Home Posts tagged #v4newskarnataka (Page 169)

ಫೈಟಿಂಗ್ ಕಾರ್ಮಿಕನಿಗೆ 1 ಕೋಟಿ ರೂ. ಅದೃಷ್ಟ ಬಹುಮಾನ

ಮಂಜೇಶ್ವರ ಪಾವೂರು ಗೇರುಕಟ್ಟೆ ನಿವಾಸಿ ಪೈಂಟರ್ ಬಾವ ಎಂದೇ ಪರಿಚಿತರಾಗಿರುವ ಮೊಹಮ್ಮದ್ ಎಂಬವರಿಗೆ 1 ಕೋ.ರೂ. ಕೇರಳ ರಾಜ್ಯಲಾಟರಿ ಒಲಿದಿದೆ. ಡ್ರಾ ಆಗುವ ತಾಸುಗಳ ಮೊದಲು ಟಿಕೇಟ್ ತೆಗೆದ ಅದೃಷ್ಟವಂತನಾಗಿದ್ದಾನೆ. ಈತನಿಗೆ 5 ಮಕ್ಕಳ ಪೈಕಿ 2 ಮಕ್ಕಳನ್ನು ಮದುವೆ ಮಾಡಿಸಿ ಕೊಟ್ಟ ಬಳಿಕ 50ಲಕ್ಷ ರೂ. ಗಿಂತಲೂ ಮಿಕ್ಕ ಸಾಲದಲ್ಲಿ ಮುಳುಗಿ ಇದ್ದ ಮನೆಯನ್ನು ಕೂಡಾ ಮಾರಿ

ಅನಧಿಕೃತ ಗ್ಯಾಸ್ ಗೋಡನ್ ತೆರವುಗೊಳಿಸಲು ನಿರ್ಲಕ್ಷ್ಯ : ಅಪಾಯದಂಚಿನಲ್ಲಿ ದಲಿತ ಕುಟುಂಬಗಳು

ಪಡುಬಿದ್ರಿ ಗ್ರಾಮದ ಪಾದೆಬೆಟ್ಟುವಿನಲ್ಲಿ ಬಹಳಷ್ಟು ವರ್ಷಗಳಿಂದ ಅನಧಿಕೃತವಾಗಿ ದಲಿತ ಕಾಲೊನಿಯಲ್ಲಿ ಸುತ್ತಲೂ ವಾಸದ ಮನೆಗಳಿರುವ ಪ್ರದೇಶದಲ್ಲಿ ಗ್ಯಾಸ್ ಗೋಡಾನ್ ಕಾರ್ಯಚರಿಸುತ್ತಿದ್ದರೂ ಈ ಬಗ್ಗೆ ಗ್ರಾ.ಪಂ. ಸಹಿತ ಸಂಬಂಧಿಸಿದ ಇಲಾಖಾಧಿಕಾರಿಗಳು ತೆರವುಗೊಳಿಸಲು ನಿರ್ಲಕ್ಷ್ಯ ಧೋರಣೆ ತಾಳಿದು, ಅನಿವಾರ್ಯ ಸ್ಥಿತಿ ಒದಗಿ ಬಂದರೆ ನಾವೆಲ್ಲರೂ ಒಂದಾಗಿ ಅಪಾಯಕಾರಿ ಗೋಡನ್ ದ್ವಂಸಗೊಳಿಸುವುದಾಗಿ ದಲಿತ ಮುಖಂಡ ಸುಂದರ್ ಮಾಸ್ತರ್ ಎಚ್ಚರಿಸಿದ್ದಾರೆ. ಗೋಡಾನ್ ಪ್ರದೇಶದಿಂದ

