Home Posts tagged #v4newskarnataka (Page 168)

ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ, ನಿರಂತರವಾಗಿ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ: ಆರೋಪಿಗಳ ಬಂಧನಕ್ಕೆ ಐದು ವಿಶೇಷ ತಂಡ ರಚನೆ.

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ಐದು ವಿಶೇಷ ಪೋಲಿಸ್

ಪುತ್ತೂರು ಉಪವಿಭಾಗ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

ಪುತ್ತೂರು: ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಅವರ ಬೆಳ್ಳಾರೆ ಮನೆಗೆ ಕೊಂಡು ಹೋಗುವ ಸಂದರ್ಭ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಲಿನೆಟ್ ಜಂಕ್ಷನ್ ಬಳಿ ಬಸ್ಸೊಂದಕ್ಕೆ ಕಲ್ಲು ತೂರಾಟ ನಡೆಸಿರುವ ಘಟನೆ

ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ಮೃತ ದೇಹದ ಮೆರವಣಿಗೆ ಹಿನ್ನಲೆ – ಪುತ್ತೂರಿನಲ್ಲಿ ಬಿಗಿ ಬಂದೋಬಸ್ತ್.

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಕೊಂಡೊಯ್ಯಲಾಗುವುದು. ಮೆರವಣಿಗೆ ಸಂದರ್ಭ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸರ್ಕಾರಿ ಬಸ್ ಗೆ ಪುತ್ತೂರಿನ ಬೊಳುವಾರಿನಲ್ಲಿ ದುಷ್ಕರ್ಮಿಗಳಿಂದ ಕಲ್ಲು ತೂರಾಟ – ಬಸ್ ಗಾಜು ಪುಡಿ ಪುಡಿ

ಪುತ್ತೂರಿನ ಬೊಳುವಾರಿನ ವಿಶ್ವ ಕರ್ಮ ಸಭಾ ಭವನದ ಮುಂಭಾಗ ಸರ್ಕಾರಿ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡಸಿದ್ದಾರೆ. ಇದೀಗ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಲ್ಲಾ ಮಾರ್ಗಗಳಲ್ಲಿ ಬಸ್ ನ್ನು ಸಂಚಾರ ತಡೆ ಹಿಡಿಯಲಾಗಿದೆ. ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬಸ್ ಸಂಚಾರದ ಬಗ್ಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿ ಇರಲಿಲ್ಲ. ಈ ನಡುವೆ ಜನವಶ್ಯಕವಾದ ಬಸ್’ಗಳು ಸಂಚಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್

ಎಂ.ಪಿ ಸಿಲ್ಕ್ಸ್ ಆಷಾಢ ಆಫರ್ ರಿಯಾಯಿತಿ ದರದಲ್ಲಿ ವಿವಿಧ ಬ್ರ್ಯಾಂಡೆಡ್ ವಸ್ತ್ರಗಳು ಶೇ.50ರಷ್ಟು ಡಿಸ್ಕೌಂಟ್

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್‍ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸೂರತ್ ಸೀರೆ, ಫ್ಯಾನ್ಸಿ ಮತ್ತು ಕಾಟನ್

ಗೂಂಡಾಗಿರಿಗೆ ಬಜರಂಗದಳವನ್ನು ಸರ್ಕಾರವೇ ಕಳುಹಿಸಿದ್ದೆ..? : ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿಕೆ

ಹೊಟೇಲ್‍ಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಗೂಂಡಾಗಿರಿ ಪ್ರದರ್ಶಿಸಲು ಆ ಸಂಘಟನೆಗೆ ಅಧಿಕಾರ ನೀಡಿದವರು ಯಾರು ಬಿಜೆಪಿ ಸರಕಾರವೇ ಇವರನ್ನು ಕಳುಹಿಸಿದ್ದೇ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗ ಮತ್ತೆ ಬಿಜೆಪಿ ಸರಕಾರ ಇರುವಾಗ ಚುನಾವಣೆ

ಆಲೂರು : ಕಲುಷಿತ ಆಹಾರ ಸೇವನೆಯಿಂದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಹಾಸನದ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಶಾಲೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ನೀಡಿ, ಪರಿಶೀಲನೆ ನಡೆಸಿದ್ರು. ಅಡುಗೆ ಕೊಠಡಿ, ಸಾಮಗ್ರಿಗಳ ಕೊಠಡಿ, ಆಹಾರ ಪದಾರ್ಥಗಳನ್ನು ಪರೀಶೀಲನೆ ಮಾಡಿ, ಶಾಲಾ ಕೊಠಡಿಗಳು, ಸ್ನಾನಗೃಹಗಳು, ಶೌಚಲಯಕ್ಕೆ ಭೇಟಿ ನೀಡಿದ್ರು. ನಂತರ ಮಾತನಾಡಿದ ಅವರು ಸದ್ಯ ಈ ವಸತಿ ಶಾಲೆ ಕಟ್ಟಡದಲ್ಲಿ 204 ಮಕ್ಕಳು ಇದ್ದು 25 ಮಕ್ಕಳಿಗೆ ವಾಂತಿ ಬೇಧಿ ಸುಸ್ತು ಕಾಣಿಸಿಕೊಂಡಿದ್ದು.