Home Posts tagged V4News (Page 328)

ಸೋಮೇಶ್ವರ : ದೋಣಿ ಮತ್ತು ಮೀನಿನ ಬಲೆ ಬೆಂಕಿಗಾಹುತಿ

ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮದ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ ಆರೋಪಿ ಬಂಧನ

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ(50) ಎಂಬುವವರನ್ನು ಫೆಬ್ರವರಿ 3ರಂದು ಅಂಗಡಿಯಲ್ಲೇ ಚೂರಿಯಿಂದು ಕೊಲೆ ಮಾಡಲಾಗಿತ್ತು.

ಮೂಡುಬಿದಿರೆಯ ಉದ್ಯಮಿ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು ಶುಕ್ರವಾರ ಬೆಳಗಿನ ವೇಳೆ ತನ್ನ ಉದ್ಯಮ ಮಳಿಗೆಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಗೊಂಡಿದ್ದು

ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿ ; ಗುಣಮಟ್ಟದ ಕಾಮಗಾರಿಗಾಗಿ ಮರದ ಹಲಗೆ ತೆರವು ಗೊಳಿಸಿದ ಅಧಿಕಾರಿಗಳು !

ಪುತ್ತೂರು: ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಗುಣಮಟ್ಟದ ಕಾಮಗಾರಿಗಾಗಿ ಈಗಾಗಲೇ ಅಳಡಿಸಿದ ಮರದ ಹಲಗೆಯನ್ನು ತೆರವುಗೊಳಿಸಿ ಕಬ್ಬಿಣದ ಹಲಗೆಯನ್ನು ಅಳವಡಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಮಾ.2ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ ಬಂದಿರುವ ಕಾರ್ಯಪಾಲಕ ಅಭಿಯಂತರ ಪುರಂದರ, ಸಹಾಯಕ ಕಾರ್ಯಪಾಲಕ ಅಭಿಯಂತರ ಅರುಣ್, ಕೃಷ್ಣಮೂರ್ತಿ ಅವರು ಹಾರಾಡಿಯಿಂದ ರೈಲ್ವೇ ನಿಲ್ದಾಣ ಕಾಮಗಾರಿ ನಡೆಯುತ್ತಿರುವುದನ್ನು

Special MSME Vendors’ Meet for SC / ST and Women Entrepreneurs

Mangalore Refinery and Petrochemicals Limited (MRPL) held Special MSME Vendors’ Meet for SC / ST and Women Entrepreneurs at Hotel AJ Grand, Mangalore on 2nd March 2023.  MRPL officials presented overview of MRPL’s procurement procedure, MSME initiatives and benefits of the Government eMarketplace (GeM) portal.   Shri Devaraj K, Dy Director, MSME encouraged the SC

ಅಡುಗೆ ಅನಿಲ ಬೆಲೆಯೇರಿಕೆ ವಿರೋಧಿಸಿ ಸಿಪಿಐಎಂ ಪ್ರತಿಭಟನೆ

ಅಡುಗೆ ಅನಿಲ ಬೆಲೆಗಳನ್ನು ಅತ್ಯಂತ ಕ್ರೂರವಾಗಿ ಏರಿಕೆ ಮಾಡಿದ ಕೇಂದ್ರ ಸರಕಾರದ ಕೆಟ್ಟ ನಿರ್ಧಾರದ ವಿರುದ್ಧ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಇಂದು (2-3-2023) ನಗರದ ಕ್ಲಾಕ್ ಟವರ್ ಬಳಿ ಅಡುಗೆ ಖಾಲಿ ಅಡುಗೆ ಅನಿಲ ಸಿಲಿಂಡರ್ ಪ್ರದರ್ಶಿಸಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.  ಪ್ರತಿಭಟನೆಯ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡುತ್ತಾ ಬಿಜೆಪಿ ಸರಕಾರ ಗ್ಯಾಸ್ ದರ ಏರಿಕೆ

ಕೊಯಿಲ ಫಾರ್ಮ್‍ನ ಹುಲ್ಲುಗಾವಲಿಗೆ ಆಕಸ್ಮಿಕ ಬೆಂಕಿ

ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ ಮುಗಿಲೆತ್ತರಕ್ಕೆ ಚಾಚಿದ್ದು ಭಯಾನಕವಾಗಿತ್ತು. ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು ಲಾರಿಯಿಂದ ರಸ್ತೆಗೆ ಚೆಲ್ಲಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಯದಿಂದ ಪಾರಾಗಿದ್ದಾರೆ.

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಕಾಂಕ್ರೀಟ್‌ನಿಂದ ಕೂಡಿದೆ. ಈ ರಸ್ತೆಗೆ ವಿವಿಧ ಹಂತದಲ್ಲಿ ಸರಕಾರದಿಂದ

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