ಮಂಗಳೂರಿನ ಕೊಟ್ಟಾರದ ಮಾಲೇಮಾರ್ ದೇರೆಬೈಲ್ ಮರಿಯನ್ ಸೊಲೇನ್ನ ಕಟ್ಟಡದಲ್ಲಿ ನೈಸರ್ಗಿಕ ಮರದ ಗಾಣದ ಎಣ್ಣೆ ತಯಾರಿ, ಮಾರಾಟ ಮತ್ತು ಸಾವಯವ ಉತ್ಪನ್ನಗಳ ಮಳಿಗೆ ವೃದ್ಧಿ ಇದರ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಶಾಸಕ, ವಿಧಾನಸಭೆ ವಿಪಕ್ಷ ಉಪನಾಯಕರಾದ ಯು.ಟಿ.ಖಾದರ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಪಾರಂಪರಿಕ ಮತ್ತು ಸಾಂಪ್ರದಾಯಿಕ ಆಹಾರ
ಬಾಲಕನಿಗೆ ತನ್ನ ಹುಟ್ಟುಹಬ್ಬವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಬೇಕೆಂಬ ಮಹದಾಸೆಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಜನಕೀಯ ಪೊಲೀಸರು ಈಡೇರಿಸಿದ್ದಾರೆ. ವರ್ಕಾಡಿಯ ಅಝೀಝ್ ಕಲ್ಲೂರು ಹಾಗೂ ಆರಿಫಾ ದಂಪತಿಯ ಪುತ್ರನಾಗಿರುವ ಈತ. ವರ್ಕಾಡಿ ಧರ್ಮನಗರ ಮಣವಾಠಿ ಬೀವಿ ಆಂಗ್ಲಮಾಧ್ಯಮ ಶಾಲೆಯ ಯುಕೆಜಿ ವಿದ್ಯಾರ್ಥಿ ಆಶೀಲ್ ತನ್ನ 6ನೇ ವರ್ಷದ ಹುಟ್ಟುಹಬ್ಬವನ್ನು ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ ಕೇಕ್ ತುಂಡರಿಸಿ, ಸಿಹಿತಿಂಡಿ ಹಂಚಿ ಆಚರಿಸಿದನು. ತನ್ನ ಹುಟ್ಟುಹಬ್ಬವನ್ನು
ಕುಂದಾಪುರ: ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ ಸಹಿತ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಮಧ್ಯಾಹ್ನದ ಬಳಿಕ ಕುಂದಾಪುರಕ್ಕೆ ಬಂದಿದ್ದ ಅವರನ್ನು
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ , ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಹಾಗೂ ರಂಗಸಂಗಾತಿ ಮಂಗಳೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ಹಾಗೂ ಕನ್ನಡ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ ಕೆ ಮುದ್ದುಕೃಷ್ಣ ಅವರ ಆತ್ಮಕಥನ ‘ಹಾಡು ಹಿಡಿದ ಜಾಡು ‘ ಕೃತಿ ಅನಾವರಣವು ಶನಿವಾರ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಲೋಕಾರ್ಪಣೆಗೊಂಡಿತು. ಕೃತಿಯನ್ನು ಚಲನಚಿತ್ರ ನಿರ್ದೇಶಕ ಹಾಗೂ
ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ , ಕಾರ್ಯದರ್ಶಿ ಸುಮಲತಾ ಸುನಿಲ್ , ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಿ ಅರ್ನಾಡಿ, ಕಾರ್ಯದರ್ಶಿಯಾಗಿ ಸುಮಲತಾ ಸುನಿಲ್, ಜತೆ ಕಾರ್ಯದರ್ಶಿಯಾಗಿ ಯಶೋಧಾ, ಕೋಶಾಧಿಕಾರಿಯಾಗಿ ರಾಗಿಣಿ ಆಯ್ಕೆಯಾದರು. ನಿರ್ದೇಶಕರಾಗಿ ಪ್ರೇಮ ಕೊಲ್ಯ, ವನಿತಾ ಸಾರಕೆರೆ, ಸುಜಾತ ಪದ್ಮನಾಭ, ವೀಣಾ ಕೊಲ್ಯ,
ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ ,ವೈದ್ಯಕೀಯ, ಶೈಕ್ಷಣಿಕ ನೆರವು, ಹಾಗೂ ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮ ನಡೆಯಲಿದ್ದು, ಸೋಮವಾರ ದ.ಕ.ಜಿಲ್ಲಾ ಪಂ. ಇರಿಯ ಪ್ರಾಥಮಿಕ ಶಾಲೆ ಬಗಂಬಿಲದಲ್ಲಿ ನಡೆಯಿತು. ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮಕ್ಕೆ ಶಾಸಕ ಯು.ಟಿ.ಖಾದರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ
ಉಡುಪಿ ಆ.7, ಉಡುಪಿ ನಗರದ ಪುತ್ತೂರಿನಲ್ಲಿ ಕಳೆದ ಎರಡು ದಿನಗಳಿಂದ ಸಾರ್ವಜನಿಕರ ಮನೆಗಳಿಗೆ ರಾತ್ರಿ ಹೊತ್ತು ಪ್ರವೇಶ ಮಾಡಲು ಪ್ರಯತ್ನಿಸುವ ಹಾಗೂ ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಯುವಕನನ್ನು ವಿಶು ಶೆಟ್ಟಿ ವಶಕ್ಕೆ ಪಡೆದು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ಆ.7ರ ರಾತ್ರಿ ನಡೆದಿದೆ. ರಕ್ಷಣಾ ಕಾರ್ಯದಲ್ಲಿ ಪುತ್ತೂರಿನ ತೌಫಿಕ್ ಸಹಕರಿಸಿದ್ದಾರೆ. ಯುವಕನು ತನ್ನ ಹೆಸರು ಬಸವನ್ ತಂದೆ ನಂಜುಂಡ ತಾಯಿ ರುದ್ರಮ್ಮ ಹಾಗೂ ಮನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್
ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ ನಡೆಸಲಾಯಿತು. ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಈ ಬಾರಿ ನವರಾತ್ರಿ ಉತ್ಸವವನ್ನು ದಸರಾ ರೀತಿಯಲ್ಲಿ
ಕನ್ನಡ ಜಿಲ್ಲೆಯಲ್ಲಿ ಕಡೆಗೂ ರಾತ್ರಿ ನಿರ್ಬಂಧ ವಾಪಸ್ , ಮದ್ಯದಂಗಡಿ ಸೇರಿದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ನಿರ್ಬಂಧ ಮುಕ್ತ, ರಾತ್ರಿ 9 ಗಂಟೆ ಬಳಿಕದ ನಿರ್ಬಂಧ ಆದೇಶ ಹಿಂಪಡೆದ ದ.ಕ. ಜಿಲ್ಲಾಧಿಕಾರಿ
ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ ನಡೆಯುವುದು ಸಾರ್ವಜನಿಕ ಕಟ್ಟದಪ್ಪ(ಕಟಾಹಪೂಪ)ಸೇವೆ. ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬ ಪ್ರದೇಶದಲ್ಲಿ




























