ಕುಂದಾಪುರ: ಬೈಂದೂರು-ಶಿರೂರು ಮಧ್ಯಭಾಗದ ಒತ್ತಿನಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಕುಸಿದು ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್
ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ. ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ ಈ ಕಂಪನಿಯ ಪೈಪ್ಲೈನ್ ತೆಂಕ ಎರ್ಮಾಳಿನ ತೊಟ್ಟಂ ಬಳಿ ಸಮುದ್ರಕ್ಕೆ ಸಂಪರ್ಕ ಹೊಂದಿದ ಬಳಿಕ, ಆ ಭಾಗದ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪ್ರದೇಶದ ಮಳೆ ನೀರು ಸಮುದ್ರ ಸೇರಲು ಈ ಪೈಪ್ ಲೈನ್
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ ಕಾರ್ಮಿಕರು ತಮ್ಮನ್ನು ನೇರ ನೇಮಕಾತಿ ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಾರದ ಶನಿವಾರ ಮತ್ತು ಭಾನುವಾರ
ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್
ಒಂದೆಡೆ ಕೊರೊನಾ ಎಂಬ ಮಹಾಮಾರಿ ಮನುಷ್ಯನನು ಪಾತಳಕ್ಕೆ ತೊರೆಯುತ್ತಿದ್ದರೆ ಇನ್ನೊಂದು ಕಡೆ ಬೇಕರಿ ಕಾರ್ಮಿಕರ ಬದುಕು ಹೀನಾಯ ಸ್ಥಿತಿ ತಲುಪಿದೆ. ದಿನ ಬೆಳಗಾದರೆ ಬೇಕರಿ ಪದಾರ್ಥಗಳನ್ನು ಮಾರಿ ಬದುಕುವ ಬೇಕರಿ ಕಾರ್ಮಿಕರು ಇಂದು ಬೇಕರಿಗಳನ್ನು ಮುಚ್ಚಿರುವ ಕಾರಣ ಸಾಕಷ್ಟು ನಷ್ಟದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ಹಾಸನ ಅಯ್ಯಂಗಾರ್ ಬೇಕರಿ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಬಂಟಕಲ್ನಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಹಾಸನ್ ಅಯ್ಯಂಗಾರ್ ಬೇಕರಿ
ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ
ಕದ್ರಿ ವಾರ್ಡಿನ ಕಾರ್ಪೋರೇಟರ್ ಆದ ಕದ್ರಿ ಮನೋಹರ್ ಶೆಟ್ಟಿ ಇವರ ವಿನಂತಿಯ ಮೇರೆಗೆ ಕದ್ರಿ ದಕ್ಷಿಣ 33ನೇ ವಾರ್ಡಿನಲ್ಲಿ ಕೊರೊನಾ ಸಮಯದಲ್ಲಿ ಸಂಕಷ್ಟದಲ್ಲಿ ಇರುವ ಜನರಿಗೆ ಸಹಾಯವಾಗಲೆಂದು ಆಹಾರದ ಕಿಟ್ಗಳನ್ನು ಒದಗಿಸಿದರು. ಉದ್ಯಮಿ ಗಣೇಶ್ ಶಿರ್ವ ದುಬಾಯಿ ಇವರ ಸಹಕಾರದೊಂದಿಗೆ ಜೊತೆಯಾಗಿ ಕದ್ರಿ ವಾರ್ಡಿನ ತರಕಾರಿ ವ್ಯಾಪಾರಸ್ಥರಾದ ಸುದೀರ್ ಕದ್ರಿ ಮಾರ್ಕೆಟ್ ಹಾಗೂ ಸುನಿಲ್ ಕೊಟ್ಟಾರಿ ಇವರು ತರಕಾರಿಯ ಕಿಟ್ಗಳನ್ನು ಒದಗಿಸಿದರು. ಈ ಸಂದರ್ಭದಲ್ಲಿ ವಾರ್ಡಿನ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಸಮಾರಂಭ ನಗರದ ಕೊಡಿಯಾಲ್ ಬೈಲ್ ನ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಜರುಗಿತು ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ವಿತರಿಸಿದ್ರು. ಈ ವೇಳೆ ಮಾತನಾಡಿದ ಅವರು,ಕೊರೋನಾ ಸಂಕಷ್ಟದ