ಬೆಳ್ತಂಗಡಿಯಲ್ಲಿ ಬಾರೀ ಮಳೆಯಿಂದಾಗಿ ರಸ್ತೆಯೆಲ್ಲ ಚರಂಡಿಯಂತಾಗಿದೆ,ತಾಲೂಕಿನ ಕೊಕ್ಕಡ ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿಯಿಲ್ಲದೆ ರಸ್ತೆಯಲ್ಲೇ ನೀರು ಹೋಗುವಂತಾಗಿದೆ. ರಸ್ತೆಯ ಎರಡೂ ಬದಿಯ ಜಾಗಗಳನ್ನು ಕೆಲವು ವ್ಯಕ್ತಿಗಳು ಚರಂಡಿ ಮುಚ್ಚಿ ಅದನ್ನು ಆಕ್ರಮಿಸಿ ಕಂಡಿರುವುದೇ ಇದಕ್ಕೆ ಕಾರಣವಾಗಿದೆ. ಕೊಕ್ಕಡ ಗ್ರಾಮ ಪಂಚಾಯತ್ ಎದುರಿನಲ್ಲೇ ಅಷ್ಟೊಂದು ನೀರು
ಕನ್ನಡ ಸಂಘ ಬಹ್ರೈನ್ನ ನಿಯೋಗದ ಸದಸ್ಯರು ಇಂದು ಬಹ್ರೈನ್ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ
ದಕ್ಷಿಣ ಕನ್ನಡ ಜಿಲ್ಲೆಯ ತುಳು ಅಧಿಕೃತ ಭಾಷೆ ಪೊರಂಬಾಟ್ ಸಮಿತಿ ವತಿಯಿಂದ ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವು. ಆದರೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರಿಂದ ಪ್ರತಿಭಟನೆಯನ್ನು ರದ್ದುಮಾಡಬೇಕಿತ್ತು. ರಾಜಕೀಯ ಕಾರ್ಯಕ್ರಮ, ರಾಜಕೀಯ ಪ್ರತಿಭಟನೆಗೆ ಅವಕಾಶ ಕೊಡುತ್ತಾರೆ. ಆದರೆ ನಮ್ಮ ತುಳುವರ ಶಾಂತಿಯುತ ಪ್ರತಿಭಟನೆಗೆ ಯಾಕೆ ಅವಕಾಶ ನೀಡಿಲ್ಲ ಎಂದು ಯೋಗೀಶ್ ಶೆಟ್ಟಿ ಜೆಪ್ಪು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ
ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.
ನಾನು ಇಂಧನ ಸಚಿವನಾಗಿದ್ದ ಸಂದರ್ಭ ವ್ಯಕ್ತಿಯೋರ್ವ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ಆತ ಅಧಿಕಾರಿಗಳನ್ನೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದ್ದು, ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಆಗಮಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮತನಾಡಿದರು.
ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು. ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ ದೇವಾಲಯ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನು ದ್ವಂಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ದ
ಠಾಣೆಯಲ್ಲಿ ಇದುವರೆಗೆ ಗೋ ಕಳ್ಳತನ, ಗೋ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಗಳನ್ನು ಹಾಗೂ ದನದ ದಲ್ಲಾಳಿ ಮಾಡುವವರನ್ನು ಮತ್ತು ದನಸಾಗಾಟ ಮಾಡುವ ವಾಹನಚಾಲಕರ ಪರೇಡ್ ನಡೆಸಿದರು. ಇವರುಗಳು ಮುಂದಕ್ಕೆ ಯಾವುದೇ ಗೋ ಕಳ್ಳತನ ಗೋ ಹತ್ಯೆ ಪ್ರಕರಣದಲ್ಲಿ ಬಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣು ವರ್ದನ್ ರವರು ಎಚ್ಚರಿಕೆಯನ್ನು ನೀಡಿದ್ದಾರೆ. ಸಭೆಯಲ್ಲಿ ಪೊಲೀಸ್ ಉಪಾದೀಕ್ಷಕರಾದ ಎಸ್ ವಿಜಯಪ್ರಸಾದ್, ಕಾರ್ಕಳ ವೃತ್ತ
ಬಾಲಿವುಡ್ ಖಾನ್ಗಳ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಹೇಳಿಕೆ ನೀಡಿರುವ ಯತ್ನಾಳ ಶಾರುಖಾನ್ ಪುತ್ರ ಡ್ರಗ್ಸ್ ಕೇಸ್ ಲ್ಲಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿ ದೇಶ ಸುರಕ್ಷಿತ ಅಲ್ಲ ಎಂದ ಖಾನ್ ಗಳು ದೇಶ ಬಿಡಲಿ ಎಂದರು. ಆ ಮಕ್ಕಳೆಲ್ಲ ನೇರವಾಗಿ ಅಪಘಾನಿಸ್ತಾನಕ್ಕೆ ಹೋಗಲಿ, ಅಲ್ಲಿಯೇ ಸುರಕ್ಷಿತವಾಗಿ ತಾಲಿಬಾನ್ ಕೆಳಗೆ ನಟನೆ ಮಾಡಿಕೊಂಡಲು ಇರಲಿ ಎಂದು ವ್ಯಂಗವಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ ಮೂಲಕ ಗಾಂಧಿ ಜಯಂತಿಯನ್ನ ಆಚರಣೆ ಮಾಡಲಾಯ್ತು, ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು, ಸ್ವದೇಶಿ
ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.



















