Home Posts tagged #v4newskarnataka (Page 133)

ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ಸರ್ಕಾರದಿಂದ ತಾರತಮ್ಯ

ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ತೋರುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಐಕ್ಯತಾ ವೇದಿಕೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್ ಸರ್ಕಲ್ ನಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ನೂರಾರು ಜನ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್

ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಮಂಗಳೂರು, ಸೆ.17: ಅಕ್ಟೋಬರ್ 3ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಅಖಿಲ ಭಾರತ ಬ್ಯಾರಿ ಪರಿಷತ್ ವಿವಿಧ ಬ್ಯಾರಿ ಸ್ಪರ್ಧೆಗಳನ್ನು ಆಯೋಜಿಸಿದೆ.1) ಪ್ರಬಂಧ ಸ್ಪರ್ಧೆ: “ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಮತ್ತು ಸಂದೇಶ” ಎಂಬ ವಿಷಯದಲ್ಲಿ ಕನ್ನಡ ಲಿಪಿ ಬಳಸಿ ಬ್ಯಾರಿ ಭಾಷೆಯಲ್ಲಿ ನಾಲ್ಕು ಪುಟಗಳಿಗೆ ಮೀರದ ಪ್ರಬಂಧವನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು (ಮುಕ್ತ ಸ್ಪರ್ಧೆ) ಬರೆದು ಸೆಪ್ಟೆಂಬರ್ 30ರೊಳಗೆ ಅಖಿಲ ಭಾರತ ಬ್ಯಾರಿ

ಪುತ್ತೂರು ನಗರಸಭೆ ವತಿಯಿಂದ ಸ್ವಚ್ಛತಾ ಶ್ರಮದಾನ

ಪುತ್ತೂರು: ನಗರಸಭೆ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಸೆ.17ರಂದು ಬೆಳಿಗ್ಗೆ ಪುತ್ತೂರು ಪರ್ಲಡ್ಕದಲ್ಲಿರುವ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ನಡೆಯಿತು. ಸಹಾಯಕ ಕಮೀಷನರ್ ಗಿರೀಶ್‍ನಂದನ್ ಮತ್ತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಸ್ವಚ್ಛತಾ ನಿಶಾನೆ ತೋರಿಸುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಸಹಾಯಕ ಕಮೀಷನರ್ ಗಿರೀಶ್‍ನಂದನ್ ಅವರು ಮಾತನಾಡಿ ಪುತ್ತೂರು ನಗರಸಭೆ ಸ್ವಚ್ಛತೆಯಲ್ಲಿ ಮಾದರಿ ಕೆಲಸ

ಮೂಡುಬಿದಿರೆಯ ಪುರಸಭೆಯಿಂದ ಸ್ವಚ್ಛತಾ ಲೀಗ್

ಮೂಡುಬಿದಿರೆ : ಸೇವಾ ದಿವಸದ ಅಂಗವಾಗಿ ಕೇಂದ್ರ ಸರಕಾರವು ಭಾರತ ಸ್ವಚ್ಛತಾ ಲೀಗ್ ‘ ಎಂಬ ಅಂತರ್ ನಗರ ಸ್ಪರ್ಧೆಯನ್ನು ಆಯೋಜಿಸಿದ್ದು ಮೂಡುಬಿದಿರೆಯ ಪುರಸಭೆಯು ವಿವಿಧ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ಸಮಗ್ರ ಸ್ವಚ್ಛತಾ ಆಂದೋಲನ ನಡೆಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶ್ರೀ ಜೈನ ಮಠದ ಭಟ್ಟಾರಕ ಸ್ವಾಮೀಜಿ ಸಾವಿರ ಕಂಬದ ಬಸದಿಯ ಆವರಣದಲ್ಲಿ

ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ

ಭಾರತ ಸರ್ಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಮಂತ್ರಿಗಳಾದ ಬಳಿಕ ದೇಶದಲ್ಲಿ ಸ್ವಚ್ಛತಾ ಆಂದೋಲನಾ

ವಿಶುವಲ್ ಕಮ್ಯೂನಿಕೇಶನ್ ಶಿಕ್ಷಣದಲ್ಲಿ ಮೊದಲಿಗ ಸಂತ ಅಲೋಶಿಯಸ್ ಕಾಲೇಜು

ಸೆಪ್ಟೆಂಬರ್ 15 ರಂದು ಸಂತ ಅಲೋಶಿಯಸ್ ಕಾಲೇಜು ಸ್ವಾಯತ್ತ ಮಂಗಳೂರು, ತಮ್ಮ ಪತ್ರಿಕೋದ್ಯಮ ವಿಭಾಗದಲ್ಲಿನ ಹೊಚ್ಚ ಹೊಸ ಕೋರ್ಸ್ ಬಿ.ಎಸ್ಸಿ ವಿಶುವಲ್ ಕಮ್ಯುನಿಕೇಶನ್ ಅನ್ನ ಅಧಿಕೃತವಾಗಿ ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ರವರಿಂದ ಲೋಕಾರ್ಪಣೆಗೊಳಿಸಲಾಯಿತು. ಈ ಐತಿಹಾಸಿಕ ಕ್ಷಣದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎಲ್ ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ಉದ್ಘಾಟಕರ ಕೈಯಿಂದ ಸಭೆಯಲ್ಲಿದ್ದ ವಿದ್ಯಾರ್ಥಿಗಳ ಭಾವಚಿತ್ರವನ್ನು ಪೋಲರಾಯ್ಡ್

