Home Posts tagged #v4newskarnataka (Page 14)

ನಾನು ಟಿಕೆಟ್ ಆಕಾಂಕ್ಷಿಯಲ್ಲ : ಕ್ಯಾ. ಗಣೇಶ್ ಕಾರ್ಣಿಕ್

ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್ ಅವರ ಹೆಸರು ಇದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುದ್ಧಿಗೆ ಅವರು ಪತ್ರಿಕ್ರಿಯಿಸಿ

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ :ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹ

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆಯನ್ನು

ವಿಶ್ವ ಆರೋಗ್ಯ ದಿನಾಚರಣೆ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು

ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ

ಬೆಳ್ತಂಗಡಿ : ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ

ಮರೋಡಿ ಗ್ರಾಮದ ಮಾಜಿ ಪಂಚಾಯತ್ ಉಪಾಧ್ಯಕ್ಷರು ಬಿಜೆಪಿಯ ಮುಖಂಡರು ರವಿರಾಜ್ ಬಲ್ಲಾಳ್ ಬಿಜೆಪಿಯ ದುರಡಳಿತಕ್ಕೆ ಬೇಸತ್ತು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃದಲ್ಲಿ ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ನಾರವಿ ಗ್ರಾಮದ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಕಳ ವಿಧಾನ ಸಭಾ ಕ್ಷೇತ್ರ : ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಮಮತಾ ಹೆಗ್ಡೆ ದಿಲ್ಲಿ ಭೇಟಿ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ

ಅವ್ಯವಸ್ಥೆಯ ಆಗರದಲ್ಲಿ ಸುರತ್ಕಲ್ ಮೀನು ಮಾರುಕಟ್ಟೆ, ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ

ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ ಮೀನುಗಾರಿಗೆ ತಾತ್ಕಾಲಿಕ ಮಾರುಕಟ್ಟೆಯ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ವರ್ಷ ನಾಲ್ಕು ಕಳೆದರೂ,

ಕಾಂಗ್ರೆಸ್ : ಉಡುಪಿಯಲ್ಲಿ ಪ್ರಸಾದ್ ರಾಜ್ ಕಾಂಚಾನ್‌‌ಗೆ ಟಿಕೆಟ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್​, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ

ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆ

ಮಂಗಳೂರು: ನಗರದ ಉರ್ವಸ್ಟೋರ್‌ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್‌ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆಗೊಂಡಿತು. ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ

ಪಿ.ಬಿ.ಹರೀಶ್ ರೈ ರವರು ಬರೆದ ಮತಪೆಟ್ಟಿಗೆ ಕೃತಿ ಬಿಡುಗಡೆ

ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಬರೆದಿರುವ ಮತಪೆಟ್ಟಿಗೆ ಕರಾವಳಿ ಜನರ ತೀರ್ಪು ಕೃತಿ ಲೋಕಾರ್ಪಣೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು.ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಪಿ.ಬಿ.ಹರೀಶ್ ರೈ ಬರೆದಿರುವ ಮತಪೆಟ್ಟಿಗೆ ಕೃತಿಯನ್ನು ಮಂಗಳೂರಿನ ಜಿ.ಆರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಎಸ್.ಗಣೇಶ್ ರಾವ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಇದೊಂದು

ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿಯ ರಾಷ್ಟ್ರ ಮಟ್ಟದ ಸಾಧನೆ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಮಾರ್ಚ್ 27 ರಿಂದ 30 ರ ವರೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ 200 ಮೀ. ಓಟದಲ್ಲಿ ಕಂಚಿನ ಪದಕ ಹಾಗೂ ್ಠ4100 ಮೀ ರಿಲೇ ಓಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಮಕ್ಕಳಿಗೆ ಪ್ರೇರಕ ಶಕ್ತಿಯಾಗಿರುವ ಶ್ರೀಮತಿ ಅಗ್ನೆಸ್ ಸಲ್ದಾನ ಅವರ ಸಾಧನೆಯನ್ನು ಸಂಸ್ಥೆಯ