Home Posts tagged V4News (Page 4)

ಹಿಮೋಫಿಲಿಯಾ ಎಂಬ ಪ್ರೀತಿಯ ನೆತ್ತರು

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಈಗ ರಕ್ತ ಪ್ರೀತಿಯ ಹಿಮೋಫಿಲಿಯಾ ಸಮಗ್ರ ಕಾಳಜಿ ಕೇಂದ್ರ ಆರಂಭವಾಗಿದೆ. ಈಗ ಚುನಾವಣಾ ಕಾಲವಾದುದರಿಂದ ಈಗ ರಕ್ತ ಸಂಬಂಧ ಕಾಣಿಸದ ಜಿದ್ದಾಜಿದ್ದಿನ ಹೋರಾಟವೇ ಎಲ್ಲೆಡೆ ಕಾಣಿಸುತ್ತಿದೆ. ಮಿಶನರಿಗಳು, ಕ್ರಿಶ್ಚಿಯನರುಗಳು ಇಲ್ಲೆಲ್ಲ ಆಸ್ಪತ್ರೆಗಳನ್ನು ಆರಂಭಿಸಿದಾಗ ಇದ್ದ ಬರೇ ಸೇವೆ ಎಂಬುದು ಈ ಕಾಲಕ್ಕೆ ನಡೆಯದ ನಾಣ್ಯವೇ ಸರಿ.

ಬಾಯಿ ಅರ್ಬುದ ರೋಗ

ಬಾಯಿಯ ಒಳಗಿನ ಜೀವಕೋಶಗಳು ಅನಿಯಂತ್ರಿತವಾಗಿ ಬೆಳೆದು, ಗಡ್ಡೆಗಳ ರೂಪದಲ್ಲಿ ಬೆಳೆಯುವುದಕ್ಕೆ ಬಾಯಿಯ ಅರ್ಬುದ ರೋಗ ಅಥವಾ ಬಾಯಿಯ ಕ್ಯಾನ್ಸರ್ ಎಂದು ಹೇಳುತ್ತೇವೆ. ಅರ್ಬುದ ರೋಗ ಎನ್ನುವುದು ಒಂದು ವಿಶ್ವವ್ಯಾಪ್ತಿ ಹರಡಿರುವ ಒಂದು ಭೀಕರವಾದ ರೋಗ. ಗಂಡಸರಲ್ಲಿ ಶ್ವಾಸಕೋಶ, ಕರುಳು ಮತ್ತು ಬಾಯಿಯ ಕ್ಯಾನ್ಸರ್ ಹೆಚ್ಚು ಹೆಚ್ಚು ಕಾಣ ಸಿಗುತ್ತದೆ. ಹೆಂಗಸರಲ್ಲಿ ಜನನಾಂಗ, ಎದೆ ಮತ್ತು ಗರ್ಭಕೋಶದ ಕ್ಯಾನ್ಸರ್ ಹೆಚ್ಚು ಕಾಣಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಂಬಾಕು,

ವಿಶ್ವ ಹಿಮೋಫಿಲಿಯಾ ದಿನ-ಏಪ್ರಿಲ್ 17

ವಿಶ್ವ ಹಿಮೋಫಿಲಿಯಾ ಸೊಸೈಟಿ ಹಿಮೋಫಿಲಿಯಾ ರೋಗದಿಂದ ಬಳಲುತ್ತಿರುವ ರೋಗಿಗಳ ಜೀವನ ಮಟ್ಟದ ಸುಧಾರಣೆ ಮಾಡಲು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, 1989ರಲ್ಲಿ ಎಪ್ರಿಲ್ 17ರಂದು ‘ವಿಶ್ವ ಹಿಮೋಫಿಲಿಯಾ ದಿನ” ಆಚರಣೆಯನ್ನು ಜಾರಿಗೆ ತಂದಿತು. 1963ರಲ್ಲಿ ಪ್ರಾಂಕ್ ಶ್ಯಾನ್‍ಬೆಲ್ ಎಂಬವರಿಂದ ಆರಂಭಗೊಂಡ ಈ ವಿಶ್ವ ಹಿಮೋಫಿಲಿಯಾ ಸೊಸೈಟಿ, ವಿಶ್ವದಾದ್ಯಂತ ಹಿಮೋಫಿಲಿಯಾ ರೋಗಿಗಳ ಶುಶ್ರೂಷೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು

