Home Posts tagged V4News (Page 119)

ವಿಟ್ಲ: ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಕಾಮಗಾರಿ: ವಿಟ್ಲದಲ್ಲಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ: ಸಂಜೀವ ಮಠಂದೂರು

ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಟಿಎಲ್ ಗುತ್ತಿಗೆ ನೀಡಿ ಸ್ಟರ್ಲೈಟ್ ಕಂಪೆನಿ ಸ್ಥಳ ಸರ್ವೇ ಮೂಲಕ ವಿದ್ಯುತ್ ಲೈನ್

ಮಂಗಳೂರು: ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯ ಮರಳು ನೀತಿಯೇ ಕಾರಣ: ಹರೀಶ್ ಕುಮಾರ್

ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ್ದ ಘೋಷಣೆ ಅನುಷ್ಠಾನ ಆಗಿದೆಯೇ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಜಿಲ್ಲಾ

ಬೈಂದೂರು: ಅಕಾಲಿಕ ಮಳೆಯಿಂದಾಗಿ ಭತ್ತದ ಕೃಷಿಗೆ ಜಲ ದಿಗ್ಬಂಧನ

ಬೈಂದೂರು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಭತ್ತದ ಫಸಲು ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಕೃಷಿಕರು ಕಂಗಾಲಾಗಿ ದಿಕ್ಕು ತೋಚದಂತಾಗಿದೆ. ಮಳೆಯಿಂದಾಗಿ ಕಟಾವಿಗೆ ಬಂದ ಭತ್ತದ ಪೈರುಗಳು ಹಾಗೂ ಕಟಾವಿನ ನಂತರ ಜಾನುವಾರುಗಳ ಒಣ ಹುಲ್ಲುಗಳು, ಜೊತೆಗೆ ಕಟಾವಿನ ನಡುವೆ ದ್ವಿದಳ ಧಾನ್ಯಗಳನ್ನು ಸಹ ಈಗಾಗಲೇ ಬಿತ್ತನೆ ಮಾಡಿದ್ದು, ಅದು ಕೂಡ ಮಳೆಯಿಂದ ಹಾನಿಯಾಗಿ ಅಪಾರವಾದ ಬೆಳೆ ಹಾಗೂ ಜಾನುವಾರುಗಳ ಮೇವಿನ ಹುಲ್ಲುಗಳು ಹಾನಿಯಾಗಿದೆ. ಕೋಣ್ಕಿ, ಬಡಾಕೆರೆ, ತಾರೀಬೇರು, ಜಡ್ಡಾಡಿ,

ಕಡಬದಲ್ಲಿ ಸಾರ್ವಜನಿಕರಿಂದ ಜಿಲ್ಲಾಧಿಕಾರಿಗೆ ಮನವಿ

ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ ತಡವಾಗಿರುವುದರಿಂದ ಕಡಬದ ಕಾರ್ಯಕ್ರಮ ರದ್ದು ಗೊಳಿಸಿದ್ದರು. ಜಿಲ್ಲಾಧಿಕಾರಿಯವರ ಕಾರು ಕಡಬಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ ಮನವಿ ಸಲ್ಲಿಸಿದರು. ಸಾರ್ವಜನಿಕರ

ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಐದು ವಾಹನಗಳು ಜಖಂ..!!

ಸುರತ್ಕಲ್‍ನ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಿದ್ದ ಸಿಮೆಂಟ್ ತುಂಬಿದ ಲಾರಿಯೊಂದು ಆಕಸ್ಮಿಕವಾಗಿ ಹಿಂದಕ್ಕೆ ಚಲಿಸಿ, ನಿಲ್ಲಿಸಿದ್ದ ನಾಲ್ಕು ಕಾರು, ಒಂದು ಬೈಕ್‍ಗೆ ಗುದ್ದಿ ಹಾನಿ ಮಾಡಿದ ಘಟನೆ ನಡೆದಿದೆ. ಸಂಜೆ ವೇಳೆಗೆ ಈ ಘಟನೆ ಸಂಭವಿಸಿದ್ದು, ಚಾಲಕ ಲಾರಿಯನ್ನು ನಿಲ್ಲಿಸಿ ಹೊರಗೆ ತೆರಳಿದ್ದ. ಏಕಾಏಕಿ ಹಿಂದಕ್ಕೆ ಚಲಿಸಿದ ಲೋಡ್ ಲಾರಿ ಡಿವೈಡರ್ ಬಳಿ ತಿರುವು ತೆಗೆದುಕೊಂಡು ಬಂದಿದೆ. ಇದರಿಂದ ಮಾರ್ಕೆಟ್ ಅಂಗಡಿಗೆ ಬಂದಿದ್ದ ಗ್ರಾಹಕರ ನಾಲ್ಕು

ಕೆ. ಷರೀಫಾ ಅವರ ʼನೀರೊಳಗಣ ಕಿಚ್ಚುʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಚಿಂತಕಿ, 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತೆ ಕೆ. ಷರೀಫಾರವರ ʼನೀರೊಳಗಣ ಕಿಚ್ಚುʼ ಕಥಾಸಂಕಲನ ಆಯ್ಕೆಯಾಗಿದೆ. ಕೃಷಿ ಮಾರುಕಟ್ಟೆ ಇಲಾಖೆಯಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ 2017ರಲ್ಲಿ ನಿವೃತ್ತಿಹೊಂದಿರುವ ಕೆ. ಷರೀಫಾ ಮುಸ್ಲಿಮ್

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವು

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಮುಂಜಾನೆ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು ಆರಂಭಿಸಲಾಯಿತು. ಸುಮಾರು 200 ರಾಷ್ಟ್ರಗಳಲ್ಲಿ ಈ ಆಚರಣೆ ಮಾಡಲಾಗುತ್ತಿದೆ. 1895ನೇ ನವೆಂಬರ್ 8ರಂದು ವಿಲಿಯಮ್ ಕೊನ್ರಾಡ್ ರೊಂಟ್‍ಜೆನ್ ಎಂಬ ವಿಜ್ಞಾನಿ ಕ್ಷ-ಕಿರಣಗಳನ್ನು ಪತ್ತೆ ಹಚ್ಚಿದನು. ಕ್ಯಾಥೋಡ್ ಕಿರಣಗಳ ಬಗ್ಗೆ ಸಂಶೋಧನೆ ನಡೆಸುವಾಗ

ಪುತ್ತೂರು : ಅಕ್ಷಯ ಕಲ್ಲೇಗನನ್ನು 58ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್..!

ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ

ಬ್ರಹ್ಮಾವರ|| ಅಂಬೇಡ್ಕರ್ ಭವನದಲ್ಲಿ ಭರ್ಜರಿ ಎಣ್ಣೆ ಪಾರ್ಟಿ: ವಿಡಿಯೋ ಮಾಡಿದ ಮಹಿಳೆಗೆ ಬೆದರಿಕೆ, ದೂರು ದಾಖಲು

ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವಿಚಾರ ತಿಳಿದ ಸ್ಥಳೀಯ ಮಹಿಳೆ ಸವಿತಾ ಎನ್ನುವವರು ಅಂಬೇಡ್ಕರ್ ಭವನಕ್ಕೆ ತೆರಳಿ ಮದ್ಯಪಾನ ಮಾಡುತ್ತಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿ, ವಿಡಿಯೋ