Home Posts tagged #v4newskarnataka (Page 118)

ಕುಕ್ಕೆ ಸುಬ್ರಹ್ಮಣ್ಯ ಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ಆಕ್ಷೇಪ

ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲಚರ್ಮ ರೋಗವಿದ್ದವರಿಂದ ರೋಗ ಹರಡುವ

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನು : ಅಧಿಕಾರಿಗಳ ಪರಿಶೀಲನೆ

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ ಅಪರೂಪದ ತಿಮಿಂಗಲದ ಪ್ರಭೇದ ಎಂದು ತಿಳಿಸಿದ್ದಾರೆ. ತ್ರಾಸಿ ಕಡಲ ತೀರದಲ್ಲಿ ಬೃಹತ್ ಮೀನು ಬಿದ್ದು ಕೊಳೆತ ಸ್ಥಿತಿಯಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಸ್ಥಳೀಯ ” ಬೀಚ್ ಬಾಯ್ಸ್’

ದುಬಾಯಿ : ಯುಎಇ ಗಮ್ಮತ್ ಕಲಾವಿದೆರ್ ಪ್ರಸ್ತುತ “ಕುಟುಂಬ” ನಾಟಕ ಪ್ರದರ್ಶನ

ಯುಎಇ ಯ ಗಮ್ಮತ್ ಕಲಾವಿದೆರ್ ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟಟೈನ್ಮೆಂಟ್ ಸಹಯೋಗದಲ್ಲಿ ಹವ್ಯಾಸಿ ತುಳು ರಂಗ ನಾಟಕ ತಂಡವು ಪ್ರಸಿದ್ಧ ಬರಹಗಾರ, ಚಲನಚಿತ್ರ ಮತ್ತು ತುಳು ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಖ್ಯಾತ ಸಾಹಿತಿಗಳು ಬರೆದ ತುಳು ಹಾಸ್ಯ ಮತ್ತು ಸಾಮಾಜಿಕ ನಾಟಕ ‘ಕುಟುಂಬ’ ಪ್ರದರ್ಶನ ಕಂಡಿತು. ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟರ್ಟೈನ್ಮೆಂಟ್ ಸಹಯೋಗದಲ್ಲಿ ಯಶಸ್ವಿಯಾಗಿ ಕುಟುಂಬ ನಾಟಕವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ

ಎಡಪಂಥೀಯ ಚಿಂತಕ ಐ.ಎ.ಪ್ರಸನ್ನ ನಿಧನ

ಎಡಪಂಥೀಯ ಚಿಂತಕರೂ, ಪ್ರಗತಿಪರ ಚಿಂತಕರ ವೇದಿಕೆಯ ಅಧ್ಯಕ್ಷರೂ,ಜಿಲ್ಲಾ ವಿಚಾರವಾದಿ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆಯ ಸಕ್ರಿಯ ಸದಸ್ಯರೂ,ಮೆಸ್ಕಾಂನ ನಿವ್ರತ್ತ ಹಿರಿಯ ಅಧಿಕಾರಿಗಳಾದ ಐ.ಎ.ಪ್ರಸನ್ನ (80ವರ್ಷ)ರವರು ಇಂದು(21-09-2022)ಅಲ್ಪ ಕಾಲದ ಅಸೌಖ್ಯದಿಂದಾಗಿ ನಗರದ ಖಾಸಗೀ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ಚಿಂತನೆಯಿಂದ ಪ್ರಭಾವಿತರಾದ ಪ್ರಸನ್ನರವರು, ತನ್ನ ವಿದ್ಯಾರ್ಥಿ ಜೀವನದಲ್ಲಿ ಪ್ರಗತಿಪರ ವಿಧ್ಯಾರ್ಥಿ

ವಿಟ್ಲ :ಜಲ್ಲಿ ಸಾಗಾಟದ ಲಾರಿ ಪಲ್ಟಿ,ಇರ್ವರಿಗೆ ಗಾಯ

ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ವ್ಯತ್ಯಯವಾಗಿದೆ. ಟಿಪ್ಪರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲೆಲ್ಲಾ ಜಲ್ಲಿಕಲ್ಲುಗಳು ಚೆಲ್ಲಿ ಹೋಗಿದ್ದು ಬಳಿಕ ಅದನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಆರಂಭಗೊಂಡಿತು. ಹೊಯ್ಸಳ

ಉಳ್ಳಾಲ ನಗರಸಭೆಯ ದುರಾಡಳಿತ ಮತ್ತು ಅವ್ಯವಹಾರದ ವಿರುದ್ಧ ನಗರಸಭಾ ಕಛೇರಿಗೆ ಮುತ್ತಿಗೆ : ಎಸ್ ಡಿಪಿಐ

ಉಳ್ಳಾಲ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಉಳ್ಳಾಲ ನಗರಸಭೆಯಲ್ಲಿ ಕಾಮಗಾರಿ, ಲೈಸೆನ್ಸ್ , ಡೋರ್ ನಂಬರ್, ತೆರಿಗೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಇಲ್ಲಿನ ಆಡಳಿತ ಪಕ್ಷ ಮತ್ತು ಅಧಿಕಾರಿಗಳು ಬೇಕಾಬಿಟ್ಟಿ ಆಡಳಿತ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು ನಡೆಯುತ್ತಿದೆ. ಅನುದಾನ ಬಿಡುಗಡೆ ಸಂದರ್ದಲ್ಲೂ ತಾರತಮ್ಯ ನೀತಿಯನ್ನು ಆಡಳಿತ ಮಂಡಳಿ ಅನುಸರಿಸುತ್ತಿದೆ .

