Home Posts tagged V4News

ಮಂಗಳೂರು : ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ

ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್, ಇವರ ವತಿಯಿಂದ ಇಂದು ವಿಶೇಷವಾಗಿ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ ಬಂಟರ ಭವನ ಸುರತ್ಕಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆಎಂಸಿ ಹಾಸ್ಪಿಟಲ್ ಮಂಗಳೂರು ಇದರ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ಆರ್. ನಾಯಕ್ ರವರು ಗರ್ಭಕಂಠದ

ರೋಟರಿ ಸಂಸ್ಥೆಯಿಂದ ಬೈಕಂಪಾಡಿ ಶಾಲೆಗೆ ಕವಾಟು ಕೊಡುಗೆ

ರೋಟರಿ ಕ್ಲಬ್ ಬೈಕಂಪಾಡಿ, ರೋಟರಿ ಕ್ಲಬ್ ದೇರಳಕಟ್ಟೆ, ರೋಟರಿ ಕ್ಲಬ್ ಮುಲ್ಕಿ ಇವರ  ಆಶ್ರಯದಲ್ಲಿ ನಡೆದ ರೋಟರಿ ದತ್ತ ನಿಧಿಯ ಜಿಲ್ಲಾ ಅನುದಾನದ  ಅಡಿಯಲ್ಲಿ ರೂಪಾಯಿ 55,೦೦೦/ಮೊತ್ತದ ಪುಸ್ತಕಗಳನ್ನು ಇಡುವ ಕವಾಟನ್ನು ರೋಟರಿ ೩೧೮೧ ಜಿಲ್ಲೆಯ ಪೂರ್ವ ಗವರ್ನರ್ ಹಾಗೂ ರೋಟರಿ ಫೌಂಡೇಶನ್ ಇದರ ಚೇರ್ಮನ್ ಆಗಿರುವ ರೋಟ ರಂಗನಾಥ್ ಭಟ್ ಅವರ ಸಮ್ಮುಖದಲ್ಲಿ ಸರಕಾರಿ ಸoಯುಕ್ತ ಹೈಸ್ಕೂಲ್ ಅಂಗರಗುಂಡಿ , ಬೈಕಂಪಾಡಿ ಶಾಲೆಗೆ ಕೊಡುಗೆಯಾಗಿ ನೀಡಲಾಯಿತು. ರೋಟರಿ ಕ್ಲಬ್

ಮಂಗಳೂರು: ತಣ್ಣೀರುಬಾವಿ ಬೀಚ್‌ನಲ್ಲಿ ಗಾಳಿಪಟಗಳ ಚಿತ್ತಾರ..!

ಕಡಲ ನಗರಿ ಮಂಗಳೂರಿನ ಬಾನಂಗಳಲ್ಲಿ ವಿವಿಧ ಆಕಾರಗಳ ಗಾಳಿಪಟಗಳ ಚಿತ್ತಾರ.. ಎಲ್ಲಿ ನೋಡಿದರಲ್ಲಿ ಕಲರ್‌ಪುಲ್ ಗಾಳಿಪಟಗಳು.. ಒಂದಕ್ಕೊಂದು ವಿಭಿನ್ನ ಮತ್ತು ಆಕರ್ಷಣೆಯ ಗಾಳಿಪಟಗಳು.. ಇದು ಕಂಡು ಬಂದಿರುವುದು ತಣ್ಣೀರುಬಾವಿ ಬೀಚ್‌ನಲ್ಲಿ.. ಹೌದು.. ಕರಾವಳಿ ಉತ್ಸವದ ಅಂಗವಾಗಿ ಏರ್ಪಡಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಇಲ್ಲಿನವರಿಗೂ ದೇಶವಿದೇಶಗಳ ಗಾಳಿಪಟಗಳ ವೈವಿಧ್ಯವನ್ನು ಕಣ್ತುಂಬಿಕೊಳ್ಳುವ ಅವಕಾಶ ಕಲ್ಪಿಸಿತು. ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡವು

ಮಂಗಳೂರಿನಲ್ಲಿ ಐದು ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೆಸ್ಟ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಅಧಿಕೃತ ಚಾಲನೆ ದೊರೆಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ

ಕಂಬದ ಕೋಣೆಯಲ್ಲಿ ಬೈಂದೂರಿನ ಎರಡನೇ ಗೋಮಾಳ ಅಭಿವೃದ್ಧಿ, ಗೋವುಗಳ ರಕ್ಷಣೆಯೇ ನಮ್ಮ ಆದ್ಯತೆ : ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್‌ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 13 ಮಂದಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.

