Home Posts tagged #v4news karnataka (Page 220)

ಶಕ್ತಿನಗರದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕ, ಮಂಗಳೂರು, ಉಪವಿಭಾಗದ ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನೂತನ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೂತನ

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ರಾಜ್ಯದಲ್ಲೂ ಬಿಗಿ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ

ರಾಜ್ಯಾದ್ಯಂತ ತಾಂಡವಾಡುತ್ತಿದೆ ಭ್ರಷ್ಟಾಚಾರ: ಮುರಳೀಧರ ರೈ ಮಠಂತಬೆಟ್ಟು ಆರೋಪ

ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಹೇಳಿದರು. ವಿಟ್ಲದಲ್ಲಿ ಕರೆದ

ಉಪ್ಪಿನಂಗಡಿಯಲ್ಲಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣ : ಹಿಂಜಾವೇಯಿಂದ ಪ್ರತಿಭಟನೆ

ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಯಿತು. ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಹಿಂದೆ ರಾಸ್ತಾರೋಕೋ ನಡೆಸಲಾಗಿತ್ತು. ಅಲ್ಲದೆ, ಉಗ್ರ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಪೊಲೀಸ್ ಇಲಾಖೆಯ ಮನವಿ ಮೇರೆಗೆ ಪ್ರತಿಭಟನೆ ಕೈ

ಕೋವಿಡ್ ನಿಯಂತ್ರಣಕ್ಕೆ ಪುತ್ತೂರಿನಲ್ಲಿ ಕಟ್ಟುನಿಟ್ಟಿನ ಕ್ರಮ: ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್

ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಹೇಳಿದರು. ಅವರು ಪುತ್ತೂರಿನ ತಮ್ಮ ಕಚೇರಿಯಲ್ಲಿ

ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಕೋವಿಡ್ ಲಸಿಕೆ ಶಿಬಿರ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ಕದ್ರಿ ಬಿ ನಲ್ಲಿರುವ ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉಚಿತ ಕೋವಿಡ್ ಲಸಿಕಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿದರು. 5೦೦ ಕ್ಕೂ ಹೆಚ್ಚು ನಾಗರಿಕರು ಈ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡರು.ಶಿಬಿರದಲ್ಲಿ ಮನಪಾ ಸದಸ್ಯರಾದ ಜಯಾನಂದ ಅಂಚನ್, ಶಾಲಾ ಮುಖ್ಯೋಪಾಧ್ಯಾಯರಾದ ಮಂಜಪ್ಪ ಬಿ, ಡಾ. ಮಹಿಮ ಗುಪ್ತ, ಆಶಾ ಕಾರ್ಯಕರ್ತೆಯಾದ ಸುಶೀಲ,