ವಿ4 ನ್ಯೂಸ್‍ನಲ್ಲಿ ನೀರಿನ ಘಟಕದ ದುರಸ್ತಿ ಕುರಿತು ವರದಿ ಬಿತ್ತರ : ಎಚ್ಚೆತ್ತ ಅಧಿಕಾರಿಗಳು

ಕಾರ್ಕಳದ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಸುಮಾರು ಒಂದು ಲಕ್ಷ ರೂಪಾಯಿಯ ವೆಚ್ಚದಲ್ಲಿ ನೀರಿನ ಘಟಕ ಅಳವಡಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ತಿಂಗಳ ಅವಧಿಯಲ್ಲಿ ನೀರಿನ ಘಟಕ ಕೆಟ್ಟು ಹೋಗಿ ಅದನ್ನು ದುರಸ್ತಿ ಮಾಡುವ ಗೋಜಿಗೆ ಪುರಸಭೆಯಾಗಲಿ, ಸಂಬಂಧಪಟ್ಟ ಇಲಾಖೆ ತಲೆಕೆಡಿಸಿಕೊಂಡಿಲ್ಲ ಈ ಬಗ್ಗೆ ಸೆಪ್ಟಂಬರ್ 16ರಂದು ವಿ4 ನ್ಯೂಸ್‍ನಲ್ಲಿ

ದ.ಕ ಜಿಲ್ಲೆಯ ಹದಗೆಟ್ಟಿರುವ ಹೆದ್ದಾರಿಗಳನ್ನು ಶೀಘ್ರ ದುರಸ್ತಿ ಗೊಳಿಸಲು ಎಸ್‌ಡಿಪಿಐ ಒತ್ತಾಯ

ಮಂಗಳೂರು,:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಬಿಸಬೇಕು ಇಲ್ಲದಿದ್ದಲ್ಲಿ ಪಕ್ಷದ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವ ದೊಂದಿಗೆ ಹೆದ್ದಾರಿ ಬಂದ್ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಸ್‌ಡಿಪಿಐ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪತ್ರಿಕಾ

ಕ್ರಿಮಿನಲ್ ಕೇಸ್ ದಾಖಲು : ಬಸ್ಸು ಮಾಲಕರ ಸಂಘದೊಂದಿಗೆ ಸಮಾಲೋಚನೆ

ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ನೇತೃತ್ವದಲ್ಲಿ ಉಳ್ಳಾಲ, ದೇರಳಕಟ್ಟೆ, ಮುಡಿಪು ಭಾಗದ ಬಸ್ಸು ಚಾಲಕ, ನಿರ್ವಾಹಕರ ನಿಯೋಗ ದ.ಕ. ಬಸ್ಸು ಮಾಲಕರ ಸಂಘದ ಕಚೇರಿಗೆ ಭೇಟಿ ನೀಡಿ ಮಾಲಕರ ಸಂಘದ ಮುಖಂಡರೊಂದಿಗೆ ಮಾತುಕತೆ ನಡೆಸಿತು.‌ ಇತ್ತೀಚೆಗೆ ಬಸ್ಸಿನಿಂದ ಆಕಸ್ಮಿಕವಾಗಿ ಪಿ ಯು ವಿದ್ಯಾರ್ಥಿ ಜಾರಿ ಬಿದ್ದು ಮೃತ ಪಟ್ಟ ಘಟನೆಯಲ್ಲಿ ಚಾಲಕ, ನಿರ್ವಾಹಕರ ಮೇಲೆ ಸೆಕ್ಷನ್ 304 ಹಾಕಿ ಜೈಲಿಗೆ ಕಳುಹಿಸಿದ ಪ್ರಕರಣದ ಕುರಿತು ಹಾಗೂ ಪೊಲೀಸರಿಂದ ಚಾಲಕ, ನಿರ್ವಾಹಕರಿಗೆ

ಅ.18 ರಂದು ಟೋಲ್ ಗೇಟ್ ತೆರವು ನೇರ ಕಾರ್ಯಾಚರಣೆ : ಸಭೆಯಲ್ಲಿ ದೃಢ ನಿರ್ಧಾರ.‌

“ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತು ಸಭೆಯು ಚರ್ಚಿಸಿತು. ಸಾಮೂಹಿಕ ಧರಣಿಯ ಯಶಸ್ಸಿಗೆ ಕಾರಣಕರ್ತರಾದ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜನತೆಗೆ