Home Posts tagged V4News (Page 31)

ಕುಂದಾಪುರ : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿತ್ರಾಸಿ-ಮರವಂತೆ ಗ್ರಾಮದ ಗಡಿ ಗುರುತು

ಕುಂದಾಪುರ ತಾಲೂಕಿನ ತ್ರಾಸಿ ಹಾಗೂ ಬೈಂದೂರು ತಾಲೂಕಿನ ಮರವಂತೆ ಈ ಎರಡು ಸ್ಥಳಗಳ ಮಧ್ಯಭಾಗದ ಗಡಿ ಗುರುತು ಮಾಡುವ ಕಾರ್ಯ ರಾಷ್ಟ್ರೀಯ ಹೆದ್ದಾರಿಯ 66 ಬಳಿ ನಡೆದಿದೆ.ತ್ರಾಸಿ ಮತ್ತು ಮರವಂತೆ ಮಧ್ಯ ಭಾಗದ ನಡುವೆ ತ್ರಾಸಿ ಗ್ರಾಮದ ಗಡಿ ಗುರುತು ಮಾಡಿಕೊಡುವಂತೆ ತ್ರಾಸಿ ಗ್ರಾಮ ಪಂಚಾಯತ್ ಮನವಿ ಮೇರೆಗೆ ಕುಂದಾಪುರ ತಹಶೀಲ್ದಾರ್ ಅವರು ರಾಷ್ಟ್ರೀಯ ಯ ಹೆದ್ದಾರಿ 66ರ ಬಳಿ

ಮೂಡುಬಿದಿರೆ : ಸ್ವಣೋ೯ದ್ಯಮಿ ಶ್ರೀಧರ್ ಆಚಾಯ೯ ನಿಧನ

ಮೂಡುಬಿದಿರೆ : ಸ್ವಣೋ೯ದ್ಯಮಿ ಮೂಡುಬಿದಿರೆಯ ಸುಧಾ ಜ್ಯುವೆಲ್ಲರ್ಸ್ ನ ಮಾಲಕ ಶ್ರೀಧರ ಆಚಾರ್ಯ (84) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನ ಹೊಂದಿದರು.ಅವರು ಮೂಡುಬಿದಿರೆಯಲ್ಲಿ ಸುಧಾ ಜ್ಯುವೆಲ್ಲರ್ಸ್, ಲಕ್ಷ್ಮೀ ಜ್ಯುವೆಲ್ಲರ್ಸ್ ನ ಸ್ಥಾಪಕರಾಗಿದ್ದರು.ಮೂಡುಬಿದಿರೆ ಗುರುಮಠ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ 1997- 2002 ರ ಅವಧಿಯಲ್ಲಿ ಎರಡನೇ ಮೊಕ್ತೇಸರರಾಗಿ ಸೇವೆ ಸಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.ಮೃತರು ಪತ್ನಿ, ಐದು ಮಂದಿ

ಬೆಂಗಳೂರು: ದ.ಕ, ಉಡುಪಿ ಜಿಲ್ಲೆಯ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ , ಅಧಿಕಾರಿಗಳ ಸಭೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲೆಯಲ್ಲಿನ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ106ರಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕೆಂಪು ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಪಡುಬಿದ್ರಿ ಸಂತೆಕಟ್ಟೆ ದೈವರಾಜ ಕೋರ್ದಬ್ಬು ದೈವಸ್ಥಾನ ಅಧ್ಯಕ್ಷರಾಗಿ ಶಶಿಕಾಂತ್ ಪಡುಬಿದ್ರಿ ಆಯ್ಕೆ

ಪಡುಬಿದ್ರಿ: ಸಂತೆಕಟ್ಟೆ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾರ್ಯಕಾರಿ ಸಮಿತಿಯ ವಾರ್ಷಿಕ ಮಹಾ ಸಭೆಯು ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಮಾಜಿ ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ ಆಯ್ಕೆಯಾದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಬಿ. ದಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರವಿರಾಜ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಯತೀಶ್ ದೇವಾಡಿಗ, ಕೋಶಾಧಿಕಾರಿಯಾಗಿ ಚಿತ್ರಾಕ್ಷಿ ಕೆ. ಕೋಟ್ಯಾನ್, ಜತೆ ಕೋಶಾಧಿಕಾರಿಯಾಗಿ