21ನೇ ಒಡಿಯೂರು ಶ್ರೀಗುರುದೇವ ಸೇವಾ ಬಳಗ ಮುಂಬಯಿ ಘಟಕದ ವಾರ್ಷಿಕೋತ್ಸವ

ಸುಖ ದುಃಖಗಳನ್ನು ಸಮತೋಲನದಲ್ಲಿಡಲು ಆಧ್ಯಾತ್ಮಿಕತೆ ಬೇಕು .ಸುಖ ವೆಂದರೆ ಮನಸ್ಸಿನ ಸ್ಥಿತಿ ಯಾಗಿದೆ ಮನಸ್ಸನ್ನು ಏಕಾಗ್ರತೆಯಲ್ಲಿಟ್ಟು ಆಧ್ಯಾತ್ಮಿಕದ ವಿಚಾರಧಾರೆಗಳನ್ನು ನಮ್ಮಲ್ಲಿ ಇರಿಸಿಕೊಂಡಾಗ ಧರ್ಮದ ಕಡೆಗೆ ನಮ್ಮ ನಡೆಯಲು ಸಾಧ್ಯವಾಗುತ್ತದೆ ತಾಯಂದಿರು ಮಕ್ಕಳಿಗೆ ಜ್ಞಾನದ ಬೆಳಕಾಗಬೇಕು ಯುವ ಸಮುದಾಯ ಜಾಗೃತರದಾಗ ದೇಶ ಸದೃಡ ವಾಗುತ್ತದೆ ಎಂದುಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀಕ್ಷೇತ್ರ ಒಡಿಯೂರು ಇದರ

ಮಂಗಳೂರಲ್ಲಿ ಟೈಲರ್ ಅಸೋಸಿಯೇಶನ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದ.ಕ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟೈಲರ್‍ಗಳು ಬೀದಿಗಿಳಿದು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಟೈಲರ್ ಸಂಘಟನೆಯ ಕರೆಯ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಮಂಗಳೂರಿನ ಬಲ್ಮಠ ಬಳಿಯ ಶಾಂತಿನಿಲಯ ಸಮೀಪದ ಮೈದಾನದಿಂದ ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಟೈಲರ್‍ಗಳು ಭಾಗವಹಿಸಿ

ಮಂಗಳೂರಲ್ಲಿ ಪಬ್ ಭಜರಂಗದಳ ದಾಳಿ ವಿಚಾರ ಯಾವುದೇ ದೈಹಿಕ ಹಲ್ಲೆ ನಡೆದಿಲ್ಲ ಪೊಲೀಸ್ ಕಮೀಷನರ್ ಶಶಿಕುಮಾರ್ ಹೇಳಿಕೆ

ಪಬ್ ಮೇಲೆ ಬಜರಂಗದಳ ದಾಳಿ ಘಟನೆ ಸಂಬಂಧಿಸಿ ಹೇಳಿಕೆ ನೀಡಿರುವ ಪೆÇಲೀಸ್ ಕಮಿಷನರ್ ಶಶಿಕುಮಾರ್, ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಅಪ್ರಾಪ್ತ ಯುವಕ- ಯುವತಿಯರು ಇದ್ದರೆಂದು ಆಕ್ಷೇಪ ಎತ್ತಿದ್ದರು ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.ಇಂದು ಬೆಳಗ್ಗೆ ಬಲ್ಮಠದ ಪಬ್ ಆವರಣಕ್ಕೆ ಬಂದು ಪರಿಶೀಲನೆ ನಡೆಸಿದ ಕಮಿಷನರ್‍ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ರಾತ್ರಿ ಹತ್ತು- ಹನ್ನೆರೆಡು ಮಂದಿ ಪಬ್ ಮುಂಭಾಗದಲ್ಲಿ ಜಮಾಯಿಸಿದ್ದರು. ಪಬ್

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗೆ ಖಂಡನೆ : ಕಾಪುವಿನಲ್ಲಿ ಎಸ್‍ಡಿಪಿಐ ವತಿಯಿಂದ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್‍ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು. ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್ ಹಾಕಿದ್ದಾರೆ. ಹಾಲು, ಮಜ್ಜಿಗೆ, ಮೊಸರಿಗೆ ಜಿಎಸ್‍ಟಿ ಹಾಕಿ ಜನರನ್ನು ಬದುಕದಂತೆ

