Home Posts tagged #v4news karnataka (Page 237)

ನಂದಿಕೂರಿನ ದೇವರಕಾಡು ಪ್ರದೇಶ ನೆಲಸಮ: ಗ್ರಾ.ಪಂ.ಗೆ ತಪ್ಪು ಮಾಹಿತಿ ನೀಡಿದ ಕಂಪನಿ ಕಾಮಗಾರಿ ಸ್ಥಗಿತಕ್ಕೆ ಸೂಚನೆ

ನಂದಿಕೂರಿನ ದೇವರಕಾಡು ಪ್ರದೇಶವನ್ನು ನೆಲಸಮ ಮಾಡಿ ಕಾಮಗಾರಿ ನಡೆಸುತ್ತಿರುವ ಕಂಪನಿಯೊಂದು ಗ್ರಾ.ಪಂ.ಗೆ ತಪ್ಪು ಮಾಹಿತಿ ನೀಡಿ ತಮಗೆ ಬೇಕಾದಂತೆಲ್ಲಾ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನನ್ವಯ ಸಭೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಕಂಪನಿಗೆ ಪಲಿಮಾರು ಗ್ರಾ.ಪಂ. ಸೂಚನೆ ನೀಡಿದೆ. ಅಡುಗೆ ಎಣ್ಣೆ ಕಂಪನಿ ಎಂಬುದಾಗಿ ಆಡಳಿತ ಸಮಿತಿ

ಸೂಪರ್ ಹಿಟ್ಸ್ 93.5 ರೆಡ್ ಎಫ್.ಎಂ : “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”

 ಭಾರತದಲ್ಲಿ ಅತಿ ಹೆಚ್ಚು ಅವಾರ್ಡ್ ಗಳನ್ನು ಪಡೆದಿರುವ ಅತೀ ದೊಡ್ಡ ರೇಡಿಯೋ ನೆಟ್ವರ್ಕ್ ,93.5 ರೆಡ್ ಎಫ್ ಎಂ . ಮೈಸೂರು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಹಾಗೂ ಕಲಬುರ್ಗಿ ನಗರಗಳಲ್ಲಿ ಪ್ರಸ್ತುತಪಡಿಸುತ್ತಿದೆ “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”. ಕೇಳುಗರಿಗೆ ಅತಿ ಹೆಚ್ಚು sಸೂಪರ್ ಹಿಟ್ ಹಾಡುಗಳನ್ನು ದಿನ ಪೂರ್ತಿ ಪ್ರಸಾರ ಮಾಡುವ ಸಲುವಾಗಿ ಈ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ನಾನ್ ಸ್ಟಾಪ್ 8 ಹಾಡುಗಳನ್ನು (8 ಹಾಡುಗಳ ಸರಮಾಲೆಯಾಗಿ )

ದಿ.ಇದಿನಬ್ಬ ಮಗನ ಮನೆಗೆ ಎನ್.ಐ.ಎ ದಾಳಿ ಪ್ರಕರಣ : ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮನೆಗೆ ಮುತ್ತಿಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ

ಉಭಯ ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ

ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ

“ಭಕ್ತಿಕಾವ್ಯವು ಸಾಮಾಜಿಕ ಚೇತನದ ಸ್ಪೂರ್ತಿ” ಡಾ.ಮಂಜುನಾಥ ಅಂಬಿಗ

ಶ್ರೀ ಧರ್ಮಸ್ಥಳ ಮಂಜುನಾಥೇಶ್ಡರ ಮಹಾವಿದ್ಯಾಲಯದ ಹಿಂದಿ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಮಂಜುನಾಥ ಅಂಬಿಗ [ಪ್ರೋ. ಮತ್ತು ಉಪನ್ಯಾಸಕರು ದಕ್ಷಣಬಾರತ ಸ್ನಾತಕೋತ್ತರ ಕೇಂದ್ರ ಹಿಂದಿ ಪ್ರಚಾರಸಭಾ ಮದ್ರಾಸ ಅವರು ಮದ್ಯಯುಗದ ಕಾವ್ಯಪರಂಪರೆ ಬಾರತೀಯ ಸಮಾಜಿಕ ಜೀವನಕ್ಕೆ ಚೇತನ ತುಂಬಿದ್ದಲ್ಲದೆ ಕಬೀರದಾಸರು, ಸೂರದಾಸರು ತುಲಸಿದಾಸರು ಬಿಹಾರಿಲಾಲರು ರಹೀಮರಾದಿಯಾಗಿ ತಮ್ಮ ತತ್ವಪದಗಳೊಂದಿಗೆ ಅಸಂಘಟಿತ ಗೊಂದಲ ಹಾಗು ಆಸುರಕ್ಷಿತ ಸಮಾಜವನ್ನ ಬೆಸೆಯುವ