ವಿದ್ಯುತ್ ಬಿಲ್ ನಲ್ಲಿ ಅಕ್ರಮ, ಮೂವರ ಅಮಾನತು: ಸಚಿವ ಸುನಿಲ್ ಕುಮಾರ್

ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ

ನವಮಂಗಳೂರು ಬಂದರು ಟ್ರಸ್ಟ್‌ನ ಹೊಸ ಸಾಧನೆ: ಮೊದಲ ಬಾರಿಗೆ 22,825 ಟನ್ ಕಬ್ಬಿಣದ ಸರಕು ರಫ್ತು

ಮಂಗಳೂರು: ನಗರದ ನವ ಮಂಗಳೂರು ಬಂದರು ಟ್ರಸ್ಟ್ ಹೊಸ ಸಾಧನೆ ಮಾಡಿದ್ದು, ಇದೇ ಮೊದಲ ಬಾರಿಗೆ ಇಲ್ಲಿಂದ 22,825 ಟನ್ ಕಬ್ಬಿಣದ ಸರಕನ್ನು ರಫ್ತು ಮಾಡಲಾಗಿದೆ.ಎಂ.ವಿ. ಮಿನಿಯನ್ ಗ್ರೇಸ್ ಹಡಗು ನಗರದ ಎನ್‌ಎಂಪಿಟಿಗೆ ಬಂದಿತ್ತು. ಇದರಿಂದ ಜೆಎಸ್‌ಡಬ್ಲ್ಯು ಕಂಪನಿಗೆ ಸೇರಿದ 22,825 ಟನ್ ಕಬ್ಬಿಣದ ಸರಕನ್ನು ತುಂಬಲಾಗಿದೆ. ಸರಕು ಹೊತ್ತ ಹಡಗು ಈಜಿಪ್ಪನ ಡಾಮಿಯೆಟ್ಟ, ಇಟಲಿಯ ಮರ್ಗೇರಾ ಹಾಗೂ ಸ್ಪೇನ್‌ನ ಸಗುಂಟೋ ಬಂದರಿಗೆ ತೆರಳಲಿದೆ. ಎನ್‌ಎಂಪಿಟಿಯ 3 ನೇ ದಕ್ಕೆ ಮಿನಿಯನ್

ಅಫ್ಘಾನ್ ತಾಲಿಬಾನ್ ವಶದ ಬೆನ್ನಲ್ಲೇ ಭಾರತದ ಡ್ರೈ ಫ್ರೂಟ್ ಉದ್ಯಮಕ್ಕೆ ಹೊಡೆತ..!

ಜಾಗತಿಕವಾಗಿ ಡ್ರೈ ಫ್ರೂಟ್ ಮಾರಾಟ ಕ್ಷೇತ್ರದಲ್ಲಿ ಅಫ್ಘಾನಿಸ್ತಾನ ಪಾರುಪತ್ಯ ಹೊಂದಿದೆ. ಅಲ್ಲದೇ ಭಾರತದಲ್ಲಿ ಅಫ್ಘಾನಿಸ್ತಾನದ ಡ್ರೈ ಫ್ರೂಟ್‍ಗೆ ಎಲ್ಲಿಲ್ಲದ ಬೇಡಿಕೆ ಕೂಡ ಇದೆ ಆದರೆ ಈಗ ಅಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಹೋಗಿ ಶಾಂತವಾಗಿದ್ದ ನೆಲ ನಲುಗಿ ಹೋಗಿದ್ದು. ಭಾರತದ ಡ್ರೈ ಫ್ರೂಟ್ ಉದ್ಯಮ ಅಕ್ಷರಶಃ ನೆಲಕಚ್ಚಿದಂತಾಗಿದೆ. ಹೌದು ಅಫ್ಘಾನಿಸ್ತಾನ ತಾಲಿಬಾನ್ ವಶ ಪಡಿಸಿಕೊಂಡ ನಂತರ ಶಾಂತವಾಗಿದ್ದ ಅಫ್ಘಾನ್ ನೆಲ ನಲುಗಿ ಹೋಗಿದೆ. ಇನ್ನು ಅಫ್ಗಾನ್ ನೆಲದಲ್ಲಿ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ:ಶೂಟರ್ ಮನೀಶ್ ನರ್ವಾಲ್ ಗೆ ಚಿನ್ನ

ಶೂಟರ್ ಮನೀಶ್ ನರ್ವಾಲ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.  ಇನ್ನೋರ್ವ ಶೂಟರ್ ಸಿಂಗ್ ರಾಜ್ ಅಧಾನ ಅವರು ಬೆಳ್ಳಿ ಪದಕ ಗೆದ್ದುಕೊಂಡರು. ಈ ಇಬ್ಬರು ಶನಿವಾರ ನಡೆದ ಪಿ4 ಮಿಕ್ಸೆಡ್ 50 ಮೀ. ಪಿಸ್ತೂಲ್ ಎಸ್ಎಚ್ 1 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.19ರ ರ ಹರೆಯದ ನರ್ವಾಲ್ ಒಟ್ಟು 218.2 ಅಂಕ ಗಳಿಸಿ ಒಲಿಂಪಿಕ್ಸ್ ದಾಖಲೆ  ನಿರ್ಮಿಸಿ ಚಿನ್ನ ಜಯಿಸಿದರು. ಮಂಗಳವಾರ ಕಂಚು ಗೆದ್ದಿದ್ದ ಅಧಾನ 216.7 ಅಂಕ ಗಳಿಸಿ