Home Posts tagged #v4news karnataka (Page 85)

ಉಡುಪಿ : ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಶುಭಾರಂಭ

ಉಡುಪಿ ನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ದಿಶಾ ಸರ್ಜಿಕಲ್ಸ್ & ಲೈಫ್ ಕೇರ್, ಹಳೆ ಡಯಾನ ಸರ್ಕಲ್ ನ ಕಲ್ಪನಾ ರೆಸಿಡೆನ್ಸಿ ಬಿಲ್ಡಿಂಗ್ ನೆಲ ಮಹಡಿಯಲ್ಲಿ ಜನರ ಸೇವೆಗಾಗಿ ತೆರೆದುಕೊಂಡಿದೆ. ಇದರ ಉದ್ಘಾಟನಾ ಸಮಾರಂಭವು ಅಕ್ಟೋಬರ್ 14, 2022 ರ ಶುಕ್ರವಾರದಂದು ಜರುಗಿತ್ತು. ಈ ಶುಭ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ

ಬೈಕಂಪಾಡಿ :ಫಾಕ್ಟರಿಯಲ್ಲಿ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿ ಕಳವು

ಮಂಗಳೂರು ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್‍ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ ಕಂಪೆನಿಗೆ ಮೋಸ ಮಾಡಿದ ಕಂಪೆನಿಯ ನೌಕರ ಹಾಗೂ ಇತರ ಮೂರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಪಣಂಬೂರು ಪೆÇಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇದಿಸಿರುತ್ತಾರೆ.

ಉಚ್ಚಿಲ : ಏಕಾಏಕಿ ಮುಚ್ಚಿದ ಹೆದ್ದಾರಿ,ಗಲಿಬಿಲಿಗೊಂಡ ವಾಹನ ಸವಾರರು

ಕಾಮಗಾರಿಯ ಹೆಸರಲ್ಲಿ ಹೆದ್ದಾರಿಯನ್ನು ಏಕಾಏಕಿ ಮುಚ್ಚಿದ ಪರಿಣಾಮ ವಾಹನ ಸವಾರರು ಗಲಿಬಿಲಿಕೊಂಡು ರಾತ್ರಿ ಹೊತ್ತು ಸರಣಿ ಅಪಘಾತ ನಡೆದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಪೊಲೀಸ್ ಇಲಾಖೆ ಸಹಿತ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡಿದೆ ಕಾಮಗಾರಿ ಹೆಸರಲ್ಲಿ ಅಪಾಯಕಾರಿಯಾಗಿ ಹೆದ್ದಾರಿ ಮುಚ್ಚಿದ್ದು ಒಂದು ಕಡೆಯಾದರೆ, ಮತ್ತೊಂದು ಕಡೆ ಹೆದ್ದಾರಿ ಡಿವೈಡರ್ ಗಳಲ್ಲಿ ದಾರಿದೀಪಕ್ಕಾಗಿ ಎಲ್ಲೆಡೆ ಟವರ್‍ಗಳನ್ನು ನಿರ್ಮಿಸಿ ಅದೆಷ್ಟೋ ಕಾಲವಾದರೂ ದೀಪ

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿಯಲ್ಲಿ ಅಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಯುವಕ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಲು ನಿರ್ಧರಿಸಿದ್ದರು, ಅಂತೆಯೇ ಅಂಗಾಂಗಗಳನ್ನು ದಾನ ಮಾಡುವ ಪಕ್ರಿಯೆ ನಡೆಯಿತು. ಮಣಿಪಾಲ ಆಸ್ಪತ್ರೆಯ ವೈದ್ಯರು ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರನ್ನು ರಕ್ಷಿಸಲು

ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕರ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು

ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು

ಅಂತ್ಯ ಸಂಸ್ಕಾರ ಮಾಡಲು ಅಂಗೈಯಷ್ಟು ಜಾಗವಿಲ್ಲದೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಿದ ಜಾಗ ಒತ್ತುವರಿ

ಕಾಲ್ತೋಡು ಗ್ರಾಮದ ಯಡೇರಿ ಎಂಬಲ್ಲಿ ಸರ್ವೇ ನಂಬರ್ 293/* ರಲ್ಲಿ 0.50 ಎಕ್ರೆ ಸ್ಥಳವು 1998 ರಂದು ಮಾನ್ಯ ಸಹಾಯಕ ಕಮೀಷನರ್ ಆದೇಶದಂತೆ ಹಿಂದೂ ರುದ್ರಭೂಮಿಗೆ ಕಾಯ್ದಿರಿಸಲಾಗಿದೆ. ಅದನ್ನು ಖಾಸಾಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಬಡ ಜನರ ಮೃತ ದೇಹವನ್ನು ದಫನ ಮಾಡಲು ಜಾಗವಿಲ್ಲದೆ ಪರದಾಡುವಂತಾಗಿದೆ ಎಂದು ಜನತಾ ಕಾಲೋನಿಯ ಜನರು ಅಳಲು ತೋಡಿಕೊಂಡಿದ್ದಾರೆ ಬೈಂದೂರಿನ ಕಾಲ್ತೋಡಿನ ಯಡೇರಿ ಎಂಬಲ್ಲಿಯ ಜನತಾ ಕಾಲೋನಿಯರು ಜನರು ಹಿಂದೂ ರುದ್ರಭೂಮಿ ಇಲ್ಲದೆ ತೊಂದರೆಗೆ

ಬಿ.ಸಿ. ರೋಡ್‍ನಲ್ಲಿ ನಿರ್ಮಾಣ ಹಂತದ ಪಿಲ್ಲರ್ ಕುಸಿತ

ಬಂಟ್ವಾಳ : ಬಿ ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಗುರುವಾರ ಮಧ್ಯಾಹ್ನ ವೇಳೆ ಹಠಾತ್ ಕುಸಿತಗೊಂಡ ಘಟನೆ ನಡೆದಿದೆ.ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮೊದಲೇ ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ತೀರಾ

ಪುತ್ತೂರಿನ ಹೊರವಲಯದ ಪೋಳ್ಯ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ.ಆರೋಪಿಯ ಬಂಧನ.

ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ

ಉಪ್ಪಿನಂಗಡಿಯ ಪೊಲೀಸ್ ಠಾಣೆಯ ಎದುರಿನಲ್ಲೇ ಕಳ್ಳರ ಕೈಚಳಕ

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಉಪ್ಪಿನಂಗಡಿಯ ಲಕ್ಷ್ಮೀ ಸ್ಟೋರ್ ನ ಷಟರ್ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು 40 ಸಾವಿರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ದೋಚಿದ್ದಾರೆ. ಬಸ್ ನಿಲ್ದಾಣ ಬಳಿಯ ಸೆಲ್ ಸೈಟ್ ಮೊಬೈಲ್ ಶಾಪ್ ಗೆ ನುಗ್ಗಿದ ಕಳ್ಳರು 5 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಬ್ಯಾಂಕ್ ರಸ್ತೆಯಲ್ಲಿರುವ ಕಾಮತ್ ಕೋಲ್ಡ್ ಹೌಸ್ ಗೆ

ಮಂಗಳೂರಿನಲ್ಲಿ ಮತ್ತೆ ಪಿಎಫ್‍ಐ ಮುಖಂಡರ ಮನೆಗಳಿಗೆ ಪೊಲೀಸ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