ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಠದಕಣಿಯಲ್ಲಿ ಮಳೆ ನೀರು ಹರಿಯುವ ತೋಡಿನಲ್ಲೇ ಡ್ರೈನೇಜ್ ನೀರು ಕೂಡ ಹರಿಯುತ್ತಿದೆ. ಸ್ಥಳೀಯರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ನಗರದ ಮಠದಕಣಿಯಲ್ಲಿ ಬರ್ಕೆ ಠಾಣೆಗೆ ತೆರಳುವ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗುವ ತೋಡಿನಲ್ಲಿ ಡ್ರೈನೇಜ್ ನೀರು ಹರಿಯುತ್ತಿದೆ. ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಕಾರಣ
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22 ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್ ಟೋಲ್ ತೆರವು ಸಹಿತ ಜನ ಸಾಮಾನ್ಯರ ಜ್ವಲಂತ ಸಮಸ್ಯೆಗಳನ್ನು ಮರೆಮಾಚುವ ಯತ್ನ ನಡೆಯುತ್ತಿದೆ. ಜನಪ್ರತಿನಿಧಿಗಳ ಇಂತಹ ರಾಜಕಾರಣವನ್ನು ಒಪ್ಪಲು ಸಾಧ್ಯವಿಲ್ಲ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಸುರತ್ಕಲ್ ಅಕ್ರಮ ಟೋಲ್ ತೆರವುಗೊಳಿಸಿ
ಉಜಿರೆ: ಯಾವುದೇ ದೇಶದ ಆರ್ಥಿಕ ಬಿಕ್ಕಟ್ಟು ಆಯಾ ದೇಶದ ಸಂಪನ್ಮೂಗಳ ಮೇಲೆ ಅವಲಂಬಿತವಾಗಿರುತ್ತವೆ. ಲಭ್ಯವಿರುವ ಸಂಪನ್ಮೂಲಗಳನ್ನು ಹೇಗೆ ಸದುಪಯೋಗಮಾಡಿಕೊಳ್ಳುತ್ತಾರೆ ಎಂಬುದರ ಮೇಲೆ ರಾಷ್ಟ್ರದ ಉನ್ನತಿ ನಿರ್ಧಾರವಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಮಂಗಳಗಂಗೋತ್ರಿಯ ಕುಲಸಚಿವರು ಡಾ.ಕಿಶೋರ್ ಕುಮಾರ್ ಸಿ.ಕೆ ಹೇಳಿದರು. ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಗುರುವಾರದಂದು
ಶ್ರಮ್ ಚಾರಿಟೇಬಲ್ ಟ್ರಸ್ಟ್ ರಿ ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ದೇವರಿಗೆ ವಿಶೇಷ ಬಾಳೆದಿಂಡಿನ ಗೋಪುರ ನಿರ್ಮಿಸಿ ವಿವಿಧ ಜಾತಿಯ ಹೂಗಳಿಂದ ಜಾತಿಯ ಅಲಂಕರಿಸಲಾಗಿತ್ತು.ಮಣೆಯ ಮೇಲೆ ಹೊಸ ಬಟ್ಟೆಯನ್ನು ಹಾಕಿ ಅದರ ಮೇಲೆ ಅಕ್ಕಿ ಹರಡಿ ಕಳಶ ಇಟ್ಟು ಅದಕ್ಕೆ ಕುಂಕುಮ, ಅರಿಸಿಣ ಹಚ್ಚಲಾಗಿತ್ತು, ಕಳಸದ ಮೇಲೆ ತೆಂಗಿನಕಾಯಿ ಇಟ್ಟು
ಮಂಜೇಶ್ವರ :ರಾಷ್ಟೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಅವೈಜ್ಞಾನಿಕ ನಿರ್ಮಾಣ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಮಂಜೇಶ್ವರದ ಕೂಗಿಗೆ ಕಿಂಚತ್ತೂ ಬೆಲೆಯನ್ನು ಕಲ್ಪಿಸದ ಅಧಿಕಾರಿಗಳ, ಜನಪ್ರತಿನಿಧಿಗಳ ಕಣ್ಣು ಮುಚ್ಚಾಲೆಯಾಟದಿಂದ ಬೇಸೆತ್ತಿರುವ ಮಂಜೇಶ್ವರದ ಸಮಾನ ಮನಸ್ಕರು ಸೇರಿ ಕೊಂಡು ಹೊಸಂಗಡಿಯ ವ್ಯಾಪಾರಿ ಭವಣದಲ್ಲಿ ಮಂಜೇಶ್ವರ ನಾಗರಿಕ ಹಿತರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ನೂತನ ಸಂಘಟನೆಯೊಂದಕ್ಕೆ ರೂಪು ನೀಡಿದ್ದಾರೆ. ಈಗಾಗಲೇ ಮಂಜೇಶ್ವರ ರೈಲು ನಿಲ್ದಾಣ
ಟೆಲಿ ಚಿತ್ರ ಆಲ್ಬಾಂ ಹಾಡುಗಳ ಮೂಲಕ ಜನಮನ್ನಣೆ ಪಡೆದ ಹರ್ಷಿತ್ ಸೋಮೇಶ್ವರ ಅವರು ಮತ್ತೊಂದು ಹೊಸ ಪ್ರಯೋಗಕ್ಕೆ ಸಜ್ಜಾಗಿದ್ದು, ಅವರ ನಿರ್ದೇಶನದಲ್ಲಿ ಪಯಣ ಎಂಬ ಕನ್ನಡ ಆಲ್ಬಾಂ ಸಾಂಗ್ ಇದೇ ಭಾನುವಾರ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಳ್ಳಲಿದೆ. ಕನ್ನಡ ಪ್ರಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ವಾಸುಕೀ ವೈಭವ್ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಟೆಲಿ
75ನೇ ಸ್ವಾತಂತ್ರೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾಲ್ನಡಿಗೆ ಜಾಥವನ್ನು ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು… ದೇಶ ಸ್ವಾತಂತ್ರ್ಯ ಪಡೆಯಲು ಬಹಳಷ್ಟು ತ್ಯಾಗ ಬಲಿದಾನಗಳನ್ನು ನಡೆಸಿದೆ. ಇದೀಗ ದೇಶ ಕಾಯುವೆ ಎಂಬವರು ನಾನಾ ಹೆಸರಲ್ಲಿ ಗುರುತಿಸಿಕೊಂಡು ಬ್ರಿಟಿಷರೊಂದಿಗೆ ಸೇರಿಕೊಂಡು ದೇಶಕ್ಕೆ ಮೋಸ ಮಾಡಿದವರಾಗಿದ್ದಾರೆ ಎಂದರು. ಮಾಜಿ ಸಚಿವ
ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಧ್ವಜವನ್ನು ಮಾರಾಟ ಮಾಡುವುದಾಗಲಿ, ಬಳಸುವುದಾಗಲಿ, ಬೇಕರಿಗಳಲ್ಲಿ ರಾಷ್ಟ್ರಧ್ವಜದ ಕೇಕ್ ತಯಾರಿಸುವುದಾಗಲಿ ಮಾಡಬಾರದು ಎಂದು ಇಲ್ಲಿಯ ಹಿಂದೂ ಜನಜಾಗೃತಿ ವೇದಿಕೆ ಹಾಗೂ ಸನಾತನ ಸಂಸ್ಥೆಯ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಮಾಡಲಾಯಿತು. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ75ನೇ ವರ್ಷದ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ, ಬಳಕೆ ಮಾಡಿದ ಬಳಿಕ ಎಲ್ಲೆಂದರಲ್ಲಿ
ವರಲಕ್ಷ್ಮೀ ವ್ರತ ಎಂದು ಶ್ರಾವಣ ಮಾಸದಲ್ಲಿ ಲಕ್ಷ್ಮೀ ಪೂಜೆ ಮಾಡುತ್ತಾರೆ. ಸಂಸ್ಕೃತದಲ್ಲಿ ಒಂದು ಶಬ್ದದ ಮುಂದೆ ಬರುವ ಇನ್ನೊಂದು ಶಬ್ದದ ಆಧಾರದಲ್ಲಿ ಅರ್ಥ ಕಲ್ಪನೆಯಾಗುತ್ತದೆ. ವರ ಎಂಬ ಶಬ್ದಕ್ಕೆ ಅನೇಕ ಅರ್ಥಗಳಿವೆ. ವಧುವಿಗೆ ವರ, ವರದಾನ ಇತ್ಯಾದಿ ಶಬ್ದ ಪ್ರಯೋಗಗಳಲ್ಲಿ ವಿವಿಧ ಅರ್ಥ ಕಲ್ಪನೆ ಬರುತ್ತದೆ. ಇಲ್ಲಿ ವರ ಶಬ್ದದ ಅನಂತರ ಲಕ್ಷ್ಮೀ ಬಂದಿದ್ದಾಳೆ. ಅಂದರೆ ಹೇ ಲಕ್ಷ್ಮೀಯೇ ಸಂತೃಪ್ತಿಯನ್ನು ನೀಡು. ನೆಮ್ಮದಿಯನ್ನು ನೀಡು ಎಂಬುದಾಗಿದೆ. ಶ್ರೀಮನ್ನಾ ರಾಯಣನ




























