ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವತಂತ್ರೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ
ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ವ್ಯಕ್ತಿಯೋವ೯ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಅವನ ಮೇಲೆ ಯಾರು ದೂರು ಕೊಡದ ಕಾರಣ ಪೊಲೀಸ್ ಇಲಾಖೆ ಆತನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಇದನ್ನು ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತ: ಸಂಘಟನೆ ವತಿಯಿಂದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ ಜಿ ಅವರಿಗೆ ದೂರನ್ನು ನೀಡಿದ್ದಾರೆ.ದೂರು
ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು
ಕಾಪು: 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವು ಕಾಪು ಬ್ಲಾಕ್ ಕಾಂಗ್ರೆಸ್ ಕಚೇರಿ, ರಾಜೀವ್ ಭವನದಲ್ಲಿ ನಡೆಯಿತು. ಧ್ವಜಾರೋಹಣವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ನೆರವೇರಿಸಿದರು. ಭಾರತವು ಇಂದು 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ವಿವಿಧ ಧರ್ಮ, ಜಾತಿಯ ಅನೇಕ ಮಹಾನ್ ನಾಯಕರು, ನಾಯಕಿಯರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಹೋರಾಡಿ ಹುತಾತ್ಮರಾಗಿರುವುದು
ಹೆಜಮಾಡಿ: 79ನೇ ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ಭಾರತೀಯ ಸೇನೆಯ ಆರ್ಟಿಲರಿ ವಿಭಾಗದಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಮ್ಮ ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ರಾವ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಯೋಧ ಚೇತನ್ ಶ್ರೀಯನ್ ರವರ ಬಗ್ಗೆ ಕೋಟೆ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಸುವರ್ಣ ರವರು
ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್ಎ ಹಾಗೂ ನೆದರ್ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್ಎ ಲೋಕ ರಫ್ತು ಪ್ರಮಾಣ 7 ಶೇಕಡಾ. 2010ರವರೆಗೆ ಪೆರು ದೇಶದಲ್ಲಿ ನೀಲಿ ಬೆರಿ ಬೆಳೆ ರಫ್ತು ಪ್ರಮಾಣ […]
ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.
ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ
ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ



























