Home Posts tagged #v4news karnataka (Page 170)

ಮಂಗಳೂರಲ್ಲಿ ಪಬ್ ಭಜರಂಗದಳ ದಾಳಿ ವಿಚಾರ ಯಾವುದೇ ದೈಹಿಕ ಹಲ್ಲೆ ನಡೆದಿಲ್ಲ ಪೊಲೀಸ್ ಕಮೀಷನರ್ ಶಶಿಕುಮಾರ್ ಹೇಳಿಕೆ

ಪಬ್ ಮೇಲೆ ಬಜರಂಗದಳ ದಾಳಿ ಘಟನೆ ಸಂಬಂಧಿಸಿ ಹೇಳಿಕೆ ನೀಡಿರುವ ಪೆÇಲೀಸ್ ಕಮಿಷನರ್ ಶಶಿಕುಮಾರ್, ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಅಪ್ರಾಪ್ತ ಯುವಕ- ಯುವತಿಯರು ಇದ್ದರೆಂದು ಆಕ್ಷೇಪ ಎತ್ತಿದ್ದರು ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.ಇಂದು ಬೆಳಗ್ಗೆ ಬಲ್ಮಠದ ಪಬ್ ಆವರಣಕ್ಕೆ ಬಂದು ಪರಿಶೀಲನೆ ನಡೆಸಿದ ಕಮಿಷನರ್‍ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗೆ ಖಂಡನೆ : ಕಾಪುವಿನಲ್ಲಿ ಎಸ್‍ಡಿಪಿಐ ವತಿಯಿಂದ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್‍ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು. ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್ ಹಾಕಿದ್ದಾರೆ. ಹಾಲು, ಮಜ್ಜಿಗೆ, ಮೊಸರಿಗೆ ಜಿಎಸ್‍ಟಿ ಹಾಕಿ ಜನರನ್ನು ಬದುಕದಂತೆ

ಸುಳ್ಯದ ಅರಮನೆ ಗಯಕ್ಕೆ ಬೇಕಾಗಿದೆ ತೂಗು ಸೇತುವೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆ ಗಯ ಎಂಬಲ್ಲಿ ತೂಗು ಸೇತುವೆ ಮುರಿದು ಹೋಗಿದ್ದು ಸಂಚಾರಕ್ಕೆ ತೊಡಕುಂಟಾಗಿ ಅಲ್ಲಿನ ಜನತೆ ಸಂಕಷ್ಟಪಡುತ್ತಿದ್ದಾರೆ. 30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಒಂದು ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಎಷ್ಟು ಕೇಳಿದರು ಸ್ಪಂದನೆ ಇನ್ನೂ ಸಿಕ್ಕಿಲ್ಲ. ಮರ್ಕಂಜ ಮತ್ತು ಅರಂತೋಡು ಗ್ರಾಮಗಳ ನಡುವೆ ಹಂಚಿಹೋಗಿರುವ ಅರಮನೆಗಯದ ನಡುವೆ ಹರಿಯುವ ಹೊಳೆ ಈ ಊರಿನ

ಊರಿನ ಚಿತ್ರಣ ಬದಲಿಸುವ ಸೇತುವೆಗಳು….

ನದಿಗೆ ಅಡ್ಡಲಾಗಿ ಕಟ್ಟುವ ಸೇತುವೆಯೊಂದು ಹೇಗೆ ಊರೊಂದರ ಚಿತ್ರಣವನ್ನೇ ಬದಲಿಸುತ್ತದೆನ್ನುವುದನ್ನು ನಮಗೆ ಅನೇಕ ಬಾರಿ ಊಹಿಸಲೂ ಸಾಧ್ಯವಾಗುವುದಿಲ್ಲ.ಆ ಬದಲಾವಣೆಯಲ್ಲಿ ನಾವೂ ಬದಲಾಗಿ ಬಿಡುತ್ತೇವೆ. ಇಂತಹ ಬದಲಾವಣೆಗಳಾಗುತ್ತವೆ ಎಂದು ತಿಳಿದು ನಾವು ಥ್ರಿಲ್ ಆಗುತ್ತೇವೆ. ಆದರೆ ಬದಲಾವಣೆಗಳು ಘಟಿಸಿ ಊರಿನ ಚಿತ್ರಣ ಬದಲಾದ ಬಳಿಕ ನಮ್ಮೂರು ಹೀಗಿತ್ತು ಎನ್ನುವುದನ್ನು ನಾವು ಬಲು ಬೇಗ ಮರೆತುಬಿಡುತ್ತೇವೆ.ಹಿಂದಿನ ಚಿತ್ರಣಗಳು ಕಾಲಗರ್ಭದಲ್ಲಿ ಅಡಗುತ್ತಿದ್ದಂತೆಯೇ ನಮ್ಮ

