ಸಮಜೋಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅದಮಾರು ಓಂ ಪ್ರೇಂಡ್ಸ್ ಸಂಸ್ಥೆಯ ಐದನೇ ವರ್ಷದ ನವರಾತ್ರಿ ಸಂದರ್ಭ ಹುಲಿವೇಷ ಧರಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ತಿರುಗಾಟ ಆರಂಭಿಸಿದೆ.ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಸಂಸ್ಥೆಯ ವಾರ್ಷಿಕೋತ್ಸವ ನಡೆಸುವ ಅದೆಷ್ಟೋ ಸಂಸ್ಥೆಗಳಿಗೆ ಅಪವಾದವೋ ಎಂಬಂತೆ ಅದಮಾರಿನ ಓಂ ಪ್ರೇಂಡ್ಸ್ ಕಳೆದ ಇಪ್ಪತ್ತು ವರ್ಷಗಳಿಂದ ಸಮಜೋಮುಖಿ
ಯುಪಿಸಿಎಲ್ ಹೋರಾಟದ ಸಂದರ್ಭ ಕಾಮಗಾರಿ ಗುತ್ತಿಗೆಗಾಗಿ ಹೋರಾಟ ನಡೆಸಿದವರು ಬಹಳಷ್ಟು ಮಂದಿ, ಆ ರೀತಿಯ ಹೋರಾಟ ಸುರತ್ಕಲ್ ಟೋಲ್ ತೆರವು ಹೋರಾಟವಲ್ಲ, ಮುನಿರ್ ಕಾಟಿಪಲ್ಲ ನೇತೃತ್ವದಲ್ಲಿ ನಡೆದ ಈ ಹೋರಾಟ ಜಯದೊಂದಿಗೆ ಅಂತ್ಯ ಕಾಣುವುದರಲ್ಲಿ ಸಂಶಯವಿಲ್ಲ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೊರಕೆ ಮಾತಿಗೆ ಧ್ವನಿ ಸೇರಿಸಿದ ಸೇರಿದ ಸಭೆ, ಅಂಥಹ ಸ್ವಾರ್ಥಿಗಳ ನೇತೃತ್ವ ಈ ಹೋರಾಟವಾಗಿದ್ದರೆ
ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಪೇದೆಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಪೇದೆ ಎಂದು ಗುರುತಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ.
ರೈತಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಲೋಲಾಜಾಕ್ಷ ಗೌಡ ಭೂತಕಲ್ಲು ರವರ ಆಧ್ಯಕ್ಷತೆಯಲ್ಲಿ ಸುಳ್ಯದ ಪೈಚಾರಿನಲ್ಲಿ ನೆರವೇರಿತು ಕಛೇರಿ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರು ಹಾಗೂ ಚಿಂತಕರಾದ ತೇಜಕುಮಾರ್ ಕುಡೆಕಲ್ಲು ನೇರವೇರಿಸಿ ರೈತಸಂಘಕ್ಜೆ ಅದರದೇ ಆದ ಘನತೆ ಗೌರವವಿದೆ. ವಿಧ್ಯಾರ್ಥಿ ಜೀವನದಲ್ಲಿ 80 ತ ದಶಕದ ರೈತನಾಯಕರ ಸಂಪರ್ಕದಲ್ಲಿದ್ದೆ.ಆಸಂದರ್ಭದಲ್ಲಿ ರೈತಸಂಘವೂ ಶ್ರೀ ಮಂತ ರೈತರ ಸಂಘ ಎಂಬ ಸಂಶಯವು ಜನಮಾನಸದಲ್ಲಿತ್ತು. ಪ್ರಸ್ತುತ ಸಣ್ಣ,ಅತೀಸಣ್ಣ ರೈತರು ಕೃಷಿ
ವಿದ್ಯೆ, ಬುದ್ಧಿವಂತಿಕೆ ಹಾಗೂ ಹೃದಯವಂತಿಕೆ ಸಹಿತ ಉನ್ನತ ಗುಣಗಳಿರುವ ಡಾ. ಬಿ.ಪಿ. ಸಂಪತ್ ಕುಮಾರ್ ಅವರು ಎಸ್.ಡಿ.ಎಂ. ಸಂಸ್ಥೆಗೆ ನೈಜ ಸಂಪತ್ತು ಎಂದು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಅವರು ಹೇಳಿದರು.ಉಜಿರೆ ಎಸ್.ಡಿ.ಎಂ. ಕಾಲೇಜಿನ ಕುಲಸಚಿವ (ಆಡಳಿತ) ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಸಂಪತ್ ಕುಮಾರ್ ಅವರಿಗೆ ಕಾಲೇಜಿನ ಬೋಧಕರ ಸಂಘವು ಸೇವಾನಿವೃತ್ತಿ ಹಿನ್ನೆಲೆಯಲ್ಲಿ ಸೆ.30ರಂದು ಕಾಲೇಜಿನ ಸೆಮಿನಾರ್ ಹಾಲ್
