ಪುತ್ತೂರಿನಲ್ಲಿ ನಡೆದ ಯುವಕ ಹನುಮಂತ ಅಪಹರಣ ಪ್ರಕರಣದ ಬಗ್ಗೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ.ಪುತ್ತೂರಿನ ಕುಂಬ್ರ ಎಂಬಲ್ಲಿ ಜೆಸಿಬಿ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ ಹನುಮಂತ (25) ಅವರನ್ನು ಮೂವರು ಅಪಹರಿಸಿ ಕೊಲೆ ಮಾಡಿ ಮೃತ ದೇಹವನ್ನು ಆಗುಂಬೆ ಘಾಟ್ ನಲ್ಲಿ ಎಸೆದಿದ್ದಾರೆ ಎಂಬ ಮಾಹಿತಿ ಬಂದಿದ್ದು, ಈ ಬಗ್ಗೆ ಮೂರು ಮಂದಿಯನ್ನು ಪೊಲೀಸರು
ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು
ಉಡುಪಿ ಮತ್ತು ಮಣಿಪಾಲದಲ್ಲಿ ಸಂಚರಿಸುವ ಬಸ್ಗಳಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವುದನ್ನು ಪ್ರಾದೇಶಿಕ ಸಾರಿಗೆ ಕಚೇರಿ ಕಡ್ಡಾಯಗೊಳಿಸಿದೆ.ಇತ್ತೀಚೆಗೆ ನಡೆದ ಜನಸ್ಪಂದನ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಿರುವ ಇಂಗ್ಲಿಷ್ ನಾಮಫಲಕಗಳ ಜೊತೆಗೆ ಕನ್ನಡದಲ್ಲಿ ಮಾರ್ಗ ಸಂಖ್ಯೆಗಳು ಮತ್ತು ಗಮ್ಯಸ್ಥಾನವನ್ನು ನಾಮಫಲಕಗಳಲ್ಲಿ ಪ್ರದರ್ಶಿಸುವಂತೆ ಆರ್ಟಿಒ ಎಲ್ಲಾ ಬಸ್ ನಿರ್ವಾಹಕರಿಗೆ ಸೂಚಿಸಿದೆ. ಗಡುವು ಮುಗಿದ ನಂತರ ಬಸ್ ನಿರ್ವಾಹಕರು
ವಿಧಾನ ಸಭೆಗೆ ಆಯ್ಕೆಯಾದ ಕಾರಣ ರಾಜೀನಾಮೆ ನೀಡಿದ ಕೇಂದ್ರ ಮಂತ್ರಿಗಳಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದಸಿಂಗ್ ಪಟೇಲ್, ರೇಣುಕಾ ಸಿಂಗ್ ಅವರು ಹೊಂದಿದ್ದ ಸಚಿವ ಖಾತೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೆಚ್ಚುವರಿಯಾಗಿ ನಾಲ್ವರು ಮಂತ್ರಿಗಳಿಗೆ ಹಂಚಿದ್ದಕ್ಕೆ ಅಂಕಿತ ಹಾಕಿದರು. ಮಂತ್ರಿ ಅರ್ಜುನ್ ಮುಂಡಾರಿಗೆ ಹೆಚ್ಚುವರಿಯಾಗಿ ಕೃಷಿ ಮತ್ತು ರೈತರ ಕಲ್ಯಾಣ, ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣಾ ಉದ್ಯಮಗಳು, ಸಚಿವ ರಾಜೀವ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿಯಲ್ಲಾದ ಭ್ರಷ್ಟಾಚಾರವನ್ನು ಬಯಲು ಮಾಡಿದ ದ್ವೇಷದಲ್ಲಿ ಸಾಮಾಜಿಕ ಕಾರ್ಯಕರ್ತ ಪದ್ಮನಾಭ ಸಾಮಂತ್ ವಾಮದಪದವು ಅವರ ಹತ್ಯೆಗೆ ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪದ್ಮನಾಭ ಸಾಮಂತ್ ಅವರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. 2018-2023 ನೇ ಸಾಲಿನಲ್ಲಿ ನಡೆದ ಬಂಟ್ವಾಳ ತಾಲೂಕಿನ ಅಕ್ರಮ-ಸಕ್ರಮದ ಭೂ ಮಂಜೂರಾತಿಗಳ ಭ್ರಷ್ಟಾಚಾರವನ್ನು ಪದ್ಮನಾಭ ಸಾಮಂತ ಬಯಲು
