Home Posts tagged #v4newskarnataka (Page 170)

ಕಾಪು : ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ ಬಿದ್ದು, ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಚಾಲಕಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು

ಕಡಲ್ಕೊರೆತ, ಸೌಪರ್ಣಿಕಾ ನದಿ ನೆರೆಹಾವಳಿ : ಸಂಕಷ್ಟ ನಿವಾರಣೆಗೆ ವರಾಹ ದೇವರಲ್ಲಿ ಪ್ರಾರ್ಥನೆ

ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಅಪಘಾತಗಳು ಹೆಚ್ಚುತ್ತಿರುವುದರಿಂದ ಜನರು ಭೀತರಾಗಿದ್ದು ಸಂಕಷ್ಟದ ನಿವಾರಣೆಗೆ ಜುಲೈ 28ರಂದು ನಡೆಯುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಮಾರಸ್ವಾಮಿ ವರಾಹ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದರ

ರೈಲ್ವೇ ಗೋಡೌನ್‍ನಿಂದ ಲಕ್ಷಾಂತರ ಬೆಲೆಯ ತಂತಿ ಕಳವು ,ತಂತಿ ಸಾಗಾಟ ನಡೆಸುತ್ತಿದ್ದ ಟೆಂಪೋ ಪಲ್ಟಿ

ಉಳ್ಳಾಲ: ರೈಲ್ವೇ ಇಲಾಖೆ ಗೋಡೌನ್ನಲ್ಲಿರಿಸಲಾದ ಲಕ್ಷಾಂತರ ಬೆಲೆಬಾಳುವ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋವಾಹನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿಬಿದ್ದು ಇಬ್ಬರು ಮಹಿಳೆಯರು ಹಾಗೂ ಓರ್ವ ಯುವಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಟೆಂಪೋ ಚಾಲಕನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ತಮಿಳುನಾಡು ಮೂಲದವರಾದ

ಮಂಗಳೂರು : ಸ್ಮಾರ್ಟ್‍ಸಿಟಿಯ ಹೊಂಡ ಮುಚ್ಚಿದ ಸಂಚಾರ ಪೊಲೀಸ್

ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದ ರಾವ್ & ರಾವ್ ಸರ್ಕಲ್‍ನಲ್ಲಿ ನಡೆದ ಕಾಮಗಾರಿಯ ಮಧ್ಯೆಯೂ ಕಾಣಿಸಿಕೊಂಡ ಹೊಂಡವನ್ನು ಕರ್ತವ್ಯ ನಿರತ ಸಂಚಾರ ಪೊಲೀಸ್ ಕಾನ್‍ಸ್ಟೇಬಲ್ ಶರಣಪ್ಪ ಸಾರ್ವಜನಿಕರ ಸಹಕಾರದಲ್ಲಿ ಕಲ್ಲು ಹಾಕಿ ಮುಚ್ಚಿ ಗಮನ ಸೆಳೆದಿದ್ದಾರೆ. ಕೆಲವು ಸಮಯದಿಂದ ಈ ಪ್ರಮುಖ ರಸ್ತೆಯಲ್ಲಿ ಹೊಂಡ ಉಂಟಾಗಿತ್ತು. ಇದರಿಂದ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಸಾಕಷ್ಟು ತೊಂದರೆ ಎದುರಿಸುತ್ತಿದ್ದರು. ಇದನ್ನು ಗಮನಿಸಿದ ಶರಣಪ್ಪ

ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ವಡ್ಯಾ ಸಂಪರ್ಕ ರಸ್ತೆ ಕಡಿತ

ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ ತೊಂದರೆ ಈಡಾಗಿದ್ದು ಯಾವುದೇ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳೂ ಕೂಡ ಭೇಟಿ ನೀಡದೆ ಜನಪ್ರತಿನಿಧಿಯು ಕೂಡ ಭೇಟಿ ನೀಡದೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸದ್ಯ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸಂಪರ್ಕ

ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾದ `ಜೀಟಿಗೆ’

