿ ನಿಂತು ರಸ್ತೆ ಬಹುತೇಕ ಭಾಗಗಳಲ್ಲಿ ಕುಸಿದು ಹೋಗಿತ್ತು. ರಾ.ಹೆದ್ದಾರಿ ನಿರ್ಮಾಣದ ಕಾಮಗಾರಿಯಲ್ಲಿ ಹಲವು

ಶ್ರೀ ಹನುಮಾನ್ ಮಂದಿರ ಎಡಪದವು ‘ಸ್ವಾತಂತ್ರ್ಯ ಅಮೃತ ಮಹೋತ್ಸವ’ ಆಚರಣೆ

ಶ್ರೀ ಹನುಮಾನ್ ಮಂದಿರ (ರಿ) ಎಡಪದವು ಇದರ ಮುಂದಾಳುತ್ವದಲ್ಲಿ ಸ್ಥಳೀಯ ಶಾಲಾ- ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ವನ್ನು ಅತ್ಯಂತ ವೈಭವೋಪೇತ ವಾಗಿ ಎಡಪದವಿನಲ್ಲಿ ಆಚರಿಸಲಾಯಿತು. ಎಡಪದವು ಗ್ರಾಮದ ಕಣ್ಣೋರಿ ಹಿರಿಯ ಪ್ರಾಥಮಿಕ ಶಾಲೆ, ಬ್ರಿಂಡೇಲ್ ಹಿರಿಯ ಪ್ರಾಥಮಿಕ ಶಾಲೆ, ಎಡಪದವು ಹಿರಿಯ ಪ್ರಾಥಮಿಕ ಶಾಲೆ, ಬೋರುಗುಡ್ಡೆ ಹಿರಿಯ ಪ್ರಾಥಮಿಕ ಶಾಲೆ, ಸ್ವಾಮೀ ವಿವೇಕಾನಂದ ಪ್ರೌಡ ಶಾಲೆ, ಸ್ವಾಮೀ ವಿವೇಕಾನಂದ ಪದವಿ ಪೂರ್ವ

ರಾ.ಹೆ. ಹೊಂಡ ಮುಚ್ಚಲು ಸೂಕ್ತ ಕ್ರಮ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳನ್ನು ಮುಚ್ಚಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸೂಚಿಸಿದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಕೆಲಸವನ್ನ ಆರಂಭಿಸಿದ್ದಾರೆ. ಸುರತ್ಕಲ್ ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಸಭೆಯನ್ನು ನಡೆಸಿದ ಡಾ. ಭರತ್ ಶೆಟ್ಟಿ ವೈ ಅವರು ಇದೇ ವೇಳೆ ಗೈಲ್ ಸಂಸ್ಥೆ ಹಾಗೂ ಜಲಸಿರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಿಸ್ ರಸ್ತೆಯಲ್ಲಿ ಅಗೆದು ಹಾಕಿದ

ಕಿನ್ನಿಗೋಳಿ : ರಾಷ್ಟ್ರೀಯ ಕೈಮಗ್ಗ ಸಪ್ತಾಹ : ಹಿರಿಯ ನೇಕಾರರಿಗೆ ಪ್ರಶಸ್ತಿ ,ಖಾದಿ, ಕೈಮಗ್ಗ ಬಳಸಿ : ರಾಜ್ಯಸಭಾ ಸದಸ್ಯ ಅನಿಲ್ ಪ್ರಸಾದ್ ಹೆಗ್ಡೆ ಮನವಿ

ಕೈಮಗ್ಗದ ಸೀರೆಗಳನ್ನು ಹಾಗೂ ಖಾದಿ ವಸ್ತ್ರಗಳನ್ನು ಧರಿಸಲು ಜನತೆ ಹೆಚ್ಚಿನ ಒಲವು ತೋರಿಸಬೇಕು, ಈ ರೀತಿ ಮಾಡಿದರೆ ಮಾತ್ರ ಖಾದಿ ಮತ್ತು ಕೈಮಗ್ಗವನ್ನು ಉಳಿಸಲು ಸಾಧ್ಯ , ಈ ನಿಟ್ಟಿನಲ್ಲಿ ಉಡುಪಿ ಸೀರೆಯನ್ನು ಜನಪ್ರಿಯತೆಗೊಳಿಸಿದ ಕದಿಕೆ ಟ್ರಸ್ಟ್‍ನ ಕೆಲಸ ಶ್ಲಾಘನೀಯವಾದುದು ಎಂದು ಬಿಹಾರದಿಂದ ರಾಜ್ಯಸಭೆಗೆ ಆಯ್ಕೆಯಾದ ಕನ್ನಡಿಗ ರಾಜ್ಯಸಭಾ ಸದಸ್ಯ ಅನಿಲ್ ಪ್ರಸಾದ್ ಹೆಗ್ಡೆ ಅವರು ಹೇಳಿದರು.ಮಂಗಳೂರು ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸಂಘದಲ್ಲಿ ಕದಿಕೆ