ಉಳ್ಳಾಲ: ಅವೈಜ್ಞಾನಿಕವಾದ ಸರ್ವಿಸ್ ರಸ್ತೆಯಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಲಪಾಡಿ ಗ್ರಾಮದ ಕೆ.ಸಿ ರೋಡ್ ಹರಿಜನ ಕಾಲನಿ ನಿವಾಸಿಗಳು ರಸ್ತೆಯಲ್ಲೇ ಕುಳಿತು ಡಾಮಾರು ಹಾಕಲು ಬಂದ ವಾಹನವನ್ನು ತಡೆಗಟ್ಟಿ ಹಿಂದಕ್ಕೆ ಕಳುಹಿಸಿ ಪ್ರತಿಭಟಿಸಿರುವ ಘಟನೆ ನಡೆದಿದೆ. ರಾ.ಹೆ 66 ರ ಗುತ್ತಿಗೆ ವಹಿಸಿಕೊಂಡಿರುವ ನವಯುಗ ಸಂಸ್ಥೆ ಇತ್ತೀಚೆಗೆ ತಲಪಾಡಿಯ
ರಾಜ್ಯದಲ್ಲಿ ಕನ್ನಡ ಭಾಷೆಗೆ ಪ್ರಭುತ್ವ ದೊರಕಬೇಕು. ಇತರ ಭಾಷೆಗಳು ಕನ್ನಡದ ಮೇಲೆ ಸವಾರಿ ಮಾಡಬಾರದು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ ನಾಡು, ನುಡಿ ಮತ್ತು ಸಂಸ್ಕöತಿಗೆ ಕಾಯಕಲ್ಪ ನೀಡಿ ಸಂರಕ್ಷಣೆ ಮಾಡಬೇಕು ಎಂದು ಧರ್ಮಸ್ಥ¼ದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದದಲ್ಲಿ ಎಲ್ಲಾ ಚಟುವಟಿಕೆಗಳು ಕನ್ನಡದ ಮೂಲಕವೇ
ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ವತಿಯಿಂದ ಫೆ.5ರಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಸ್ವರ್ಣ ಬಿಂದು ಪ್ರಾಶನವನ್ನು ನೀಡಲಾಗುತ್ತಿದೆ. ನಗರದ ವೆಲೇನ್ಸಿಯಾ ಮತ್ತು ಕದ್ರಿ ಶಾಖೆಯಲ್ಲಿ ಸ್ವರ್ಣ ಬಿಂದು ಪ್ರಾಶನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಕ್ಕಳಿಗಾಗಿ ಈ ಲಸಿಕೆಯನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0824 2434 666, 9632008444, 9632007444 ಗೆ ಸಂಪರ್ಕಿಸಬಹುದು.
ಮಂಗಳೂರಿನ ರುದ್ರ ಥೇಟರ್ ಅರ್ಪಿಸುವ “ಶೂದ್ರಶಿವ” ಕನ್ನಡ ನಾಟಕ ಫೆ.5ರ ಭಾನುವಾರ ಸಂಜೆ 5.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ಖ್ಯಾತ ಯುವ ನಿರ್ದೇಶಕ ವಿದ್ದು ಉಚ್ಚಿಲ್ ಅವರ ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ ಈ ನಾಟಕ ಸಿದ್ದಗೊಂಡಿದೆ. ಲೇಖಕ ಬಾಬು ಶಿವ ಪೂಜಾರಿ ಅವರ ‘ಶ್ರೀ ನಾರಾಯಣ ಗುರು ವಿಜಯ ದರ್ಶನ” ಪುಸ್ತಕವನ್ನು ಪ್ರೇರಣಾ ಪಠ್ಯವಾಗಿಟ್ಟುಕೊಂಡು ಜೊತೆಗೆ ನಾರಾಯಣ ಗುರುಗಳ
ಉಡುಪಿಯ ಪರಿಸರದಲ್ಲೇ ಕಂಪನಿ ಸೆಕ್ರೆಟರಿ ತರಬೇತಿ ಪಡೆಯಲು ಇಚ್ಛಿಸುವವರಿಗೆ ಮತ್ತು ಉಡುಪಿಯ ಎಲ್ಲಾ ತರಹದ ಉದ್ಯಮಿಗಳಿಗೆ ಸಲಹೆ ಹಾಗೂ ಅತ್ಯುತ್ತಮ ಸೇವೆಯನ್ನು ನೀಡಲು ಚೇತನ್ ನಾಯಕ್ & ಅಸೋಸಿಯೇಟ್ಸ್ ಮತ್ತು ಸಿ ಎಸ್ ಅಪರ್ಣ ಭಟ್ ರವರ ಸಹಭಾಗಿತ್ವದಲ್ಲಿ ಉಡುಪಿಯ ಇಂದ್ರಾಳಿಯಲ್ಲಿರುವ ಹಯಗ್ರೀವ ನಗರದಲ್ಲಿ ನೂತನ ಕಂಪನಿ ಸೆಕ್ರೆಟ್ರಿ ಸಹವರ್ತಿ ಕಛೇರಿಯನ್ನು ಉದ್ಘಾಟಿಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ನೂತನ
ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಎಂಬಲ್ಲಿ ನಡೆದಿದೆ.ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ
ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೆÇ್ಕೀದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಪೂರಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮತ್ತು ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್ರವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಮಾವೇಶ
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತು ವ್ಯಾಪ್ತಿಯ 5 ಹಾಗೂ 7ನೇ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಯತೀಂ ಖಾನ-ಗೇರುಕಟ್ಟೆ ರಸ್ತೆಯ ಅಂಬಿತ್ತಡಿ, ಹಾರ್ವಾರ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ವಾಸನೆ ಬೀರುತ್ತಿದೆ. ಜನಸಂಚಾರವಿಲ್ಲದ ರಾತ್ರಿ ಸಮಯಗಳಲ್ಲಿ ಇಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಕವಾಗಿ ತ್ಯಾಜ್ಯಗಳು
ಮುಲ್ಕಿ: ಮುಲ್ಕಿ ಸಮೀಪದ ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಶ್ರೀ ದೇವರಿಗೆ ಪೂರ್ವಾಹ್ನ ಗಂಟೆ 10:25ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವಸ್ಥಾನದ ತಂತ್ರಿಗಳಾದ ಶಿವಪ್ರಸಾದ ತಂತ್ರಿ ,ವೇ.ಮೂ ಪಂಜ ಭಾಸ್ಕರ ಭಟ್ ಹಾಗೂ ಅರ್ಚಕ ಗೋಪಾಲ ಭಟ್ ಪೌರೋಹಿತ್ಯದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಿತು. ಬಳಿಕ ಮಹಾಪೂಜೆ, ಅವಸ್ಕೃತ ಬಲಿ ನಡೆಯಿತು. ಮಧ್ಯಾಹ್ನ ಪಲ್ಲಪೂಜೆ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ
ಹಳೆಯಂಗಡಿ: ಗ್ರಾಮದ ಜನತೆಯ ಸಮಸ್ಯೆಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಸಾಕಷ್ಟು ಮಂದಿ ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಹಾಗೂ ಪಡೆದುಕೊಳ್ಳಬೇಕು ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್ ಹೇಳಿದರು. ಅವರು ಹಳೆಯಂಗಡಿ ಪಂಚಾಯತ್ ವತಿಯಿಂದ ಕೆಮ್ರಾಲ್, ಪಡುಪನಂಬೂರು, ಮತ್ತು ಹಳೆಯಂಗಡಿ ಗ್ರಾಮ ಪಂಚಾಯತ್ ನಲ್ಲಿ ಬರುವ ಎಲ್ಲಾ ಗ್ರಾಮದವರಿಗೆ ವಿದ್ಯಾ ವಿನಾಯಕ ಯುವಕ ಮಂಡಲ ಸಭಾಭವನ




























