Home Posts tagged #v4newskarnataka (Page 167)

ಪ್ರವೀಣ್ ಕೊಲೆ ಖಂಡಿಸಿ ಡಾ.ಪ್ರಣಾವನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ

ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀ ಪ್ರಣಾವನಂದ ಸ್ವಾಮೀಜಿ ಅವರು , ಮೃತ ಪ್ರವೀಣ್ ಅವರ ಕುಟುಂಬಕ್ಕೆ 1

ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನ: ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ತೀರ್ಥ ಸ್ನಾನ

ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಿಗೆ ವೀಳ್ಯ ಅಡಿಕೆಯ ಭಾಗಿನ ಬಿಟ್ಟು ತೀರ್ಥ ನೀರು ಮಿಂದು ಪುನೀತರಾದರು. ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು. ಮಹಾಭಾರತ ಯುದ್ಧದ ಬಳಿಕ ಪಾಂಡವರು ತಮ್ಮ

ಸಂಜೀವ ಮಠಂದೂರು ಅವರನ್ನು ತರಾಟೆಗೆತ್ತಿಕೊಂಡ ಪ್ರವೀಣ್ ಪತ್ನಿ ನೂತನಾ

ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಜು.28ರಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ. ಈ ವೇಳೆ ಪ್ರವೀಣ್ ಪತ್ನಿ ನೂತನಾ ಅವರು ಶಾಸಕರನ್ನು ತರಾಟೆಗೆತ್ತಿಕೊಂಡಿದ್ದಾರೆ. `ನನ್ನ ಗಂಡನ ಕೊಲೆ ಆಗಿ ಎರಡು ದಿನ ಆಯಿತು. ಇವತ್ತು ಬರ್ತೀರಾ, ನಿಮ್ಮ ಮನೆಯ ಮಗಳಿಗೆ ಹೀಗಾದರೆ ಹೀಗೆ ಮಾಡ್ತೀರಾ, ಪಕ್ಷ ಪಕ್ಷ ಪಕ್ಷ ಎಂದು ನನ್ನವರು ಹೇಳುತ್ತಿದ್ದರು. ಸಂಜೀವಣ್ಣನ ಪಿಎಗೆ ಕಾಲ್

ಪ್ರವೀಣ್ ನೆಟ್ಟಾರು ಕೊಲೆ : ಇಬ್ಬರ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೆÇಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳಾಗಿದ್ದಾರೆ.

ಪುತ್ತೂರು ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್ ಪಥಸಂಚಲನ.

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಗಲಭೆಕೋರರಿಗೆ ಎಚ್ಚರಿಕೆಗೆ ನೀಡಲು ಮತ್ತು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆಗಾಗಿ ರಾಜ್ಯ ಮೀಸಲು ಪಡೆಯ ಸಶಸ್ತ್ರ ಪೊಲೀಸರಿಂದ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಮತ್ತು ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಜು. 28ರಂದು ಪುತ್ತೂರು ಪೇಟೆಯಲ್ಲಿ ಪಥ ಸಂಚಲನ ನಡೆಯಿತು.

ಪ್ರವೀಣ್ ನೆಟ್ಟಾರು ಅವರ ಹತ್ಯೆ : ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ

ಸುಳ್ಯ:ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಳಿಕ ನಿನ್ನೆ ಬಂದ್, ಪ್ರತಿಭಟನೆ, ಲಾಠಿ ಚಾರ್ಜ್ ನಡೆದು ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ ಮರಳಿದೆ. ಇಂದು ಬೆಳಿಗ್ಗಿನಿಂದ ಪೇಟೆಯು ಸಹಜ ಸ್ಥಿತಿಗೆ ಮರಳಿದ್ದು ಅಂಗಡಿ ಮುಂಗಡಿಗಳು ತೆರೆದು ಕೊಂಡಿದೆ, ವಾಹನ ಸಂಚಾರ, ಜನ ಸಂದಣಿ ಮಾಮೂಲಿಯಂತೆ ಇದೆ. ಶಾಲಾ ಕಾಲೇಜುಗಳು ತೆರೆದು ಕೊಂಡಿದೆ. ಬೆಳ್ಳಾರೆ ಪೇಟೆ ಮತ್ತು ಪರಿಸರದಲ್ಲಿ ಬಿಗು ಪೆÇಲೀಸ್ ಬಂದೋಬಸ್ತ್

ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಹಾಗೂ ಪ್ರದರ್ಶನ

ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಯೋಜನೆ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಹಾಗೂ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆರಂಭಗೊಂಡಿದ್ದು ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಬಿ.ಸಿ.ರೋಡು ಪರಿಸರದಲ್ಲಿ ಇದೇ ಪ್ರಥಮ ಬಾರಿಗೆ ಬೃಹತ್ ಬಟ್ಟೆಗಳ ಮಾರಾಟ ಮೇಳ ಆರಂಭಗೊಂಡಿದ್ದು ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199

ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಹಾಲೆ ಮರದ ತೊಗಟೆಯ ಕಷಾಯ ವಿತರಣೆ

ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.ಹಿಂದು ರಕ್ಷಾ ವೆಲ್‍ಫೇರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ. ಪಿ. ಮಾತನಾಡಿ, ತುಳುನಾಡ ಸಂಸ್ಕೃತಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆಯು ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಅತ್ಯಂತ ಮಹತ್ವವನ್ನು ಪಡೆದಿದೆ. ಆಟಿ ಅಮಾವಾಸ್ಯೆಯ ದಿನ ಹಾಲೆ ಮರದ

ಆಷಾಢ( ಆಟಿ ) ಅಮಾವಾಸ್ಯೆಯ ಹಾಲೆ ಮರದ ವೈಶಿಷ್ಟ್ಯತೆ

ಹಾಲೆ ಮರದ ಎಲೆಯು ಸಾಮಾನ್ಯವಾಗಿ ದಪ್ಪವಾಗಿದ್ದು ಒಂದು ಗೊಂಚಲಿನಲ್ಲಿ 7 ರಿಂದ 9 ಪತ್ರಗಳಿರುತ್ತವೆ. ಎಲೆಗಳ ಅಗಲ ಒಂದರಿಂದ ಎರಡು ಇಂಚು ಇದ್ದು, ಉದ್ದ 6 ರಿಂದ 12ಇಂಚು ಇರುತ್ತದೆ. ಕಡು ಹಸಿರು ವರ್ಣದಿಂದ ಕೂಡಿದ್ದು ಮುರಿದಾಗ ಹಾಲು ಹೊರಸೂಸುತ್ತದೆ.ಹಾಲೆ ಮರದ ತೊಗಟೆ ಬೂದು ವರ್ಣದಿಂದ ಕೂಡಿದ್ದು, ದೊರಗಾಗಿದ್ದು ಕಲ್ಲಿನಿಂದ ಜಜ್ಜಿ ಹಾಳೆಗಳಂತೆ ತೆಗೆಯಲು ಬರುವುದು. ಈ ಕಷಾಯವನ್ನು ಕುಡಿಯುವುದರಿಂದ ಶೀತ ವಾತಾವಾರಣವನ್ನು ತಡೆದುಕೊಳ್ಳುವ ಶಕ್ತಿ ಬರುತ್ತದೆ ಹುಳ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ : ಬಂಡೆಗೆ ಬಡಿದ ದೋಣಿ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