ಉಜಿರೆ ಕಾಲೇಜಿನ ವಾರ್ಷಿಕ ಸಂಚಿಕೆ ಮನೀಷಾಗೆ ವಿ.ವಿ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ ಶ್ರೀ. ಧ. ಮಂ ಕಾಲೇಜು (ಸ್ವಾಯತ್ತ) ಇದರ ವಾರ್ಷಿಕ ಸಂಚಿಕೆ ‘ಮನೀಷಾ’ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆ ಲಭಿಸಿದೆವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಗೆ ಅತ್ಯುತ್ತಮ ವೇದಿಕೆಯಾದ ಪ್ರಶಸ್ತಿ ವಿಜೇತ 500 ಪುಟಗಳ ಈ ಸಂಚಿಕೆಯಲ್ಲಿ ಸ್ಥಳೀಯ ವೈವಿಧ್ಯತೆ, ಕ್ಷೇತ್ರಾಧ್ಯಯನ, ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳ ಮಾಹಿತಿ, ಬರಹ, ಕಥೆ, ಕವನ, ಲೇಖನ, ಚುಟುಕು, ವ್ಯಂಗ್ಯಚಿತ್ರ, ವಾರ್ಷಿಕ

ಔಟ್‌ಲುಕ್ ಸಮೀಕ್ಷೆಯಲ್ಲೂ ಎಸ್.ಡಿ.ಎಂ.ಗೆ ಉತ್ಕೃಷ್ಟ ಸ್ಥಾನ

ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಗೆ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ. ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 18ನೇ ಸ್ಥಾನ ಲಭ್ಯವಾಗಿದ್ದು, ಬಿಸಿಎಗೆ 17 ಸ್ಥಾನ, ಸಮಾಜ ಕಾರ್ಯ ವಿಭಾಗಕ್ಕೆ 22ನೇ ಸ್ಥಾನ ಪ್ರಾಪ್ತವಾಗಿದೆ. ಬಿ.ಬಿ.ಎ ವಿಭಾಗಕ್ಕೆ 34,

ಉದ್ಯೋಗಕ್ಕಾಗಿ ನಿರೀಕ್ಷಿಸಬೇಡಿ – ನೀವೇ ಉದ್ಯೋಗಗಳನ್ನು ಸೃಷ್ಟಿಸಿ : ಅಬ್ದುಲ್ಲ ಮಡುಮೂಲೆ

“ನೀವು ಶ್ರೀಮಂತರಾಗಬೇಕೆಂಬ ಧ್ಯೇಯ ಹೊಂದಿದ್ದರೆ ಬೇರೆಯವರಿಗಾಗಿ ದುಡಿಯಬೇಡಿ. ನಿಮ್ಮ ಅಭಿವೃದ್ಧಿಗಾಗಿಯಷ್ಟೇ ಶ್ರಮ ಪಡಿ. ನಿಮ್ಮ ಕನಸುಗಳನ್ನು ಸಾಕಾರಮಾಡಿಕೊಳ್ಳಬೇಕಾದರೆ ಉದ್ಯೋಗಕ್ಕಾಗಿ ನಿರೀಕ್ಷೆ ಮಾಡಬೇಡಿ. ಬದಲಾಗಿ ನೀವೇ ಇತರರಿಗೆ ಉದ್ಯೋಗ ಸೃಷ್ಟಿಸಿಕೊಡುವಷ್ಟು ಪ್ರಬಲವಾಗಿ ಬೆಳೆಯಲು ನಿರ್ಧರಿಸಿ, ಅದರಂತೆಯೇ ಮುನ್ನಡೆದು ಯಶಸ್ಸು ಪಡೆಯಿರಿ” ಎಂದು ಅಬುಧಾಬಿ ಸರ್ಕಾರದ ಸೈಬರ್ ಫೌಂಡೇಶನ್ ಹಿರಿಯ ಆರ್ಥಿಕ ನಿಯಂತ್ರಣ ಅಧಿಕಾರಿಯಾದ ಸಿ. ಎ. ಅಬ್ದುಲ್ಲಾ ಮಡುಮೂಲೆ

ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ 3.96 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿಪೂಜೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಮರಕಡ 14ನೇ ವಾರ್ಡಿನಲ್ಲಿ ವಿಮಾನ ನಿಲ್ದಾಣ ರಸ್ತೆಗೆ ತಡೆ ಗೋಡೆ ಹಾಗೂ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಎ .ಆರ್ ನಿಧಿಯಿಂದ ಮತ್ತು ಸಾಮಾನ್ಯ ನಿಧಿಯಿಂದ 3.96 ಕೋಟಿ ಅನುದಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಉಪಮೇಯರ್ ಸುಮಂಗಲ ರಾವ್ ,

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