Home Posts tagged #v4newskarnataka (Page 147)

ಕುಂದಾಪುರ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ.

ನಟ ಅರ್ಜುನ್ ಕಾಪಿಕಾಡ್ ಹುಲಿ ಕುಣಿತಕ್ಕೆ ಮನಸೋತ ಪ್ರೇಕ್ಷಕರು

ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ

ದುಸ್ಥಿತಿಯಲ್ಲಿದೆ ಮಂಗಳೂರಿನ ನಂತೂರು ಬಸ್ ನಿಲ್ದಾಣ

ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ ಸ್ಥಿತಿಯಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ

ಮರವಂತೆ ಕಡಲ ತೀರದಲ್ಲಿ ಉಪಾಧ್ಯಕ್ಷ ಫಿಲಂ ಶೂಟಿಂಗ್

ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್‍ವುಡ್‍ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ ಕೆಲವೊಂದು ಸಿನಿಮಾಗಳಲ್ಲಿ ಇವರೇ ಹೀರೋಗಿಂತ ಹಾಸ್ಯ ನಟನಾಗಿ ಹೆಚ್ಚಾಗಿ ಮಿಂಚಿದ್ದು, ಈಗ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳ ನಿರ್ಮಾಪಕರಾದ

ಮೆಲ್ಕಾರ್ : ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಮೆಲ್ಕಾರ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಇದರ ನೂತನ ಕಡೆಗೋಳಿ ಶಾಖೆಯು ಪುದು ಗ್ರಾಮದ ಕಡೆಗೋಳಿಯ ಶ್ರೀ ನಾರಾಯಣ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ಸಂಘದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶಕ್ಕೆ ಆರ್ಥಿಕ ಶಕ್ತಿಯ ಬೆಳಕನ್ನು ದ.ಕ. ಜಿಲ್ಲೆ ನೀಡಿದೆ. ಗ್ರಾಮೀಣ ಭಾಗದ ಜನರಿಗೆ ರಾಷ್ಟ್ರೀೀಕೃತ ಬ್ಯಾಂಕುಗಳು ನೀಡಲು

ಆ.23 : ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪಾದಯಾತ್ರೆಯು ಜಕ್ರಿಬೆಟ್ಟು ಮೂಲಕ ಸಾಗಿ

ಆ.22;ವೆನ್ಲಾಕ್ ಆಸ್ಪತ್ರೆಯು ಸಮುದಾಯ ವಾಚನಾಲಯ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು;ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ. ಯುವ ರೆಡ್ ಕ್ರಾಸ್ ಘಟಕ ಮಂಗಳೂರು ವಿಶ್ವ ವಿದ್ಯಾನಿಲಯ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ22-8-2022.ಸೋಮವಾರ ಬೆಳಿಗ್ಗೆ 10ಗಂಟೆಗೆ. ವೆನ್ಲಾಕ್ ಆಸ್ಪತ್ರೆ ಮಂಗಳೂರು ಆವರಣದಲ್ಲಿಸಮುದಾಯ ವಾಚನಾಲಯದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಸೇರಿದಂತೆ ನೆರೆಹೊರೆಯ ಜಿಲ್ಲೆ ಗಳಿಂದ ವೆನ್ಲಾಕ್ ಆಸ್ಪತ್ರೆಗೆ

ಬಹರೈನ್‍ ಸಂಗೀತ ಗಾನ ಸಂಭ್ರಮ-2022

ಅಮ್ಮ ಕಲಾವಿದರು ಬಹರೈನ್ ಅರ್ಪಿಸುವ ಸಂಗೀತ ಗಾನ ಸಂಭ್ರಮ 22 ಕಾರ್ಯಕ್ರಮದ ಮುಹೂರ್ತ ಪೂಜೆ ಹಾಗೂ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಆಗಸ್ಟ್ 19ರಂದು ಸ್ಥಳೀಯ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ನೆರವೇರಿತು. ಅಮ್ಮ ಕಲಾವಿದರು ಸಂಘಟನೆಯ ಮುಖ್ಯಸ್ಥರಾದ ಮೋಹನದಾಸ್ ರೈ ಎರುಂಬು ಸಾರಥ್ಯದಲ್ಲಿ ನಡೆಯಲಿರುವ ಈ ಸಂಗೀತ ಕಾರ್ಯಕ್ರಮದಲ್ಲಿ ತಾಯ್ನಾಡಿಂದ ಖ್ಯಾತ ಗಾಯಕ ತುಳುನಾಡ ಗಾನಗಂಧರ್ವ ಜಗದೀಶ ಆಚಾರ್ಯ ಪುತ್ತೂರು ಮತ್ತು ಅವರ ಬಳಗದ ಯುವ

ಕಾರ್ಕಳ : ಚಾಣಕ್ಯ ಕದೀಮರಿಬ್ಬರ ಸೆರೆ

ಒಡವೆ ಕಳ್ಳತನ ಸಹಿತ ವಾಹನಗಳ ಕಳ್ಳತನ ನಡೆಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕದೀಮ ಕಳ್ಳರಿಬ್ಬರನ್ನು ಕಾರ್ಕಳ ಪೊಲೀಸ್ ಉಪಾಧೀಕ್ಷರ ಹಾಗೂ ವೃತ ನಿರೀಕ್ಷಕರ ತಂಡ ಬಂಧಿಸಿದೆ. ಬಂಧಿತರ ಮೇಲೆ ರಾಜ್ಯಾದ್ಯಂತ ಬಹಳಷ್ಟು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮೂಲತಃ ಬಜಪೆ ನಿವಾಸಿ ಇದೀಗ ಮೂಳೂರುಎಸ್.ಎಸ್. ರಸ್ತೆಯ ಶ್ರೀ ಸಾಯಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ವಾಜೀದ್ ಜೆ.(25) ಹಾಗೂ ಉಡುಪಿ ಕಡಿಯಾಳಿ ಆಚಾರ್ಯ ರಸ್ತೆಯ ಬಾಡಿಗೆ ಮನೆ ನಿವಾಸಿ ಶಹನಾಜ್ (32)

ಮೂಡುಬಿದರೆ : ಬೀದಿಯುದ್ದಕ್ಕೂ ಕಟ್ಟಿದ ಮೊಸರ ಕುಡಿಕೆಗಳನ್ನು ಒಡೆದ ಯಕ್ಷಕೃಷ್ಣ

ಮೂಡುಬಿದಿರೆ: ಯಕ್ಷಗಾನ ಶೈಲಿಯ ಕೃಷ್ಣ ಪರಂಪರೆಯ ಮೂಡುಬಿದಿರೆಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವವು ಮೂಡುಬಿದಿರೆಯಲ್ಲಿ ಪೇಟೆಯಲ್ಲಿ ಶುಕ್ರವಾರ ನಡೆಯಿತು. ಪೇಟೆಯ ಬೀದಿಯುದ್ದಕ್ಕೂ ನೂರಾರು ಮಡಿಕೆಗಳು ಕಟ್ಟಿ, ಅವುಗಳನ್ನು ಯಕ್ಷಗಾನೀಯ ಶ್ರೀ ಕೃಷ್ಣ ವೇಷಧಾರಿ ಚಂದ್ರಶೇಖರ್ ಮಳಲಿ ಅವರು ಒಡೆಯುವ ಸಂಭ್ರಮಕ್ಕೆ ಊರ ಪರವೂರಿನ ಸಾವಿರಾರು ಮಂದಿ ಭಕ್ತಾಧಿಗಳು ಸಾಕ್ಷಿಯಾದರು. ಪೇಟೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಷ್ಟಮಿ, ಮೊಸರು ಕುಡಿಕೆ ಉತ್ಸವಕ್ಕೆ