Home Posts tagged #v4news karnataka (Page 69)

ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬೃಹತ್ ಗಾಳಿಪಟ

ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬ್ರಹತ್ ಗಾಳಿಪಟ ನಿರ್ಮಾಣವು ಡಿಸೆಂಬರ್ 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3ರ ತನಕ ಮಂಗಳೂರಿನ ಗೋಕುಲ್ ಸಭಾಂಗಣದಲ್ಲಿ ನೆರವೇರಲಿದೆ. 50 ಅಡಿ ಎತ್ತರದ 16 ಅಡಿ ಅಗಲದ ಈ ಗಾಳಿಪಟದಲ್ಲಿ ತುಳುನಾಡಿನ ಸಾಂಸ್ಕೃತಿಕ ವಿಚಾರಗಳ ಕಲಾಕೃತಿಗಳನ್ನು ಬಣ್ಣ ಗಳ ಮೂಲಕ ಅಭಿವ್ಯಕ್ತ ಪಡಿಸಲಾಗುವುದು. ಅಂತರಾಷ್ಟ್ರೀಯ ಖ್ಯಾತಿಯ ಟೀಮ್

ಪತ್ರಕರ್ತರ ಜಿಲ್ಲಾ ಸಮ್ಮೇಳನದ ಲಾಂಛನ ಡಾ.ವೀರೇಂದ್ರ ಹೆಗ್ಗಡೆ ಅವರಿಂದ ಬಿಡುಗಡೆ

ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರುಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಅನಾವರಣಗೊಳಿಸಿದರು. ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ ಅವರು ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು

ನೆಲ್ಯಾಡಿ: ಬಸ್ ಪಲ್ಟಿ – 15 ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊರಮೇರು ಎಂಬಲ್ಲಿ ಮಂಡ್ಯದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಡಿ.19 ರಂದು ಬೆಳಗ್ಗೆ 3:30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಏಳು ಜನರನ್ನು ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಗೆ ಹಾಗೂ ಎಂಟು ಜನರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೂರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ, ಪೋಲಿಸ್

ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂಡುಬಿದಿರೆ: ಎರಡು ವಾರದ ಹಿಂದೆ ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನ ಗುಡ್ಡ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಬರಮೇಲು ಮನೆಯ ಆನಂದ ಮೂಲ್ಯ (57) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ಆನಂದ ಮೂಲ್ಯ ಅವರು ಕುಕ್ಕೇಡಿ ಗ್ರಾಮ ಪಂಚಾಯತ್ ಬಳಿಯಲ್ಲಿರುವ ಹೊಟೇಲೊಂದರಲ್ಲಿ ಕ್ಲೀನರ್ ಆಗಿ ದುಡಿಯುತ್ತಿದ್ದರು. ಡಿ.3ರಂದು ಬೆಳಿಗ್ಗೆ

ಕರ್ನಾಟಕ ಪ್ರಾಂತ ರೈತ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರನ್ ನಾಯರ್ (84) ನಿಧನ

ಮೂಲತಃ ಕೇರಳದವರಾಗಿದ್ದು , ಕಳೆದ 30 ವರ್ಷಗಳಿಂದ ಕಳೆಂಜ ಗ್ರಾಮದ ಕೋಡಿಕುಲತ್ ಎಂಬಲ್ಲಿ ವಿವಿಧ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡಿದ್ದರೂ , ಕೇರಳ ರಾಜ್ಯದ ಹಿರಿಯ ಕಮ್ಯೂನಿಸ್ಟ್‌ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ ನಾಯರ್ ಅವರು ಅತ್ಯಂತ ಸರಳ ವ್ಯಕ್ತಿತ್ವದಿಂದ ಜನಸಾಮಾನ್ಯರ ಮೆಚ್ಚುಗೆ ಗಳಿಸಿದ್ದರು. ಅರಳಿ ಸೌಜನ್ಯ ನಗರದ ಭೂ ಹೋರಾಟ ಸೇರಿದಂತೆ ಹಲವಾರು ರೈತರ ಹೋರಾಟದ ನೇತೃತ್ವವನ್ನು ವಹಿಸಿದ್ದರು. ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಸಾಮಾನ್ಯರಿಗೆ

ಜಾಂಬೂರಿ ಖುಷಿಯೊಂದಿಗೆ ಕುತೂಹಲ ಮೂಡಿಸಿದೆ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ: ಡಿ.21-27 ಅಂತರಾಷ್ಡ್ರೀಯ ಮಟ್ಟದ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಹಬ್ಬ ಜಾಂಬೂರಿ ನನ್ನ ಕ್ಷೇತ್ರದ ಮೂಡುಬಿದಿರೆ ತಾಲೂಕಿನಲ್ಲಿ ನಡೆಯುತ್ತಿರುವುದಕ್ಕೆ ನನಗೆ ಖುಷಿಯೊಂದಿಗೆ ಕುತೂಹಲ ಮೂಡಿಸಿದೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದ್ದಾರೆ. ವಿದ್ಯಾಗಿರಿಯ 100 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಂತರಾಷ್ಟ್ರೀಯ ಮಟ್ಟದ ಜಾಂಬೂರಿ ನಮ್ಮ ದೇಶದಲ್ಲಿ ಇದೀಗ ಮೊದಲ ಬಾರಿ ನಡೆಸಲು ಅವಕಾಶ ಸಿಕ್ಕಿದ್ದು ಇನ್ನು ಇದು 40 ಅಥವಾ 50 ವರ್ಷಗಳ

ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ

ಕಡಬ: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ ಇದರ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಡಬ ವಲಯ

ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮ್ಯಾನ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ 49ನೇಯ ಮಹಾಸಭೆಯು ಊರ್ವ ಸ್ಟೋರ್ ಹತ್ತಿರ ಇರುವ ಡಾಕ್ಟರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀಯುತ ಸಂಘದ ಅಧ್ಯಕ್ಷರಾದ ದಿನೇಶ್ ಕುಂಪಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಸದಸ್ಯರ ಸಮಸ್ಯೆಗಳು. ಮತ್ತು ಸಂಘದ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ತಂದು ಅಧ್ಯಕ್ಷರು ಸರಿಯಾದ ರೀತಿಯಲ್ಲಿ ಉತ್ತರಿಸಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು…..23-24 ನೇಯ ಸಾಲಿಗೆ ಹೊಸ

ಸುಳ್ಯ ತಾಲೂಕು ಐವರ್ ನಾಡು ಗ್ರಾಮದ ದೇವರ ಕಾಣ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

ಕಾರ್ಯಕ್ರಮದಲ್ಲಿ ಸಚಿವರಾದ ಎಸ್ ಅಂಗಾರ ಏ ವಿ ತೀರ್ಥರಾಮ ಬಾಲಕೃಷ್ಣ ಕೀಲಾಡಿ ನವೀನ್ ಸಾರಕೆರೆ ಮತ್ತು “”:ಮದರ್ ಡ್ರೀಮ್ಸ್ ರೂರಲ್ ಅಂಡ್ ಅರ್ಬನ್ ಎಜುಕೇಶನ್ ಡೆವಲಪ್ಮೆಂಟ್ ಸೊಸೈಟಿ ರಿಜಿಸ್ಟರ್ಡ್:”” ಮತ್ತು “ಶ್ರೀರಾಮ ಗೋಶಾಲೆ” ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು ಈ ಸಂಸ್ಥೆಯಿಂದ ದಿನನಿತ್ಯ ಉಚಿತ ಸಂಜೆ ಪಾಠ ಶಾಲೆ ನಡೆಸುತ್ತಿದೆ ಮತ್ತು ಈ ಸಂದರ್ಭದಲ್ಲಿ ಮಕ್ಕಳಿಗೆ 50 ಪ್ರಮಾಣ ಪತ್ರ 50

ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ : ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಗೆ ಕೆ ಎಚ್ ಸಿಸಿ ಎಲ್ 2022 ಪ್ರಶಸ್ತಿ

ಮಣಿಪಾಲ 19ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ , ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ ( ಕೆ ಎಚ್ ಸಿ ಸಿ ಎಲ್ 2022) ಆಯೋಜಿಸಿತ್ತು. 16ನೇ ಡಿಸೆಂಬರ್ 2022ರಂದು ಆರಂಭವಾದ ಕೂಟವು ಇಂದು ಅಂತ್ಯಗೊಂಡಿತು. ಇಂದು ನಡೆದ ಸಮಾರೂಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ , ಶ್ರೀ ಹಾಕೆ