ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 10 ನೇ ಕೊಡಾಜೆ ಶಾಖೆಯು ನೇರಳಕಟ್ಟೆ ಬಳಿಯ ಕೊಡಾಜೆಯ ನಿಧಾ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿ ದೀಪ ಪ್ರಜ್ವಲಿಸಿದರು.ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂದರ್ ಜೈನ್ ಭದ್ರತಾ ಕೊಠಡಿ ಉದ್ಘಾಟಿಸಿದರು. ನೆಟ್ಲಮುಡ್ನೂರು ವ್ಯವಸಾಯ ಸೇವಾ ಸಹಕಾರಿ
ಮಂಜೇಶ್ವರದದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮಂಜೇಶ್ವರ ಗ್ರಾ.ಪಂ.ನ 13ನೇ ವಾರ್ಡ್ ವಾಮಂಜೂರು ಕಜೆಯ ಕೊಪ್ಪಳ ಪ್ರದೇಶದಲ್ಲಿ ಕಳೆ ಎರಡು-ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಪರಿಸರದ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಈ ಪರಿಸರದಲ್ಲಿ ಉಪ್ಪಳ ಹೊಳೆ ತುಂಬಿ ಹರಿಯುತ್ತಿದ್ದು, ಹೊಳೆ ಸಂಗಮಿಸುವ ಪರಿಸರದ ಅನೇಕ ಹಳ್ಳ, ತೊರೆಗಳು ನೀರು ತುಂಬಿ ಮನೆಗಳನ್ನು ಆಕ್ರಮಿಸಿ, ಮನೆಗಳಿಗೆ ನೀರು ನುಗ್ಗಿದೆ. ಪರಿಸರದಲ್ಲಿ 20ರಷ್ಟು
ಪುತ್ತೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಾನೂನನ್ನು ಕಟ್ಟುನಿಟ್ಟಿನ ಜಾರಿಗೆ ಮುಂದಾಗಿದ್ದಾರೆ. ಜು.1 ರಿಂದಲೇ ಇದರ ಅನುಷ್ಠಾನಕ್ಕೆ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಾಗೃತಿ ಹಾಗೂ ಪಾಲನೆಯಲ್ಲಿ ನಗರಸಭೆಯ ಎಲ್ಲಾ ವಾರ್ಡಗಳ ಸದಸ್ಯರು ಸಹಕಾರ ನೀಡಬೇಕು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮನವಿ ಮಾಡಿದ್ದಾರೆ. ನಗರಸಭಾ ಸಾಮಾನ್ಯ ಸಭೆಯು ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. 2016ರಲ್ಲಿ ಏಕ ಬಳಕೆ
ಬಂಟ್ವಾಳ : ಕ್ಷೇತ್ರದ 39 ಗ್ರಾ.ಪಂ.ನ ಪಿಡಿಒ, ಗ್ರಾಮಕರಣಿಕರು, ಅಧ್ಯಕ್ಷ, ಉಪಾಧ್ಯಕ್ಷರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡಿನ ಕಚೇರಿಯಿಂದ ತಹಶೀಲ್ದಾರ್, ತಾ.ಪಂ.ಇಒ ಹಾಗು ಇತರೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೂಗೂಲ್ ಮೀಟ್ ಮೂಲಕ ಸಂವಾದ ನಡೆಸಿದರು. ಗ್ರಾ.ಪಂ.ವ್ಯಾಪ್ತಿಯಲ್ಲಿರುವ ವಿವಿಧ ಸಮಸ್ಯೆಯನ್ನು ಆಲಿಸಿದ ಶಾಸಕರು, ತಹಶೀಲ್ದಾರ್ ಡಾ.ಸ್ಮಿತಾ ರಾಮು, ಇಒ ರಾಜಣ್ಣ ಅವರು ಪರಿಹಾರದ ನಿಟ್ಟಿನಲ್ಲಿ ಸೂಕ್ತ ಸಲಹೆ,
ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮೂರನೆಯ ವಾರ್ಡಿನ ನಾಗನ ಮಜಲು ಎಂಬಲ್ಲಿ ರಸ್ತೆ ಬಿರುಕು ಬಿಟ್ಟ ವರದಿಗೆ ಸ್ಪಂದಿಸಿದ ತಾಲೂಕು ತಹಶೀಲ್ದಾರ್ ಶ್ರೀಮತಿ ಅನಿತಾ ಲಕ್ಷ್ಮಿ ಆದೇಶದ ಮೇರೆಗೆ ಪೆರುವಾಜೆ ಗ್ರಾಮದ ನೋಡಲ್ ಆಫೀಸರ್ ಗಳಾದ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಶಿವರಾಜ್ ಹಾಗೂ ಮೆಸ್ಕಾಂ ಅಧಿಕಾರಿ ಪ್ರಸಾದ್ ಕೆ.ವಿ. ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ
ಉಳ್ಳಾಲ: ರಾಜ್ಯದ ಏಳು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಿದ್ದು, ಇಲ್ಲಿ ಸಂಪೂರ್ಣ ಹಾನಿಗೀಡಾದ ಮನೆಯವರಿಗೆ ತಕ್ಷಣ ರೂ. 5 ಲಕ್ಷ ಪರಿಹಾರ ನೀಡುವಂತೆ ಏಳು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಅವರು ಕಡಲ್ಕೊರೆತಕ್ಕೀಡಾದ ಉಳ್ಳಾಲ ತಾಲೂಕಿನ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಹಾಗೂ ಮೊಗವೀರಪಟ್ನ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂದರು ಹಾಗೂ ಮೀನುಗಾರಿಕಾ ಸಚಿವರುಗಳ ಜೊತೆಗೆ ಭೇಟಿ
ಸ್ವಾಮಿ ವಿವೇಕಾನಂದರು ಕಂಡಂತಹ ಭಾರತವನ್ನು ನಾವು ನಿರ್ಮಾಣ ಮಾಡುವತ್ತ ಮುಂದುವರಿಯಬೇಕಿದ್ದು ಪ್ರಸ್ತುತದ ದಿನಗಳು ದೇಶಾದ್ಯಂತ ಅದಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದು ಆ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ಬೋಳಿಯಾರಿನ ಅಮರ್ ದೀಪ್ ಸಭಾಂಗಣದಲ್ಲಿ ಬೆಂಗಳೂರಿನ ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿ. ನ ಸಾಂಸ್ಥಿಕ ಸಾಮಾಜಿಕ ಜವಬ್ದಾರಿ(ಸಮೈಸೂರುಆರ್ ) ಯಡಿಯಲ್ಲಿ ಚೇರ್
ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಡಸಮೇತ ಆಲದ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಖಂಗೊಂಡಿದೆ.ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಬೀಸಿದ ಗಾಳಿಯ ರಭಸಕ್ಕೆ ಬುಡ ಸಮೇತ ಆಲದ ಮರದ ಬಿದ್ದಿದೆ .ಸ್ಥಳೀಯರಿಂದ ಮಿಂಚಿನ ಕಾರ್ಯಾಚರಣೆ ಮರದ ಗೆಲ್ಲುಗಳ ತೆರವಿಗೆ ಕಾರ್ಯಾರಂಭ,ಸಹಕಾರಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ತಾತ್ಕಾಲಿಕ ವ್ಯವಸ್ಥೆ ಸುಗಮ ವಾಹನ ಸಂಚಾರಕ್ಕಾಗಿ
ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಜು.7ರ ಗುರುವಾರ ಭೇಟಿ
ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ಸಮಸ್ಯೆಗಳನ್ನು ಬಗೆ ಹರಿಸುವ ಸಲುವಾಗಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಮಿಕ ಅದಾಲತ್ ನಡೆಸಲಾಗುತ್ತಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿ ಶರ್ಬತ್ ಕಟ್ಟೆಯ ಸಮೀಪದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯಲ್ಲಿ “ಕಾರ್ಮಿಕ ಅದಾಲತ್-2 ವಾಹನ ಜಾಥಾಕ್ಕೆ ಚಾಲನೆ ಸಿಕ್ಕಿತ್ತು. ಸಹಾಯಕ ಕಾರ್ಮಿಕ ಆಯುಕ್ತರಾದ ಶಿವ ಕುಮಾರ್ ಚಾಲನೆ ನೀಡಿದರು. ತದಬಳಿಕ ಮಾತನಾಡಿದ ಅವರು, ಕಾರ್ಮಿಕ ಸಚಿವರ ಸೂಚನೆ ಮೇರೆಗೆ




