ಮೂಡುಬಿದಿರೆ : ಕಳಕೊಂಡ ಚಿನ್ನವನ್ನು 65 ಗಂಟೆಯಲ್ಲಿ ಪತ್ತೆ ಮಾಡಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಆ. 8 ರಂದು ಮಹಿಳೆಯೋವ೯ರು ಪಸ್ ೯ ಸಹಿತ 72 ಗ್ರಾಂ ಚಿನ್ನವನ್ನು ಕಳೆದುಕೊಂಡಿದ್ದು ಅದನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ನೇತೃತ್ವದ ತಂಡವು 65 ಗಂಟೆಯಲ್ಲಿ ಪತ್ತೆ ಹಚ್ಚಿ ಸಂಬಂಧಪಟ್ಟವರಿಗೆ ಸೋಮವಾರ ಹಸ್ತಾಂತರಿಸಿ ಮೆಚ್ಚುಗೆಗೆ ಪಾತ್ರವಾಗಿದೆ.ಪಡುಮಾನಾ೯ಡಿನ ದಿ. ಧಮ೯ಪಾಲ ಬಲ್ಲಾಳ್ ಅವರ ಪತ್ನಿ ವಿಜಯ ಅವರು ಆ. 8ರಂದು ಕುಪ್ಪೆಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದಭ೯ ಮಧ್ಯಾಹ್ನ 2 ಗಂಟೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ಸೇವೆ ನಿರಾಕರಣೆ:ಸಂಸದ ಕ್ಯಾ. ಚೌಟ ಕಳವಳ

ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು

ಮಂಗಳೂರು:ಎಸ್ ಸಿಡಿಸಿಸಿ ಬ್ಯಾಂಕ್ ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್  ಪ್ರಥಮ ಪ್ರಶಸ್ತಿ

ಮಂಗಳೂರು *  ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಪ್ರಥಮ ಪ್ರಶಸ್ತಿ ಲಭಿಸಿದೆ. ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ  ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರತಿಷ್ಠಿತ

ಮೂಡುಬಿದಿರೆ,:ನಿವೃತ್ತ ಮುಖ್ಯೋಪಾಧ್ಯಾಯ, ರಂಗನಟ ಎಚ್. ಶಾಂತಿರಾಜ ಶೆಟ್ಟಿ ನಿಧನ

ಮೂಡುಬಿದಿರೆ, : ಇಲ್ಲಿನ ಡಿ.ಜೆ. ಅನುದಾನಿತ ಹಿ.ಪ್ರಾ.ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ , ರಂಗ ಕಲಾವಿದ ಎಚ್. ಶಾಂತಿರಾಜ ಶೆಟ್ಟಿ (91)ಅವರು ಭಾನುವಾರ ನಿಧನ ಹೊಂದಿದರು. 1960ರ ಸುಮಾರಿಗೆ ಮೂಡುಬಿದಿರೆಯಲ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ, ವಾಸುದೇವ ರಾವ್, ಎಂ ಎಸ್.ಜೀವನ್, ವಾಸು ಸಾಲಿಯಾನ್ ಮೊದಲಾದವರ ಉತ್ಸಾಹದಲ್ಲಿ ರೂಪುಗೊಂಡಿದ್ದ ನೂತನ ಕಲಾವೃಂದದ ನಾಟಕಗಳಲ್ಲಿ ಅಭಿನಯಿಸಿದ್ದರು.ಇಂಗ್ಲಿಷ್ ಪಾಠಮಾಡುವುದರಲ್ಲಿ ಪರಿಣತರಾಗಿದ್ದರು,ವಿದ್ಯಾರ್ಥಿಗಳ ಕ್ಷೇಮಪಾಲನ

ಸುಳ್ಯ:ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ: ಶಾಲಾ ಮಕ್ಕಳ ಶಿಸ್ತು ಕಂಡು ಅಚ್ಚರಿ

ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್ ವೇಗಸ್ ರವರ ನೇತೃತ್ವದಲ್ಲಿ ಮಕ್ಕಳು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಶಾಲಾ ನಾಯಕ ಆಕಾಶ್ ನೇತೃತ್ವದಲ್ಲಿ ಬ್ಯಾಂಡ್ ಮೂಲಕ ಸ್ವಾಗತಿಸಿ ವೇದಿಕೆಗೆ ಕರೆತರಳಾಯಿತು. ಸ್ವಾಗತ ನೃತ್ಯದೊಂದಿಗೆ ಸ್ವಾಗತ

ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ವಿವಿಧ ಸವಲತ್ತು – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

2024-25 ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಗೆ ಗರಿಷ್ಠ 8000 ವರೆಗೆ ಉಚಿತ ಸುಧಾರಿತ ಉಪಕರಣಗಳು ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ಮಂಜೂರಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಕಾಪು ಶಾಸಕರ ಕಚೇರಿಯಲ್ಲಿ ಸಾಂಕೇತಿಕವಾಗಿ 9 ಫಲಾನುಭವಿಗಳಿಗೆ ವಿತರಿಸಿದರು.