ಏನೋ ಮಾಡಿ ಏನೋ ಆದ ಪ್ರಚಂಡ ಕುಳ್ಳ

ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಹಸ ಸಾಧಕರೂ ಹೌದು, ಗುಂಪುಗಾರಿಕೆಯನ್ನು ಸಾಧಿಸಿದವರೂ ಹೌದು. ಸಾಕಷ್ಟು ಯಶಸ್ಸು ಕಂಡರೂ ಕೊನೆಗೆ ಕಳೆದುಕೊಂಡುದೇ ಹಣೆಬರಹ. ಹಿಂದಿನ ಕಾಲದ 80 ಶೇಕಡಾಕ್ಕೂ ಹೆಚ್ಚು ನಟನಟಿಯರ ಪಾಡು ಇದೇ ಆಗಿತ್ತು. ಈಗಿನ ನಟ ನಟಿಯರು ಬಹುತೇಕ ಹುಶಾರು. ಅವರು

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಫಾದರ್ ಮುಲ್ಲರ್

ವಿದೇಶದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ

ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ ನೆಲದಲ್ಲಿ ಪ್ರದರ್ಶನ ನೀಡುತ್ತಿರುವುದು ಯಕ್ಷರಂಗದ ಇತಿಹಾಸದಲ್ಲಿ ಪ್ರಥಮವೆನಿಸಿದೆ. ವಿದೇಶದ

ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್, ಸೂಕಿ ಖಾಲ ಚಾನಾ, ಆಲೂ ತಮಾಟರಿ ಕರಿ, ಪನೀರ್ ಕೋಫ್ತಾ, ರಾಜ್ಮಾ ಕರಿ, ಸಿಂಗಾರ ಪುರಿ, ರೈಸ್ ಕೀರ್,

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ

ಮೂಡುಬಿದಿರೆ: ಪಂಜಿನ ಮೆರವಣಿಗೆಯೊಂದಿಗೆ ಮತದಾನದ ಜಾಗೃತಿ

ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ., ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಮೂಡುಬಿದಿರೆ ತಹಶೀಲ್ದಾರ್

ಕಿವಿಗುಗ್ಗೆ

ಪಂಚೇಂದ್ರಿಯಗಳಾದ ನಾಲಗೆಯಿಂದ ನಾವು ರುಚಿಯನ್ನು ಅಸ್ಪಾಧಿಸಿ, ಕಣ್ಣುಗಳಿಂದ ಬಾಹ್ಯ ಜಗತ್ತಿನ ಸೌಂದರ್ಯವನ್ನು ಸವಿಯುತ್ತಾ, ಚರ್ಮಗಳಿಂದ ಸ್ವರ್ಶ ಜ್ಞಾನವನ್ನು ಅನುಭವಿಸಿ, ಮೂಗುಗಳಿಂದ ವಾಸನೆಯನ್ನು ಗೃಹಿಸಿ, ಕಿವಿಗಳಿಂದ ಕೇಳಿ ಜೀವನದ ಪ್ರತಿ ಕ್ಷಣವನ್ನು ಅಸ್ಪಾಧಿಸುತ್ತೇವೆ ಮತ್ತು ಅನುಭವಿಸುತ್ತೇವೆ. ಈ ಎಲ್ಲಾ ಅಂಗಗಳಲ್ಲಿಯೂ ಕಿವಿ ಬಹಳ ಸಾಧುವಾದ ಅಂಗ. ಕಣ್ಣು ಮೂಗುಗಳಂತೆ ಕಿವಿಗಳಿಗೆ ರಾಜಾತಿಥ್ಯ ಬೇಡ. ಕಣ್ಣು ಬಹಳ ನಾಜೂಕಿನ ಅಂಗವಾಗಿದ್ದು ಎಷ್ಟು ಸೇವೆ ಮಾಡಿದರೂ