ಸುಳ್ಯದ ಅರಮನೆ ಗಯಕ್ಕೆ ಬೇಕಾಗಿದೆ ತೂಗು ಸೇತುವೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆ ಗಯ ಎಂಬಲ್ಲಿ ತೂಗು ಸೇತುವೆ ಮುರಿದು ಹೋಗಿದ್ದು ಸಂಚಾರಕ್ಕೆ ತೊಡಕುಂಟಾಗಿ ಅಲ್ಲಿನ ಜನತೆ ಸಂಕಷ್ಟಪಡುತ್ತಿದ್ದಾರೆ. 30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಒಂದು ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಎಷ್ಟು ಕೇಳಿದರು ಸ್ಪಂದನೆ ಇನ್ನೂ ಸಿಕ್ಕಿಲ್ಲ. ಮರ್ಕಂಜ ಮತ್ತು ಅರಂತೋಡು ಗ್ರಾಮಗಳ ನಡುವೆ ಹಂಚಿಹೋಗಿರುವ ಅರಮನೆಗಯದ ನಡುವೆ ಹರಿಯುವ ಹೊಳೆ ಈ ಊರಿನ

ಊರಿನ ಚಿತ್ರಣ ಬದಲಿಸುವ ಸೇತುವೆಗಳು….

ನದಿಗೆ ಅಡ್ಡಲಾಗಿ ಕಟ್ಟುವ ಸೇತುವೆಯೊಂದು ಹೇಗೆ ಊರೊಂದರ ಚಿತ್ರಣವನ್ನೇ ಬದಲಿಸುತ್ತದೆನ್ನುವುದನ್ನು ನಮಗೆ ಅನೇಕ ಬಾರಿ ಊಹಿಸಲೂ ಸಾಧ್ಯವಾಗುವುದಿಲ್ಲ.ಆ ಬದಲಾವಣೆಯಲ್ಲಿ ನಾವೂ ಬದಲಾಗಿ ಬಿಡುತ್ತೇವೆ. ಇಂತಹ ಬದಲಾವಣೆಗಳಾಗುತ್ತವೆ ಎಂದು ತಿಳಿದು ನಾವು ಥ್ರಿಲ್ ಆಗುತ್ತೇವೆ. ಆದರೆ ಬದಲಾವಣೆಗಳು ಘಟಿಸಿ ಊರಿನ ಚಿತ್ರಣ ಬದಲಾದ ಬಳಿಕ ನಮ್ಮೂರು ಹೀಗಿತ್ತು ಎನ್ನುವುದನ್ನು ನಾವು ಬಲು ಬೇಗ ಮರೆತುಬಿಡುತ್ತೇವೆ.ಹಿಂದಿನ ಚಿತ್ರಣಗಳು ಕಾಲಗರ್ಭದಲ್ಲಿ ಅಡಗುತ್ತಿದ್ದಂತೆಯೇ ನಮ್ಮ

ಒಬ್ಬಂಟಿ ವೃದ್ಧೆಯ ಕೊಲೆ ದರೋಡೆ ಪ್ರಕರಣದ ಆರೋಪಿ ವೃದ್ಧೆಯ ಸಂಬಂಧಿಕ ಅಶೋಕ್ ಬಂಧನ

ಬೆಳ್ತಂಗಡಿ : ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ನಿವಾಸಿ ಅಶೋಕ್ (28) ವೃದ್ಧೆಯನ್ನು ಕೊಲೆಗೈದ ಆರೋಪಿ. ಅಶೋಕ್ ಕೊಲೆಯಾದ ಅಕ್ಕು ಅವರ ಪುತ್ರ ಡೀಕಯ್ಯ ಅವರ ಪತ್ನಿಯ ಸಹೋದರಿಯ ಪುತ್ರನಾಗಿದ್ದ. ಈತ ಐಸ್ ಕ್ರೀಂ ವಾಹನದಲ್ಲಿ ಕೆಲಸ ಮಾಡುತ್ತಿದ್ದ.

ಬೆಳ್ತಂಗಡಿ: ಹಲ್ಲೆ ತಡೆಯಲು ಮುಂದಾದ ವ್ಯಕ್ತಿಯೇ ಸಾವು

ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಅವರು ಯುವಕರ ತಂಡದಿಂದ ಹಲ್ಲೆಗೊಳಗಾಗಿ ಮೃತಪಟ್ಟವರು. ಜಾರಪ್ಪ ನಾಯ್ಕ್ ಅವರ