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅತ್ಯಾಧುನಿಕ ಎಸ್.ಡಿ.ಎಂ. ಮಲ್ಟಿಮೀಡಿಯಾ ವಿಡಿಯೋ ಕಾನ್ಫರೆನ್ಸ್ ಕೊಠಡಿಯನ್ನು ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ. ಎಸ್. ಆರ್. ನಿರಂಜನ ಅವರು ಸೆ.28ರಂದು ಉದ್ಘಾಟಿಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ ಅವರು ವೀಡಿಯೊ ಕಾನ್ಫರೆನ್ಸ್ ಲಿಂಕ್ ಕ್ಲಿಕ್ ಮಾಡುವ ಮೂಲಕ ಈ ಸೌಲಭ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ಹೆಗ್ಗಡೆಯವರ
ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕೆಎಂಎಫ್ ವತಿಯಿಂದ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆ ಉದ್ಘಾಟನೆಗೊಂಡಿತ್ತು. ಮುಕ್ಕದಲ್ಲಿ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆಯನ್ನು ಕರ್ನಾಟಕ ಹಾಲು ಮಹಾ ಮಂಡಳಿ ಇದರ ವ್ಯವಸ್ಥಾಪಕ ನಿದೇಶಕರಾದ ಬಿ.ಸಿ ಸತೀಶ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ರು. ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಎರಡು ಕೇಂದ್ರ ಮುಕ್ಕ ಮತ್ತು ಹೊಸಬೆಟ್ಟಿನಲ್ಲಿ
ಪುತ್ತೂರು : ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ,ಹಸಿರು ಸೇನೆಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟಮೆ ನಡೆಯಿತು. ರೈತಸಂಘದ ಕಛೇರಿಯಿಂದ ಮೆರವಣಿಗೆ ಮೂಲಕ ಹೊರಟ ರೈತಸಂಘದ ಕಾರ್ಯಕರ್ತರು ಪುತ್ತೂರು ಮಿನಿ ವಿಧಾನಸೌಧದ ಮುಂದೆ ಸೇರಿ ಪ್ರತಿಭಟನೆ ನಡೆಸಿದರು. ಈ
ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ ಸಭಾಂಗಣದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಮುಂಬಯಿಯ ಹಿರಿಯ ಕವಿ ಹಾಗೂ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ.ಶೆಟ್ಟಿ ಅವರು ಉದ್ಘಾಟಿಸುವರು, ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಅಧ್ಯಕ್ಷೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ರೇಡಿಯೋ ಸಾರಂಗ್, ಮಂಗಳೂರು ಸಹಭಾಗಿತ್ವದಲ್ಲಿ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಐತಿಹಾಸಿಕ ತಾಣ ಸಾವಿರ ಕಂಬದ ಬಸದಿ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸ್ವಚ್ಚತೆ ಹಾಗೂ ಪ್ಲಾಸ್ಟಿಕ್ ನಿಷೇಧ ಮಾಹಿತಿಯನ್ನೊಳಗೊಂಡ ಕರಪತ್ರ