ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವ ದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ವಿಶ್ವ ಬಂಟರ ಮಾಹಿತಿ ಕೋಶದ ಮಾಹಿತಿ ಸಂಗ್ರಹ ಯೋಜನೆಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಜರುಗಿತ್ತು. ಮಂಗಳೂರಲ್ಲಿ ಸೆ.23 ಮತ್ತು 24ರಂದು ನಡೆಯಲಿರುವ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಶ್ರೀ
ಲಯನ್ಸ್ ಕ್ಲಬ್ ಮಂಗಳಾದೇವಿ ಮಂಗಳೂರು ಇದರ ಜೋನ್ ಸೋಶಿಯಲ್ ಹಾಗೂ ಶಿಕ್ಷಕರ ದಿನಾಚರಣೆಯನ್ನು ಕದ್ರಿಯ ಅಶೋಕ ಭವನ ಆಚರಿಸಲಾಯಿತು. ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಲೀಲಾವತಿ ಮತ್ತು ಹರಿಣಾಕ್ಷಿ ಟೀಚರ್ ಹಾಗೂ ಎಸೆಸೆಲ್ಸಿಯಲ್ಲಿ 99% ಅಂಕ ಗಳಿಸಿದ ಪ್ರಾಪ್ತಿ ಸಾಲಿಯಾನ್ ಇವರನ್ನು ಕ್ಲಬ್ ನ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಹಾಗೂ ದಾಸ್ ಪ್ರಮೋಷನ್ಸ್ನ ಮುಖ್ಯಸ್ಥರಾದ ಲಯನ್ ಅನಿಲ್ ದಾಸ್, ಜೆಡ್.ಸಿ ಸಂಜ್ಯೋತ್ ಶೇಖ GST.. CORD ..
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ,
ಲಾರಿ ಡಿಕ್ಕಿಯಾಗಿ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಬೆಳಗಾವಿ ಮೂಲದ ಪ್ರಭಾಕರ್ ಶಂಕರ್ ಪೊದ್ದರವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಮಗ ಸಮರ್ಥ್ ಪೊದ್ದಾ ಗುರುವಾರ ಬೆಳಿಗ್ಗೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದಾನೆ. ಕಾಪು ಬಳಿಯ ಆನೆಗುಂದಿ ಸರಸ್ವತಿ ಪೀಠದಿಂದ ಗಣೇಶನ ಹಬ್ಬಕ್ಕೆ ರಜೆಯಲ್ಲಿ ಊರಿಗೆ ತೆರಳಿದ್ದ ಏಳನೇ ತರಗತಿಯ ಸಮರ್ಥ್, ಮಂಗಳವಾರ ಸಂಜೆ ಬೆಳಗಾವಿಯ ಹುಕ್ಕೇರಿ ಭಗವಾನ್ ಗಲ್ಲಿಯ
ಮಂಗಳೂರಿನ ಬೋಂದೆಲ್ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಥಮ ಸೆಮಿಸ್ಟರ್ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಾಲಿಟೆಕ್ನಿಕ್ಗಳಲ್ಲಿ ಪ್ರವೇಶ ಪಡೆಯಲು ಅವಧಿಯನ್ನು ವಿಸ್ತರಿಸಿದ್ದಾರೆ. ಸಂಸ್ಥೆಗಳ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯ ಮೇರೆಗೆ ಪ್ರಥಮ ಸೆಮಿಸ್ಟರ್ನಲ್ಲಿ ಭರ್ತಿ ಆಗದ ಉಳಿಕೆ ಸೀಟುಗಳಿಗೆ ನಿಯಮಗಳ ಪ್ರಕಾರ ಸೆಪ್ಟಂಬರ್ 24ರ ಒಳಗೆ ಪ್ರವೇಶ ಪಡೆಯಲು ಪ್ರವೇಶಾತಿ
ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಬ್ಬಳ್ಳಿ ಗ್ರಾಮದ ಮಹೇಶ್ ಎಂಬುವರ ಜಮೀನಿನಲ್ಲಿ ನೀರು ಇಲ್ಲದ ಬಾವಿಯಲ್ಲಿ ಗಂಡು ಜಿಂಕೆಯೊಂದು ಬಿದ್ದಿದ್ದ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಅರಣ್ಯ ಸಂರಕ್ಷಣಾಧಿಕಾರಿ ಬಂಡೀಪುರ ಹುಲಿ ಯೋಜನೆಯ ಡಾ. ರಮೇಶ್ ಕುಮಾರ್ ರವರ ಮಾರ್ಗದರ್ಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ರವೀಂದ್ರರವರ ನೇತೃತ್ವದಲ್ಲಿ..ವಲಯ ಅರಣ್ಯ ಅಧಿಕಾರಿ ಡಾ. ಲೋಕೇಶ್ ಹಾಗೂ ಪಶು ವೈದ್ಯರಾದ
ಪುತ್ತೂರು: ರಮಾನಾಥ ರೈ ಅವರ ಶಾಸಕರಾಗಿ, ಸಚಿವರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಮಾರ್ಗದರ್ಶನ, ಸೇವೆಗಳು ಇನ್ನೂ ರಾಜ್ಯಕ್ಕೆ ಬೇಕಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಅವರು ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟು ಹಬ್ಬ ಅಭಿನಂದನಾ ಸಮಿತಿ , ಯುವ ಕಾಂಗ್ರೆಸ್ ವಿಟ್ಲ-ಉಪ್ಪಿನಂಗಡಿ ಮತ್ತು ವಲಯ ಕಾಂಗ್ರೆಸ್ ಪೆರ್ನೆ ಇವುಗಳ ನೇತೃತ್ವದಲ್ಲಿ ರಮಾನಾಥ ರೈ ಅವರ 71ನೆಯ
ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇಲ್ಲಿ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ಇದರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸುವ ಕಾರ್ಯಕ್ರಮ "ಬ್ಯಾಗ್ ಆಫ್ ಜಾಯ್" ಜರಗಿತು. ಸುಮಾರು 100 ವರ್ಷಗಳ ಅನುಭವ ಹೊಂದಿರುವ ಭಾರತದ ಕೆಲವೇ ಕೆಲವು ಕಂಪನಿಗಳಲ್ಲಿ ಮುತ್ತೂಟ್ ಮಿನಿ ಕೂಡ ಒಂದು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ.
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿ ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಭೇಟಿ ನೀಡಿದ್ರು. ಇದೇ ವೇಳೆ ಪ್ರತಿಭಟನಾ ನಿರತರು ಟೋಲ್ ಗೇಟ್ ತೆರವು ದಿನಾಂಕ ಘೋಷಣೆ ಮಾಡುವಂತೆ ಅವರನ್ನು ಆಗ್ರಹಿಸಿದರು. ಪೇಪರ್ ವರ್ಕ್ ನಡೆಯುತ್ತಿದೆ. 20 ದಿನಗಳಿಂದ




























