Home Posts tagged #v4news karnataka (Page 200)

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್

ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ವ್ಯಾಪ್ತಿಯ ಕೆಂಪುಗುಡ್ಡೆ ಸಾರಿಗೆ ಎಂಬಲ್ಲಿನ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.ಬಾಲಕಿ ಶುಕ್ರವಾರ ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ಶಾಲೆಗೆ ನಡೆದು ಕೊಂಡು ಹೋಗುತ್ತಿದ್ದ ವೇಳೆ ಪರಿಚಿತ ವ್ಯಕ್ತಿಯೋರ್ವ ಕಾರಿನಲ್ಲಿ ಬಂದು ಬಾಲಕಿಯನ್ನು ಪುಸಲಾಯಿಸಿ ಇತರರೊಂದಿಗೆ

ಅನಿಮಲ್ ಪ್ರಿಂಟ್ ಮೂಲಕ ಗಮನ ಸೆಳೆದ ಡಾ, ಜ್ಯೋತಿ ಬೆಹಲ್

ಬೆಂಗಳೂರಿನ ಜನಪ್ರಿಯ ಫ್ಯಾಶನ್ ಡಿಸೈನರ್ ಡಾ.ಜ್ಯೋತಿ ಬೆಹಲ್ ಅವರು ವೈವಿಧ್ಯಮಯ ಫ್ಯಾಶನ್ ಶೂಟ್‍ಗಳ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಇತ್ತೀಚೆಗೆ ಶಿವ ರೂಪಿಣಿಯಾಗಿ ಮಿಂಚಿದ್ದ ಅವರು ಇದೀಗ ಅನಿಮಲ್ ಪ್ರಿಂಟ್ ಮೂಲಕ ಆಕರ್ಷಣೆಯ ಕೇಂದ್ರವಾಗಿದ್ದಾರೆ. ತಾವೇ ಡಿಸೈನ್ ಮಾಡಿದ ಅನಿಮಲ್ ಪ್ರಿಂಟ್ ಡಿಸೈನರ್ ವೇರ್ ಗೆ ಸ್ವತಾ: ಡಾ.ಜ್ಯೋತಿ ಬೆಹಲ್ ಅವರು ಮೊಡೆಲ್ ಆಗಿ ಪೊಟೋ ಶೂಟ್ ನಲ್ಲಿ ಭಾಗವಹಿಸಿದರು. ಖ್ಯಾತ ಫ್ಯಾಶನ್ ಪೊಟೋಗ್ರಾಫರ್ ಲೀಜು ಮಾಧವನ್ ಅವರ ಪೊಟೋಗ್ರಪಿ ಕೂಡ

ಚೆಲುವಿನ ಚುಲುಬುಲೀಸ್ ಮಹಿಳೆಯರಿಂದ ದಾಂಡಿಯಾ ಸಂಭ್ರಮ

ಕೊರೊನಾ ಕಾರಣದಿಂದಾಗಿ ಅದೆಷ್ಟೋ ಮಂದಿ ಕಳೆದ ಎರಡು ವರ್ಷಗಳಿಂದ ಮನೆಯ ಹೊರಗಿನ ಆಯೋಜನೆಯ ಸಾಂಸ್ಕøತಿಕ ಕಾರ್ಯಕ್ರಮ , ಸಂಭ್ರಮದಿಂದ ವಂಚಿತರಾಗಿದ್ದರು. ಇದೀಗ ಮತ್ತೆ ಸನ್ನಿವೇಶವು ಸಹಜ ಸ್ಥಿತಿಗೆ ಬರುತ್ತಿದ್ದು, ಸಾಂಸ್ಕøತಿಕ ಕಲರವ ಸಂಭ್ರಮ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನ ಚೆಲುವಿನ ಚುಲುಬುಲೀಸ್ ಮಹಿಳಾ ತಂಡದವರು ಖ್ಯಾತ ಡಿಸೈನರ್ ಹಾಗೂ ಮೋಡೆಲ್ ಪ್ರಿಯಾ ಕುಮಾರ್ ನೇತೃತ್ವದಲ್ಲಿ ದಾಂಡಿಯಾ ನೃತ್ಯ ಆಯೋಜನೆಯ ಮೂಲಕ ನವರಾತ್ರಿಯವನ್ನು ಸಂಭ್ರಮದಿಂದ ಬರಮಾಡಿಕೊಂಡರು.