ಒಬ್ಬಂಟಿ ವೃದ್ಧೆಯ ಕೊಲೆ ದರೋಡೆ ಪ್ರಕರಣದ ಆರೋಪಿ ವೃದ್ಧೆಯ ಸಂಬಂಧಿಕ ಅಶೋಕ್ ಬಂಧನ

ಬೆಳ್ತಂಗಡಿ : ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ನಿವಾಸಿ ಅಶೋಕ್ (28) ವೃದ್ಧೆಯನ್ನು ಕೊಲೆಗೈದ ಆರೋಪಿ. ಅಶೋಕ್ ಕೊಲೆಯಾದ ಅಕ್ಕು ಅವರ ಪುತ್ರ ಡೀಕಯ್ಯ ಅವರ ಪತ್ನಿಯ ಸಹೋದರಿಯ ಪುತ್ರನಾಗಿದ್ದ. ಈತ ಐಸ್ ಕ್ರೀಂ ವಾಹನದಲ್ಲಿ ಕೆಲಸ ಮಾಡುತ್ತಿದ್ದ.

ಭಾರತೀಯ ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆಯ ಪಿ.ಜಿ.ಡಿ.ಎಂ ಕೋರ್ಸ್ ನ ಘಟಿಕೋತ್ಸವ: ಡಿಜಿಟಲ್ ಆರೋಗ್ಯ ಕ್ಷೇತ್ರದ ಬೆಳವಣಿಗೆ ಅಗಾಧ – ಸೌರಭ್ ಗುಪ್ತಾ

ಬೆಂಗಳೂರು, ಜು, 23; ಆರೋಗ್ಯ ಕ್ಷೇತ್ರ ಅಗಾಧವಾಗಿ ಬೆಳವಣಿಗೆಯಾಗುತ್ತಿದ್ದು, ವಿಶೇಷವಾಗಿ ಡಿಜಿಟಲ್ ಹೆಲ್ತ್ ಕ್ಷೇತ್ರ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಕಿಮ್ಸ್ ಆಸ್ಪತ್ರೆಯ ಕಾರ್ಯನಿರ್ವಹಣಾಧಿಕಾರಿ ಸೌರಭ್ ಗುಪ್ತ ಹೇಳಿದ್ದಾರೆ. ಭಾರತೀಯ ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆಯ ಪಿ.ಜಿ.ಡಿ.ಎಂ ಕೋರ್ಸ್ ನ 2020-22 ರ ಸಾಲಿನ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ಜಾಗತಿಕವಾಗಿ 820 ದಶಲಕ್ಷ ಹೂಡಿಕೆಯಾಗಿದೆ. ಆರೋಗ್ಯ

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ. ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ನಮಿತಾ ಸತೀಶ್ಚಂದ್ರ,ಕುಮಾರಿ ವರ್ಷ ಶೆಟ್ಟಿ ಹಾಗೂ

ಬೆಳ್ತಂಗಡಿ: ಹಲ್ಲೆ ತಡೆಯಲು ಮುಂದಾದ ವ್ಯಕ್ತಿಯೇ ಸಾವು

ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಅವರು ಯುವಕರ ತಂಡದಿಂದ ಹಲ್ಲೆಗೊಳಗಾಗಿ ಮೃತಪಟ್ಟವರು. ಜಾರಪ್ಪ ನಾಯ್ಕ್ ಅವರ

ಕಾಪು : ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ ಬಿದ್ದು, ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಚಾಲಕಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ.

ಕಡಲ್ಕೊರೆತ, ಸೌಪರ್ಣಿಕಾ ನದಿ ನೆರೆಹಾವಳಿ : ಸಂಕಷ್ಟ ನಿವಾರಣೆಗೆ ವರಾಹ ದೇವರಲ್ಲಿ ಪ್ರಾರ್ಥನೆ

ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಅಪಘಾತಗಳು ಹೆಚ್ಚುತ್ತಿರುವುದರಿಂದ ಜನರು ಭೀತರಾಗಿದ್ದು ಸಂಕಷ್ಟದ ನಿವಾರಣೆಗೆ ಜುಲೈ 28ರಂದು ನಡೆಯುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಮಾರಸ್ವಾಮಿ ವರಾಹ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದರ