Home Posts tagged #v4newskarnataka (Page 165)

ಬಜ್ಪೆಯ ಅದ್ಯಪಾಡಿಯಲ್ಲಿ ಗುಡ್ಡ ಕುಸಿತ , ರಸ್ತೆ ಕುಸಿತದಿಂದ ಆದ್ಯಪಾಡಿ-ಕೈಕಂಬ ಸಂಪರ್ಕ ಕಡಿತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದೆ ಇದು ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆಯಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ಸ್ಪಷ್ಟನೆ

ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ

ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ದಿನಾಂಕ 6

ಜೈನ ಮನೆತನದ ವಾರಸುದಾರ ರಾಹುಲ್ ಬಲ್ಲಾಳ್ ನಿಧನ

ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ ವಾರಸುದಾರರಾದ ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್ ಕಾನೂನು ಪಧವೀಧರರು. ತನ್ನ ಕುಟುಂಬದ ಕೃಷಿ ಹಾಗೂ ಹೋಟೇಲ್ ಉದ್ಯಮವನ್ನು ಮುನ್ನಡೆಸಲು ರಾಹುಲ್ ಅವರು

ಬಂಟ್ವಾಳ: ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಗುಡ್ಡ ಕುಸಿತ: ಮೃತಪಟ್ಟವರ ಸಂಖ್ಯೆ 3ಕ್ಕೇರಿಕೆ

ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ ಕೊನೆಯುಸಿರೆಳೆದಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಣ್ಣಿನಡಿಯಿಂದ ರಕ್ಷಿಸಲ್ಪಟ್ಟು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ

ಕಾಡಮಲ್ಲಿಗೆ ಖ್ಯಾತಿಯ : ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು. ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ

ಸುಳ್ಯ ತಾಲೂಕಿನ ನಾಗೇಶ್ ಬೆಳ್ಳಾರೆ ಇವರಿಗೆ ಯುವ ರತ್ನ ಅಪ್ಪು ಪ್ರಶಸ್ತಿ

ದಿನಾಂಕ 25.6.2022. ಎ. ವಿ ವರದಚಾರ್ ಮೆಮೋರಿಯಲ್ ಹಾಲ್ ಮಲ್ಲೇಶ್ವರಂ ಬೆಂಗಳೂರು. ಕಲಾ ಸಂಗಮ ಬೆಂಗಳೂರು ಇವರು ಹಮ್ಮಿಕೊಂಡ ಕನ್ನಡ ರಾಜ ರತ್ನ ಸವಿ ನೆನಪಿಗಾಗಿ ಯುವ ರತ್ನ ಅಪ್ಪು ಗೀತಾ ಗಾಯನ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ವ್ಯಕ್ತಿಗಳು. ಡಾ. ಆಂಜನಪ್ಪ MBBS_MS, General surgery gastroenterologist, ಶಶಿಧರ್ ಕೋಟೆ ಚಲನಚಿತ್ರ ನಟರು ಮತ್ತು

ಬೈಂದೂರು: ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರ ಆರೋಪಿಗಳ ಬಂಧನ

ಬೈಂದೂರು: ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರಿಗೆ ಬಂದ ಖಚಿತ ಮಾಹಿತಿಯಂತೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಉಪಸ್ಥಿತಿಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಬೈಂದೂರು ರಾಹುತನಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ. ಭಟ್ಕಳ ನಿವಾಸಿ ಅಬ್ದುಲ್ ರೆಹಮಾನ್ (31), ಶಿರ್ವ ನಿವಾಸಿ ಅಬ್ದುಲ್ ಸಮದ್ (30) ಬಂಧಿತರಾಗಿದ್ದು, ಇವರಿಬ್ಬರು ಮಾದಕ ವಸ್ತುವನ್ನು ಸಲೀಮ್ ಮಂಚಿ ಎಂಬಾತನಿಂದ ಖರೀದಿಸಿ

ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಂ : ಬೈಕ್ ಖರೀದಿಯ ಜೊತೆಗೆ ಆಕರ್ಷಕ ಬಹುಮಾನ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್‍ನ ಹೀರೋ ಶೋರೂಮ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಶುಭ ಸುದ್ದಿ… ನಗರದಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಮ್ ಉತ್ತಮ ಗುಣಮಟ್ಟದ ದ್ವಿಚಕ್ರ ವಾಹನದ ಜೊತೆಗೆ ಗ್ರಾಹಕರನ್ನು ಸಂತ್ರಪ್ತಿಗೊಳಿಸಲು ಲಾಂಚಿಂಗ್ ಆಫರ್ ನ್ನು ನೀಡುತ್ತಿದ್ದಾರೆ. ಇನ್ನು ಜೊತೆಗೆ ಹೆಲ್ಮೆಟ್ ಆಗಿದೆ, ಟಿಶರ್ಟ್ ಟ್ರ್ಯಾಕ್ ಪ್ಯಾಂಟ್, ರೈನ್ ಕೋಟ್,

ಕರ್ನಾಟಕ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮ

ಎಸ್‍ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು. ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲರಾದ ಡಾ.ರವಿರಾವ್ ಎಸ್. ವೈದ್ಯರ ದಿನದ ಮಹತ್ವ ವಿವರಿಸಿದರು. ಎಸ್.ಸಿಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡಿದ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ

ಪಡುಬಿದ್ರಿ ಜಂಕ್ಷನ್‍ ಮೋಪೆಡ್ ಸವಾರನ ಮೇಲೆ ಮುಗುಚಿ ಬಿದ್ದ ಲಾರಿ : ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿತ್ತು. ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೋಲಿಸರು ಸ್ಥಳೀಯರ