ಕಾರ್ಕಳ :ಪ್ರಮುಖ ರಸ್ತೆಗಳು ಹೊಂಡ-ಗುಂಡಿ , ಪುರಸಭೆ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ

ಕಾರ್ಕಳ: ನಗರದ ಮಂಗಳೂರು ರಸ್ತೆ ಅಭಿವೃದ್ಧಿಯ ಕುರಿತು ಕಾರ್ಕಳ ಪುರಸಭೆ ನಿರ್ಲಕ್ಷಿಸಿದ ಪರಿಣಾಮವಾಗಿ ರಸ್ತೆ ಪೂರ್ತಿ ಹೊಂಡ ಗುಂಡಿಗಳು ತೆರದುಕೊಂಡು ವಾಹನ ಸಂಚಾರಕ್ಕೆ ಅಯೋಗ್ಯವೆನಿಸಿದೆ. ಇದರ ಕುರಿತು ಆಡಳಿತಕ್ಕೆ ಎಚ್ಚರಿಕೆಯ ಪ್ರಯತ್ನಿಸಿದರೆ ಆಡಳಿರೂಢ ಪಕ್ಷವು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದೋಂದಿಗೆ ರಾಜಕೀಯಗೊಳಿಸುತ್ತಿದೆ ಎಂದು ಪುರಸಭಾ ಸದಸ್ಯ ಶುಭದರಾವ್ ವಾಗ್ದಾಳಿ ನಡೆಸಿದರು. ಭವಾನಿ ಮಿಲ್‍ನಿಂದ ಮೂರು ಮಾರ್ಗದ ತನಕ ವರೆಗಿನ ಮಂಗಳೂರು

ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರವಾದರೆ ಮಾತ್ರ ಭಾಷೆಯ ಉಳಿವು ಸಾಧ್ಯʼ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

ಮಂಗಳೂರು: ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರಗಳಾದರೆ ಮಾತ್ರ ತುಳುವಿನ ರಕ್ಷಣೆ ಸಾಧ್ಯ. ತುಳು ಎಲ್ಲಾ ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವ್ಯಾವಹಾರಿಕ ಭಾಷೆ. ಅದಕ್ಕೆ ಯಾವುದೇ ಕಳಂಕ ಹಚ್ಚುವುದು ಬೇಡ, ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ಅವರು ಶುಕ್ರವಾರ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ, ಇಲ್ಲಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಒಡಿಯೂರು ಶ್ರೀ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಅಧಿವೇಶನ

ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ,ಇದರ ಮಹಾ ಅಧಿವೇಶನ ಹಾಗೂ ವಿಶ್ವ ಬಂಟರ ಸಮ್ಮಿಲನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಬಂಟರ ಸಮ್ಮೇಳನ ಸೆಪ್ಟೆಂಬರ್ 18 ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದ ಕೂಳೂರು ಕನ್ಯಾನ ಸದಾಶಿವ ಕೆ. ಶೆಟ್ಟಿ ವೇದಿಕೆಯಲ್ಲಿ ನಡೆಯಲಿದ್ದು. ಈ ಬಗ್ಗೆ ಪೂರ್ವ ಸಿದ್ಧತಾ ಸಭೆಯು ಕುರ್ಲಾ ಪೂರ್ವದ ಬಂಟರ ಭವನದ ಸಂಕಿರಣದಲ್ಲಿ ನಡೆಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಘೋಷಣೆ ಮಾಡಿ ,ಸೇಂದಿ ಇಳಿಸುವುದಕ್ಕೆ ಅನುಮತಿ ನೀಡಬೇಕು : ಡಾ. ಪ್ರಣಾವಾನಂದ ಸ್ವಾಮೀಜಿ

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮವನ್ನು ಘೋಷಣೆ ಮಾಡದೆ ಸಮಾಜದ ಜನಾಂಗಕ್ಕೆ ಮೂಗಿಗೆ ತುಪ್ಪವನ್ನು ಹಚ್ಚಿದರು ಇದು ಇಡೀ ಸಮುದಾಯಕ್ಕೆ ತೀವ್ರ ನೋವು ಉಂಟಾಗಿದೆ ಎಂದು ಡಾ. ಶ್ರೀ ಸ್ವಾಮಿ ಪ್ರಣವಂ ಸ್ವಾಮಿಗಳು ಹೇಳಿದರು. ಅವರು ಬೀದರ್‍ನಲ್ಲಿ ಮಾಧ್ಯಮವನ್ನು ಉದ್ದೇಶಿ ಮಾತನಾಡಿ, ಸಚಿವ ಸುನಿಲ್ ಕುಮಾರ್ ಅವರು ರಾಜಕೀಯ ಲಾಭಕ್ಕೋಸ್ಕರ ಸಮುದಾಯವನ್ನು ದಾರಿ