Home Posts tagged V4News (Page 6)

ಬನ್ನೇರುಘಟ್ಟ ಲಯನ್ಸ್ ತಂಡದಿಂದ ದೀಪಾವಳಿ ಫೋಟೋ ಶೂಟ್ – ಗ್ರಾಮೀಣ ಮಹಿಳೆಯರೊಂದಿಗೆ ಸಂವಾದ

ಬೆಂಗಳೂರು : ಬೆಳಕಿನ ಹಬ್ಬವಾದ ದೀಪಾವಳಿ ಆಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗ್ರೇಟರ್ ಬನ್ನೇರಘಟ್ಟ ಸದಸ್ಯರು ಕನಕಪುರದ ಸಮೀಪದ ಹೋರಳುಗಲ್ಲು ಗ್ರಾಮಕ್ಕೆ ಸ್ನೇಹ ಮತ್ತು ಸೇವೆಯ ಉದ್ದೇಶದ ಪ್ರವಾಸವನ್ನು ಆಯೋಜಿಸಿದರು. ಈ ಸಂದರ್ಭದಲ್ಲಿ’ದೀಪದಿಂದ ದೀಪವಾ’ ಎಂಬಆಶಯದೊಂದಿಗೆ ಬೆಳಕನ್ನು ಮತ್ತು ಒಗ್ಗಟ್ಟಿನ ಶಕ್ತಿಯನ್ನು ಬಿಂಬಿಸುವ ವಿಂಟೇಜ್

ದೀಪಾವಳಿ ತುಳುವ ನೆಲದ ಸಂಸ್ಕೃತಿಯ ಪ್ರತಿಬಿಂಬ : ಕಿಶೋರ್ ಕುಮಾರ್ ಶೇಣಿ

ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ‘ದೀಪಾವಳಿ ಪರ್ಬದ ಐಸಿರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು . ದೀಪಾವಳಿ ಹಬ್ಬದ

ಹಾಸನ: ಹಾಸನಾಂಬ ದೇವಿ ದರ್ಶನದ ಬಳಿಕ ಭೀಕರ ಅಪಘಾತ: ಇಬ್ಬರ ಸಾವು

ಹಾಸನಾಂಬ ದೇವಿ ದರ್ಶನ ಮುಗಿಸಿ ವಾಪಾಸ್ ಬೆಂಗಳೂರಿಗೆ ಹೋಗುವ ದಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬಸವರಾಜು ಮತ್ತು ಅನುಶ್ರೀ (19) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಛಾಯಾ (20) ಹಾಗೂ ಮತ್ತೊಂದು ಬೈಕ್ ಸವಾರ ಮೊಹಮ್ಮದ್ ಶಾಹಿದ್ ಅವರನ್ನು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಛಾಯಾ ಅವರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸ್

ಪುತ್ತೂರು:ವಿದ್ಯಾಸಮೃದ್ಧಿ ಲೋಕಾರ್ಪಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು. ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ ಕಲಾಯಿಗುತ್ತು ಅವರು ಮಾತನಾಡಿ ಇಂದು 10ನೇ ತರಗತಿಯ ಮಕ್ಕಳಿಗೆ ನೀವು ಪಾಠಗಳನ್ನು App ಮೂಲಕ ಕೊಟ್ಟಿದ್ದೀರಿ. ಮುಂದೆ ಸಾರ್ವಜನಿಕರಿಗೆ ಉಪಯೋಗವಾಗುವ Spoken English ಮಸ್ತು ಇತರ ಭಾಷೆಗಳನ್ನು ಸಹ ನೀಡುವ ಕೆಲಸ

ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರು ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರ ಸಮಕ್ಷಮದಲ್ಲಿ

ನೆಲ್ಲಿಕಾರು ಗ್ರಾ. ಪಂನ ಪಿಡಿಒ, ಕಾಯ೯ದಶಿ೯ಗೆ ಬೀಳ್ಕೊಡುಗೆ

ಮೂಡುಬಿದಿರೆ : ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 7 ವರ್ಷಗಳಿಂದ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸಿ ಇದೀಗ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಗೊಂಡಿರುವ ಪ್ರಶಾಂತ್ ಶೆಟ್ಟಿ ಅವರಿಗೆ ಮತ್ತು 5 ವರ್ಷಗಳಿಂದ ಕಾರ್ಯದರ್ಶಿ ಯಾಗಿದ್ದ ಸುನಂದ ಬಿ. ಜೈನ್ ಅವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಶನಿವಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಂಚಾಯತ್

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ. ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ

ಶಿರೂರು:ರಿಕ್ಷಾಕ್ಕೆ ಢಿಕ್ಕಿಯಾದ ಪಿಕಪ್ ವಾಹನ: ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಶಿರೂರು: ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಿರೂರಿನ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮದ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್‌(49) ಮೃತಪಟ್ಟ ಚಾಲಕನಾಗಿದ್ದಾನೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ರಿಕ್ಷಾ ಡಿಕ್ಕಿಯಾದ ರಭಸಕ್ಕೆ

ಪುತ್ತೂರಿನಲ್ಲಿ ಅಶೋಕ ಜನಮನ : ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ -ಪರಿಶೀಲನೆ.

ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು