Home Posts tagged #v4newskarnataka (Page 158)

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಯಂತ್ರದ ಉದ್ಘಾಟನೆ

ಮಣಿಪಾಲ, 21 ಜುಲೈ 2022: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಜೀವರಸಾಯನಶಾಸ್ತ್ರ ಪ್ರಯೋಗಾಲಯದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಕೋಬಾಸ್ ಇ 801 ಯಂತ್ರವನ್ನು ಉದ್ಘಾಟಿಸಲಾಯಿತು. ಪ್ರಯೋಗಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸುಧಾರಿತ ಯಂತ್ರವನ್ನು ಕೆಎಂಸಿ ಡೀನ್ ಡಾ ಶರತ್ ಕುಮಾರ್ ರಾವ್ , ಮಣಿಪಾಲದ ಬೋಧನಾ ಆಸ್ಪತೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್

ಮಸೂದ್ ಹತ್ಯೆ,ಕುಟುಂಬಸ್ಥರ ಜೊತೆ ನಿಂತ ವಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್

ಸುಳ್ಯ ತಾಲೂಕಿನ ಕಳಂಜದಲ್ಲಿ ಮೊನ್ನೆ ರಾತ್ರಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಮಸೂದ್ ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದು ಯು.ಟಿ.ಖಾದರ್ ತೀವ್ರ ಖಂಡನೆ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯ ಮುಖಂಡರು ಜಿಲ್ಲಾಡಳಿತ ಪರಿಹಾರ ಘೋಷಿಸುವ ವರೆಗೂ ಮಯ್ಯತ್ (ಮೃತ ಶರೀರ) ನ್ನು ಪಡೆಯುವುದಿಲ್ಲ ಎಂಬುದಾಗಿ ಧರಣಿ ನಿರತರಾಗಿದ್ದು ಸ್ಥಳಕ್ಕೆ ಮಾಜಿ ಸಚಿವ ಶಾಸಕ

ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಿ ಪ್ರೊ.ಪ್ರೇಮಲತಾ ಶೆಟ್ಟಿ ನಿಧನ

ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ಇ ದರ ಸ್ಥಾಪಕರಾದ ಪ್ರೊ.ಪ್ರೇಮಲತಾ ಶೆಟ್ಟಿ ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ತಾ.21-7-2022 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರಿಗೆ 91 ವರ್ಷ ಪ್ರಾಯವಾಗಿತ್ತು. ಸರಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಸುಮಾರು 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಹಾಗೂ ಶಿಕ್ಷಣ ರಂಗದಲ್ಲಿ ಎಜುಕೇಶನ್ ಟ್ರಸ್ಟ್ ಸ್ಥಾಪಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸಿಕೊಂಡು ಬಂದಿದ್ದರು.

ಜೈವಿಕ ಸರಪಳಿಯನ್ನು ಸಂರಕ್ಷಿಸೋಣ : ಡಾ|| ಚೂಂತಾರು

ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ. ಜೈವಿಕ ಸರಪಳಿ ನಾಶವಾಗಿ ಹಲವಾರು ವಿರಳ ಗಿಡ ಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ ನಾಡು ಸಮೃದ್ಧವಾಗಿ ಕಾಲ ಕಾಲಕ್ಕೆ ಮಳೆ,

ಥಾಣೆ ಗುರುಭಕ್ತರಿಂದ ಒಡಿಯೂರು ಗುರುಗಳಿಗೆ ಗುರುವಂದನೆ

ಥಾಣೆ: ಮಾನವನಿಗೆ ಒಂದು ಧರ್ಮವಿದೆ, ಅದುವೇ ಮಾನವ ಧರ್ಮ. ಮಾನವ ಧರ್ಮ ವನ್ನು ಸಂಸ್ಕಾರದ ಮೂಲಕ ಅರಿಯಬೇಕು. ಅದರಿಂದ ಸಂಸ್ಕøತಿ ಉಳಿಯಲು ಸಾಧ್ಯವಿದೆ. ಸ್ವಾರ್ಥದ ಬದುಕು ಹೋಗಿ ನಿಸ್ವಾರ್ಥದ ಬದುಕು ನಮ್ಮದಾಗಬೇಕು. ಅಂತಹ ಗುಣ ನಮಗೆ ಬರಬೇಕು. ಕಡಲಿನಂತಹ ವಿಶಾಲವಾದ ಗುಣ ನಮ್ಮಲ್ಲಿರಲಿ. ನಮ್ಮನ್ನು ನಾವು ಅರಿಯಬೇಕು.ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥ ರಾದಾಗ ಮಾತ್ರ ಉತ್ತಮವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಒಡಿಯೂರು ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ

ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಮಾಹಿತಿ ಕಾರ್ಯಾಗಾರ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುದರಂಗಡಿ ಪ. ಪೂ. ಕಾಲೇಜಿನಲ್ಲಿ ಪತ್ರಿಕಾ ಮಾಹಿತಿ ಕಾರ್ಯಗಾರ ನೆರವೇರಿತು.ಪತ್ರಿಕಾ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿ ಉಡುಪಿ ಎಂಜಿಎಂ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುಚಿತ್ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರಾಗ ಬೇಕಾದವರು ಪ್ರಮುಖವಾಗಿ ಯಾವುದೇ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸ ಬೇಕಾಗಿರುವುದು ಅತ್ಯಗತ್ಯವಾಗಿದೆ. ವೃತ್ತಿ ಬದುಕಿನಲ್ಲಿ ಪತ್ರಕರ್ತರಿಗಿರುವಷ್ಟು ಹೊಸತನ,

ಬ್ಯಾಂಕಿನಿಂದ 27 ಲಕ್ಷ ರೂ. ಎಗರಿಸಿದ ಆರೋಪಿಗೆ ಜೈಲು ಶಿಕ್ಷೆ

2017ರ ಡಿಸೆಂಬರ್ ತಿಂಗಳ 29ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಇರುವ (ಆಗಿನ) ವಿಜಯ ಬ್ಯಾಂಕ್‍ನಲ್ಲಿ ಕ್ಯಾಶಿಯರ್ ಅಗಿದ್ದ ವಿಕಾಸ್ ಶೆಟ್ಟಿ ರೂ. 27,29,875/- ಎಗರಿಸಿದ್ದರು. ಆ ಶಾಖೆಯ ಮ್ಯಾನೇಜರ್ 2017ರ ಡಿಸೆಂಬರ್ 28ರಿಂದ 30ರ ವರೆಗೆ ರಜೆಯಲ್ಲಿದ್ದರು. ಪ್ರಭಾರ ಮ್ಯಾನೇಜರ್ ಅವರ ಟ್ಯಾಲಿ ಸಾಫ್ಟ್‍ವೇರ್‍ನಲ್ಲಿ ಅಂತಿಮ ನಗದು ಪರೀಕ್ಷಿಸುವಾಗ ಈ ಮೊತ್ತ ಕಡಿಮೆ ಇದ್ದದ್ದು ಗೊತ್ತಾಗಿತ್ತು.ಆರೋಪಿ ವಿಕಾಸ್ ಶೆಟ್ಟಿಯವರನ್ನು ವಿಚಾರಿಸಿದಾಗ

ಹಿರಿಯ ನಾಟಕಕಾರ, ಪತ್ರಕರ್ತ ರತ್ನಾಕರ ರಾವ್ ಕಾವೂರು ನಿಧನ.

ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು (81) ಇಂದು ಬೆಳಿಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆಯಾಗಿತ್ತು. ವಜ್ರನೇತ್ರ ಎಂಬ ಕನ್ನಡ ಪತ್ರಿಕೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸಿ ಸರಕಾರದ ಗಮನ ಸೆಳೆಯುತ್ತಿದ್ದ ಅವರು ಸುಧೀರ್ಘ 60 ವರ್ಷಗಳ ಕಾಲ ಸರಸ್ವತಿಯ

ಸೋನಿಯಾ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್‍ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಂಡದಿಂದ ಹಲ್ಲೆಗೊಳಗಾಗಿದ್ದ ಮಸೂದ್ ಚಿಕಿತ್ಸೆ ಫಲಿಸದೆ ಮೃತ್ಯು

ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಮಸೂದ್(19) ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಜು.19 ರಂದು ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ವಾಸಿ ಮಸೂದ್ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಎಂಟು ಮಂದಿಯ ತಂಡ ಹಲ್ಲೆ ನಡೆಸಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಮಸೂದ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