ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿ ಪುರ (ರಿ)ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಮುನ್ನೂರು ಗ್ರಾಮ ಪಂಚಾಯತ್ ಮುನ್ನೂರು ಮತ್ತು ಮಂಗಳೂರಿನ ಫಾದರ್ ಮುಲ್ಲರ್ ಅಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರ ರಾಣಿ ಪುರ ಶಾಲಾ ವಠಾರದಲ್ಲಿ ನಡೆಯಿತು. ರಾಣಿಪುರ ಮೇರಿ ವಿಶ್ವ ಮಾತೆ ದೇವಾಲಯ ಧರ್ಮಗುರು ಫಾದರ್ ಜಯಪ್ರಕಾಶ್ ಡಿ ಸೋಜ ಉಚಿತ
ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ.) ವತಿಯಿಂದ ಸಮಾಜ ಮಂದಿರದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಲಾಪಗಳೊಂದಿಗೆ ನಡೆಯಲಿರುವ 75ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವನ್ನು ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾನು ಇಂದು ಏನಾಗಿದ್ದೇನೆ ಅದು ಸಾಹಿತ್ಯ ಇರಬಹುದು ಸಾಂಸ್ಕೃತಿಕ ವ್ಯಕ್ತಿ ಇರಬಹುದು ಅಥವಾ ರಾಜಕೀಯದಲ್ಲಿ ಒಂದು ಸ್ಥಾನ ಪಡೆಯಲು ಗಂಗಾಮೂಲ ಯಾವುದೆಂದರೆ ಅದು ಈ ಸಮಾಜ ಮಂದಿರ ಸಭಾ ಮತ್ತು ಸರಸ್ವತಿ
ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ ನಡೆಯಿತು.ಸಿ.ಪಿ.ಐ.ಎಂನ ರಾಜ್ಯ ಸಮಿತಿಯ ಸದಸ್ಯ ಜಿ.ಎನ್ ನಾಗರಾಜ್ ಅವರು ಪ್ರಚಾರಾಂದೋಲನವನ್ನು ಉದ್ದೇಶಿಸಿ ಮಾತನಾಡಿ ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರದಲ್ಲಿ ತನ್ನನ್ನು
ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದರು. 9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇವಳ ಸಕಲ ಸಿದ್ಧತೆ ಮಾಡಿಕೊಂಡಿದ್ದು ಊರ- ಪರವೂರಿನಿಂದ ಭಕ್ತರಿಗೋಸ್ಕರ
ಬೈಂದೂರು :ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ )ಉಪ್ಪುಂದ ಶೈಕ್ಷಣಿಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಟ್ರಸ್ಟ್ ಮೂಲಕ ತೀರಾ ಅಗತ್ಯ ಉಳ್ಳವರಿಗೆ ಹಾಗೂ ಕಡು ಬಡವರಿಗೆ ಸೂರು(ಮನೆ) ನಿರ್ಮಿಸಿ ಕೊಡುವ ಕಾರ್ಯ ನಿರಂತರವಾಗಿ ನಡೆಸಿಕೊಂಡು ಬಂದಿರುತ್ತದೆ . ಬೈಂದೂರು ಗಂಗಾನಾಡು ನಿರೋಡಿ ರಾಮ ಮರಾಠ ದಂಪತಿಗಳಿಗೆ ಸುಸಜ್ಜಿತ ಮನೆಯನ್ನು ಶ್ರೀ ಡಾ ಗೋವಿಂದ ಬಾಬು ಪೂಜಾರಿಯವರು ನಿರ್ಮಿಸಿ ಫಲಾನುಭವಿಗಳಿಗೆ ಮನೆಯ ಕೀಯನ್ನು ಹಸ್ತಾಂತರಿಸಿದರು. ವರಲಕ್ಷ್ಮಿ ನಿಲಯದ
ಕಡಬ : ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಕಡಬ ಸಮೀಪದ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ ಗೆ ಬ್ರಾಂತಿಕಟ್ಟೆ ತಿರುವಿನಲ್ಲಿ ಕಾರೊಂದು ಓವರ್ಟೇಕ್ ಮಾಡುವಾಗ ಹೊಡೆದು ಮುಂದೆ ಸಾಗಿದ್ದು, ಅಪಾಯವನ್ನರಿತ ಬಸ್ ಚಾಲಕ ರಸ್ತೆಯಿಂದ ಬಸ್ಸನ್ನು ಕೆಳಗಿಳಿಸಿ ನಿಯಂತ್ರಿಸಿದ
ಲಕ್ನೋ : ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯೊಂದರಲ್ಲಿ ದಲಿತ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ತಪ್ಪು ತಪ್ಪಾಗಿ ಬರೆದಿದ್ದಾನೆ ಎಂದು ಶಿಕ್ಷಕರೊಬ್ಬರು ಕೋಪಗೊಂಡು ಹಿಗ್ಗಾ ಮುಗ್ಗಾ ಥಳಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟ ವಿದ್ಯಾರ್ಥಿಯನ್ನು ನಿಖಿತ್ ಕುಮಾರ್(10 ನೇ ತರಗತಿ) ಎಂದು ಗುರುತಿಸಲಾಗಿದ್ದು, ಶಾಲೆಯ ಶಿಕ್ಷಕನನ್ನು ಅಶ್ವಿನಿ ಸಿಂಗ್ ಎನ್ನಲಾಗಿದೆ.ಇನ್ನು ನಿಖಿತ್ ಕುಮಾರ್ ಸಮಾಜ ವಿಜ್ಞಾನ ಪರೀಕ್ಷೆಯ ಉತ್ತರ
ದ.ಕ ಜಿಲ್ಲೆಯಾದ್ಯಂತ ಈವರೆಗೆ 11 ಪಿಎಫ್ ಐ ನಾಯಕರ ಬಂಧನ ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್, ಇಸ್ಮಾಯಿಲ್ ಬಜಪೆ, ನಜೀರ್ ಬಜಪೆ ಸೇರಿ 11 ಮಂದಿ ವಶಕ್ಕೆ ಮಂಗಳೂರು ಕಮಿಷನರೇಟ್ ಮತ್ತು ದ.ಕ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಸಿಆರ್ ಪಿಸಿ 107 ಮತ್ತು 151ರಡಿ ವಶಕ್ಕೆ ಪಡೆದ ಪೊಲೀಸರು ಪ್ರತಿಭಟನೆ ಮತ್ತು ಗಲಭೆ ನಡೆಸುವ ಸಾದ್ಯತೆ ಹಿನ್ನೆಲೆ ವಶಕ್ಕೆ ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ
ರಾಜ್ಯ ಸರಕಾರದ ಇಲಾಖೆಗಳಲ್ಲಿ ಶೇ40 ಕಮಿಷನ್ ಪಡೆಯಲಾಗಿದೆ ಎಂದು ಗುತ್ತಿಗೆ ದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶ ರ ಮೂಲಕ ತನಿಖೆ ನಡೆಯಲಿ’ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ‘ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ ಮೇಲೆ ಐ.ಟಿ, ಇ.ಡಿ ದಾಳಿ ಏಕೆ ನಡೆಯುತ್ತಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಜನಕ್ಕೆ




