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತುಳುನಾಡಿನ ದೈವಾರಾಧನೆ ಮತ್ತು ಅದರ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ `ಜೀಟಿಗೆ’ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಮಲಯಾಳಂ ನಿರ್ದೇಶಕ ಜಯರಾಜ್ ಜತೆ ಪಳಗಿದ ಸಂತೋಷ್ ಮಾಡ ನಿರ್ದೇಶನದ ಚೊಚ್ಚಲ ಚಿತ್ರವನ್ನು ನಿರ್ಮಾಣ ಮಾಡಿರುವುದು ಅರುಣ್ ರೈ ತೋಡಾರ್. ಪರಂಪರಾಗತವಾಗಿ ದೈವದ ನರ್ತನ ಸೇವೆ ಮಾಡುತ್ತ ಬಂದಿರುವ ತನಿಯಪ್ಪ, ತನ್ನ ಮಗನಿಗೆ ಈ ಚಾಕರಿ ಬೇಡ ಎಂದು ವಿದ್ಯಾಭ್ಯಾಸ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಯಂತ್ರದ ಉದ್ಘಾಟನೆ

ಮಣಿಪಾಲ, 21 ಜುಲೈ 2022: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಜೀವರಸಾಯನಶಾಸ್ತ್ರ ಪ್ರಯೋಗಾಲಯದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಕೋಬಾಸ್ ಇ 801 ಯಂತ್ರವನ್ನು ಉದ್ಘಾಟಿಸಲಾಯಿತು. ಪ್ರಯೋಗಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸುಧಾರಿತ ಯಂತ್ರವನ್ನು ಕೆಎಂಸಿ ಡೀನ್ ಡಾ ಶರತ್ ಕುಮಾರ್ ರಾವ್ , ಮಣಿಪಾಲದ ಬೋಧನಾ ಆಸ್ಪತೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಮತ್ತು ಮುಖ್ಯ ವೈದ್ಯಕೀಯ ಅಧೀಕ್ಷಕರಾದ ಡಾ ಅವಿನಾಶ್ ಶೆಟ್ಟಿ ಉದ್ಘಾಟಿಸಿದರು . ರೋಶ್

ಮಸೂದ್ ಹತ್ಯೆ,ಕುಟುಂಬಸ್ಥರ ಜೊತೆ ನಿಂತ ವಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್

ಸುಳ್ಯ ತಾಲೂಕಿನ ಕಳಂಜದಲ್ಲಿ ಮೊನ್ನೆ ರಾತ್ರಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಮಸೂದ್ ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದು ಯು.ಟಿ.ಖಾದರ್ ತೀವ್ರ ಖಂಡನೆ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯ ಮುಖಂಡರು ಜಿಲ್ಲಾಡಳಿತ ಪರಿಹಾರ ಘೋಷಿಸುವ ವರೆಗೂ ಮಯ್ಯತ್ (ಮೃತ ಶರೀರ) ನ್ನು ಪಡೆಯುವುದಿಲ್ಲ ಎಂಬುದಾಗಿ ಧರಣಿ ನಿರತರಾಗಿದ್ದು ಸ್ಥಳಕ್ಕೆ ಮಾಜಿ ಸಚಿವ ಶಾಸಕ

ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಿ ಪ್ರೊ.ಪ್ರೇಮಲತಾ ಶೆಟ್ಟಿ ನಿಧನ

ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ಇ ದರ ಸ್ಥಾಪಕರಾದ ಪ್ರೊ.ಪ್ರೇಮಲತಾ ಶೆಟ್ಟಿ ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ತಾ.21-7-2022 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರಿಗೆ 91 ವರ್ಷ ಪ್ರಾಯವಾಗಿತ್ತು. ಸರಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಸುಮಾರು 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಹಾಗೂ ಶಿಕ್ಷಣ ರಂಗದಲ್ಲಿ ಎಜುಕೇಶನ್ ಟ್ರಸ್ಟ್ ಸ್ಥಾಪಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸಿಕೊಂಡು ಬಂದಿದ್ದರು.

ಜೈವಿಕ ಸರಪಳಿಯನ್ನು ಸಂರಕ್ಷಿಸೋಣ : ಡಾ|| ಚೂಂತಾರು

ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ. ಜೈವಿಕ ಸರಪಳಿ ನಾಶವಾಗಿ ಹಲವಾರು ವಿರಳ ಗಿಡ ಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ ನಾಡು ಸಮೃದ್ಧವಾಗಿ ಕಾಲ ಕಾಲಕ್ಕೆ ಮಳೆ,