ಉಳ್ಳಾಲ : ಮನೆಗೆ ನುಗ್ಗಿ ಬೆಲೆ ಬಾಳುವ ಸೊತ್ತು ಕಳವು

ಉಳ್ಳಾಲ: ಮನೆಗೆ ನುಗ್ಗಿದ ಕಳ್ಳರು ಲಕ್ಷ ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ವಿದೇಶದಲ್ಲಿ ವಾಸವಿರುವ ಸುಜಾತಾ ಎಂಬವರ ಮನೆಯಲ್ಲಿ ಕಳವು ನಡೆದಿದೆ.ಲಕ್ಷ ಬೆಲೆಬಾಳುವ ಮೂರು ಕಂಚಿನ ದೀಪಗಳನ್ನು ಕಳ್ಳರು ಕಳವು ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ತಿಳಿದು ಕಳ್ಳರು ಕೃತ್ಯ ಎಸಗಿದ್ದಾರೆ. ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಸೊತ್ತುಗಳಿಗಾಗಿ ಹುಡುಕಾಡಿ ಬಳಿಕ ಏನೂ

ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್ ನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 16 ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯ

ಪುತ್ತೂರಿನಲ್ಲಿ ಆಂಬುಲೆನ್ಸ್ ಲೋಕಾರ್ಪಣೆ

ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್

ಸಿಐಎಸ್‌ಎಫ್ ಏಕತಾ ಸೈಕಲ್ ರ್‍ಯಾಲಿ: ಪಣಂಬೂರಿನಲ್ಲಿ ಸೈಕಲ್ ರ್‍ಯಾಲಿಗೆ ಸ್ವಾಗತ

75 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ದೇಶದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಯೋಧರು ಕೇರಳದ ತಿರುವನಂತಪುರದಿಂದ ಗುಜರಾತ್‌ನ ಕೇವಾಡಿಯವರೆಗೆ ಸೈಕಲ್ ರ್‍ಯಾಲಿ ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿತು. ನಿರತ ಯೋಧರನ್ನು ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಾರ್ಖಾನೆಯ ಮತ್ತು ಎನ್‌ಎಂಪಿಟಿ, ಎಂಆರ್‌ಪಿಎಲ್ ಇದರ ಸಿಐಎಸ್‌ಎಫ್ ಘಟಕಗಳು ಸ್ವಾಗತ ಕೋರಿ ಸಮ್ಮಾನಿಸಿ, ಶ್ಲಾಘನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು

ಸಂಬಳ ಸಿಗದೆ ಪರದಾಡುತ್ತಿರುವ ಕೆ ಎಸ್ ಆರ್ ಟಿ ಸಿ ನೌಕರರು : ಬಿಎಂಎಸ್ ಸಂಘಟನೆಯಿಂದ ಧರಣಿಗೆ ನಿರ್ಧಾರ

ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು

ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು: ನಾವುಂದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಕುಂದಾಪುರ: ಸರಕಾರದ ಅನೇಕ ವರ್ಷಗಳ ಪ್ರಯತ್ನದಿಂದ ಶಿಕ್ಷಣ ಇಲಾಖೆ ಒಂದು ಹಂತಕ್ಕೆ ಬಂದು ತಲುಪಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಪರಿಪೂರ್ಣತೆ ಕಂಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ಆಗಬೇಕು. ಅನೇಕ ಮಕ್ಕಳಿಗೆ ತಮ್ಮಲ್ಲಿರುವ ಜ್ಞಾನವನ್ನು ಬಳಸಿಕೊಳ್ಳಲು ಇನ್ನೂ ಕೂಡ ಸ್ವಾತಂತ್ರ್ಯ ದೊರೆತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಅವರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.20 ಕೋ.ರೂ. ವೆಚ್ಚದಲ್ಲಿ