ನಮ್ಮ ತುಳು ಹಿರಿಯರು ಸೀಮೆ ಎಣ್ಣೆ ಬರುವುದಕ್ಕೆ ಮೊದಲು ದೀಪಕ್ಕೆ ಹೊನ್ನೆ ಎಣ್ಣೆ ಇತ್ಯಾದಿ ಉಪಯೋಗಿಸುತ್ತಿದ್ದರು.ಇದನ್ನು ಗಾಯ, ಸುಟ್ಟ ಗಾಯದ ಸಹಿತ ಚರ್ಮದ ಎಲ್ಲ ತೊಂದರೆಗಳಿಗೆ ಬಳಸುತ್ತಿದ್ದರು. ತುಳುವರು ಇದರ ಎಣ್ಣೆ ಅಡುಗೆಗೆ ಬಳಸದಿದ್ದರೂ ಇದರ ಎಲೆಯಲ್ಲಿ ಅಡ್ಯೆ, ಗೊಡ್ಡು ಬೇಯಿಸುತ್ತಿದ್ದರು. ಇದು ನಿತ್ಯಹಸಿರು ಮರವಾಗಿದ್ದು ಕೊಂಗಣ ಏಶಿಯಾದ ಕರಾವಳಿಯಲ್ಲೆಲ್ಲ ಬೆಳೆಯುತ್ತದೆ. ಇದು ಕ್ಯಾಲೋಪಿಲುಮ್ ಇನೋಪಿಲುಮ್ ಲಿನ್ ಎಂಬ ವೈಜ್ಞಾನಿಕ ವಿಭಾಗದ್ದಾಗಿದೆ.ಈಗ
ಬೆಂಗಳೂರಿನ ಮಹಿಳೆ ಒಬ್ಬರಿಗೆ ವಿಶೇಷ ಪೂಜೆ ಸಲ್ಲಿಸುವುದಾಗಿ ಆನ್ಲೈನ್ ಮೂಲಕ ವಂಚಿಸಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ವಿಶೇಷ ಪೂಜೆಗೆ ಹುಡುಕುವಾಗ ಆನ್ಲೈನ್ನಲ್ಲಿ ಶರಣ್ ಭಟ್ ಎಂಬ ಪೂಜಾರಿಯ ಫೋನ್ ನಂಬರ್ ಯಾರೋ ಕೊಟ್ಟರು. ನನ್ನ ಖಾತೆಗೆ 50,000 ರೂಪಾಯಿ ಹಾಕಿ. ದೇವರ ಮುಂದೆ ಪೂಜೆ ಸಲ್ಲಿಸಿ ಮನೆಗೆ ಬಂದು ವಿಶೇಷ ಪೂಜೆ ಮಾಡುವೆ ಎಂದು ಶರಣ್ ಭಟ್ ತಿಳಿಸಿದಂತೆ ಹಣ
ನನಗೆ ಐಸಿಸ್ ಸಂಪರ್ಕ ಇರುವುದನ್ನು ಸಾಬೀತು ಪಡಿಸಿದರೆ ನಾನು ದೇಶವನ್ನೇ ಬಿಡುತ್ತೇನೆ. ನೀವು ಸಾಬೀತು ಪಡಿಸದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಬಿಜೆಪಿ ಶಾಸಕ ಯತ್ನಾಳರಿಗೆ ವಿಜಯಪುರದ ಹಜರತ್ ಹಾಸಿಂ ಪೀರ ದರ್ಗಾದ ಧರ್ಮಾಧಿಕಾರಿ ಸಯ್ಯದ್ ಮೊಹಮದ್ ತನ್ಸೀರ್ ಹಾಶ್ಮಿ ಸವಾಲು ಹಾಕಿದ್ದಾರೆ. ಇದೇ ವೇಳೆ ಹಾಶ್ಮಿಯವರು ಕೇಂದ್ರ ಮಂತ್ರಿ ನಿತಿನ್ ಗಡ್ಕರಿ ಮತ್ತು ಕೆಲವು ಬಿಜೆಪಿ ನಾಯಕರ ಜೊತೆಗೆ ಇರುವ ಫೆÇೀಟೋ ಸಹ ಬಹಿರಂಗ ಆಗಿದೆ. ಹಾಶ್ಮಿ ಐಸಿಸ್ ಜನ, ಮುಖ್ಯಮಂತ್ರಿ
ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 6 ಮೇಳಗಳ ತಿರುಗಾಟಕ್ಕೆ ದೇವಲಯದಲ್ಲಿ ಪ್ರಥಮ ಸೇವೆಯಾಟದೊಂದಿಗೆ ಪ್ರಾರಂಭವಾಯಿತು.ಈ ವೇಳೆ ದೇವಳದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಅವರು ಯಕ್ಷಗಾನ ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸಿದರು.ಗೆಜ್ಜೆ ಮುಹೂರ್ತದ ಮೊದಲು ಮೇಳಗಳ ಕಲಾವಿದರಿಂದ ತಾಳಮದ್ದಳೆ ನಡೆಯಿತು ನಂತರ ರಥಬೀದಿಯಲ್ಲಿ ಚೌಕಿ ಪೂಜೆ ನಡೆದು 6 ಮೇಳಗಳಿಂದಲು ದೇವಿ ಮಹಾತ್ಮೆ
ತುಳುನಾಡ ಕೊರಗಜ್ಜ ಸ್ವಾಮಿಗೆ ಮದ್ಯದ ಸಮಾರಾಧನೆ ಎಂದರೆ ಬಹಳ ಅಚ್ಚುಮೆಚ್ಚು. ಜೊತೆಗೆ ಚಕ್ಕುಲಿ, ಬೀಡಾ ಕೊಟ್ಟರಂತೂ ಇನ್ನೂ ಪ್ರೀತಿ. ವ್ಯಕ್ತಿಯೊಬ್ಬರು ತಾನು ಹೊತ್ತ ಹರಕೆ ಈಡೇರಿಸಿದರು ಎಂಬ ಕಾರಣಕ್ಕೆ ಕೊರಗಜ್ಜನಿಗೆ ಬರೋಬ್ಬರಿ 1002 ಬಾಟಲಿ ಮದ್ಯದ ಸಮಾರಾಧನೆ ಮಾಡಿದ್ದಾರೆ! ಉಡುಪಿಯಲ್ಲಿ ನಡೆದ ಅಪರೂಪದ ಹರಕೆ ತೀರಿಸುವ ಕಾರ್ಯಕ್ರಮದ ಬಗ್ಗೆ ಒಂದು ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಕರಾವಳಿಯ ದೈವರಾದನೆಯು ಜನರ ನಂಬಿಕೆಯ ಮೇಲೆ ನಿಂತಿದೆ. ಭಕ್ತರ