ಬೈಂದೂರು ತಾಲೂಕಿನ 20 ಕುಟುಂಬಕ್ಕೆ 94 ಸಿ ಯಡಿ ಹಕ್ಕು ಪತ್ರ ವಿತರಿಸಿದ ಶಾಸಕ ಗುರಾರಾಜ್ ಶೆಟ್ಟಿ ಗಂಟಿಹೊಳೆ

ಬೈಂದೂರು: ಬೈಂದೂರು ತಾಲೂಕಿನಲ್ಲಿ ಸರಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿ ಕೊಂಡು ವಾಸವಾಗಿರುವ 20 ಫಲಾನುಭವಿಗಳಿಗೆ ಶಾಸಕ ಗುರುರಾಜ್‌ ಶೆಟ್ಟಿ ಗಂಟಿ ಹೊಳೆಯವರು ಜನವರಿ 16ರಂದು ತಾಲೂಕು ಕಚೇರಿಯಲ್ಲಿ ಹಕ್ಕು ಪತ್ರ ವಿತರಿಸಿದರು.ನಂತರ ಮಾತನಾಡಿದ ಶಾಸಕರು, ವಾಸ್ತವ್ಯದ ಹಕ್ಕು ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸವಾಗಿದ್ದರೂ ಕೂಡ ಹಕ್ಕು ಪತ್ರ ಇಲ್ಲದೇ ಸರಕಾರದ ಯಾವುದೇ ಸೌಲಭ್ಯ ಪಡೆಯದೇ ಇರುವ

ನಾಪತ್ತೆಯಾದ ಮೀನುಗಾರನನ್ನು ಹುಡುಕುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ಖಂಡನೀಯ: ಶಾಸಕ ಗುರುರಾಜ್‌ ಗಂಟಿಹೊಳೆ

ಬೈಂದೂರು: ಇತ್ತೀಚಿಗೆ ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೋಗವೀರ ಅವರ ಕುಟುಂಬಕ್ಕೆ ಮೀನುಗಾರ ಸಂಕಷ್ಟ ಪರಿಹಾರ ನಿಧಿಯಡಿ ತಕ್ಷಣವೇ ಪರಿಹಾರ ಒದಗಿಸಬೇಕು ಹಾಗೂ ಅಧಿಕಾರಿಗಳು ಯಜಮಾನನನ್ನು ಕಳೆದುಕೊಂಡ ಆ ಕುಟುಂಬದ ನೋವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ಆಕ್ರೋಶ ಹೊರ ಹಾಕಿದ್ದಾರೆ.ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಕ್ಷೇತ್ರದ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಬಗೆಗಿನ ಚರ್ಚೆ ವೇಳೆ ಶಾಸಕ ಗುರುರಾಜ್‌ ಗಂಟಿಹೊಳೆ ಆಕ್ರೋಶ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ ,
ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ

ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,ಪ್ರಧಾನ ಕಾರ್ಯದರ್ಶಿಯಾಗಿ ಗಿರಿಧರ್ ಜೆ ಮೂಲ್ಯ, ಕೋಶಾಧಿಕಾರಿಯಾಗಿ ದಯಾನಂದ್ ಪಿ ಎಸ್ ಕುತ್ತಾರ್ ಮತ್ತು ಮೊತ್ತೇಸರರಾಗಿ ಮೋಹನ್‌ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ ಮುಡಿಪು, ಆನಂದ ಪಿ ಉರ್ವ,

ಮಂಗಳೂರು: ರಾಜೀವ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರಿನಲ್ಲಿ ಇಂದು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನ ನೆರವೇರಿಸಿದರು. ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕ ಭರತ್ ಶೆಟ್ಟಿ ಉಪಸ್ಥಿತರಿದ್ದರು.

ಕಡಬ: ಮನೆಗೆ ನುಗ್ಗಿ ಕಳವು ಪ್ರಕರಣ: ಆರೋಪಿಯ ಬಂಧನ

ಕಡಬ ಠಾಣಾ ವ್ಯಾಪ್ತಿಯ ಮರ್ದಾಳ ಸಮೀಪದ ಮನೆಯೊಂದರಿಂದ ಹಾಡಹಗಲೇ ಬಾಗಿಲು ಮುರಿದು ಒಳ‌ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿರುವ ಕಳ್ಳನನ್ನು ಪೋಲೀಸರು ಗುರುವಾರ ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂಬಾತನನ್ನು ಬಂಧಿಸಿದ್ದಾರೆ.ಕ್ಷಿಪ್ರ ಕಾರ್ಯಾಚನೆ ನಡೆಸಿರುವ ಕಡಬ ಪೊಲೀಸರು ಐದೇ ದಿನದಲ್ಲಿ ಕಳ್ಳನನ್ನು ಪತ್ತೆ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಕೆರ್ಮಯಿ ಚರ್ಚ್ ಸಮೀಪದ, ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್ ಅವರು