ಥಾಣೆ: ಮಾನವನಿಗೆ ಒಂದು ಧರ್ಮವಿದೆ, ಅದುವೇ ಮಾನವ ಧರ್ಮ. ಮಾನವ ಧರ್ಮ ವನ್ನು ಸಂಸ್ಕಾರದ ಮೂಲಕ ಅರಿಯಬೇಕು. ಅದರಿಂದ ಸಂಸ್ಕøತಿ ಉಳಿಯಲು ಸಾಧ್ಯವಿದೆ. ಸ್ವಾರ್ಥದ ಬದುಕು ಹೋಗಿ ನಿಸ್ವಾರ್ಥದ ಬದುಕು ನಮ್ಮದಾಗಬೇಕು. ಅಂತಹ ಗುಣ ನಮಗೆ ಬರಬೇಕು. ಕಡಲಿನಂತಹ ವಿಶಾಲವಾದ ಗುಣ ನಮ್ಮಲ್ಲಿರಲಿ. ನಮ್ಮನ್ನು ನಾವು ಅರಿಯಬೇಕು.ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥ ರಾದಾಗ ಮಾತ್ರ
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುದರಂಗಡಿ ಪ. ಪೂ. ಕಾಲೇಜಿನಲ್ಲಿ ಪತ್ರಿಕಾ ಮಾಹಿತಿ ಕಾರ್ಯಗಾರ ನೆರವೇರಿತು.ಪತ್ರಿಕಾ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿ ಉಡುಪಿ ಎಂಜಿಎಂ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುಚಿತ್ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರಾಗ ಬೇಕಾದವರು ಪ್ರಮುಖವಾಗಿ ಯಾವುದೇ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸ ಬೇಕಾಗಿರುವುದು ಅತ್ಯಗತ್ಯವಾಗಿದೆ. ವೃತ್ತಿ ಬದುಕಿನಲ್ಲಿ ಪತ್ರಕರ್ತರಿಗಿರುವಷ್ಟು ಹೊಸತನ,
2017ರ ಡಿಸೆಂಬರ್ ತಿಂಗಳ 29ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಇರುವ (ಆಗಿನ) ವಿಜಯ ಬ್ಯಾಂಕ್ನಲ್ಲಿ ಕ್ಯಾಶಿಯರ್ ಅಗಿದ್ದ ವಿಕಾಸ್ ಶೆಟ್ಟಿ ರೂ. 27,29,875/- ಎಗರಿಸಿದ್ದರು. ಆ ಶಾಖೆಯ ಮ್ಯಾನೇಜರ್ 2017ರ ಡಿಸೆಂಬರ್ 28ರಿಂದ 30ರ ವರೆಗೆ ರಜೆಯಲ್ಲಿದ್ದರು. ಪ್ರಭಾರ ಮ್ಯಾನೇಜರ್ ಅವರ ಟ್ಯಾಲಿ ಸಾಫ್ಟ್ವೇರ್ನಲ್ಲಿ ಅಂತಿಮ ನಗದು ಪರೀಕ್ಷಿಸುವಾಗ ಈ ಮೊತ್ತ ಕಡಿಮೆ ಇದ್ದದ್ದು ಗೊತ್ತಾಗಿತ್ತು.ಆರೋಪಿ ವಿಕಾಸ್ ಶೆಟ್ಟಿಯವರನ್ನು ವಿಚಾರಿಸಿದಾಗ
ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು (81) ಇಂದು ಬೆಳಿಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆಯಾಗಿತ್ತು. ವಜ್ರನೇತ್ರ ಎಂಬ ಕನ್ನಡ ಪತ್ರಿಕೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸಿ ಸರಕಾರದ ಗಮನ ಸೆಳೆಯುತ್ತಿದ್ದ ಅವರು ಸುಧೀರ್ಘ 60 ವರ್ಷಗಳ ಕಾಲ ಸರಸ್ವತಿಯ
ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಮಸೂದ್(19) ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಜು.19 ರಂದು ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ವಾಸಿ ಮಸೂದ್ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಎಂಟು ಮಂದಿಯ ತಂಡ ಹಲ್ಲೆ ನಡೆಸಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಮಸೂದ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ
ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್ ಸಂಪರ್ಕಹೊಂದಿದ್ದು, ಚೆಕ್ ಪೋಸ್ಟ್ ಮೂಲಕವೇ ಗೋವು ಸಾಗಾಟ ಮಾಡಲಾಗುತ್ತಿತ್ತಾ ಎಂಬ ಅನುಮಾನ ಮೂಡುತ್ತಿದೆ.
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ
Mangaluru,20 July 2022; Students of Institute of Aviation Studies celebrated the ‘Traditional Day 2022’ on 19th July in order to promote ‘unity in diversity and also with the motive to keep our traditions alive’. Traditional day 2022 was held on 19th July 2022 at Institute of Aviation studies, Srinivas University, Pandeshwar. It’s a day designated […]
ಪಡುಬಿದ್ರಿಯ ಪಾದೆಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲಾ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಡುಬಿದ್ರಿ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು. ಪುಸ್ತಕ ವಿತರಿಸಿ ಮಾತನಾಡಿದ ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲ ಕೆ. ಸಾಲ್ಯಾನ್, ಕೊರೋನಾ ರೋಗದ ಬಳಿಕ ಜೀವನ ಬಹಳಷ್ಟು ಕಷ್ಟಕರವಾಗಿದ್ದು, ಮಕ್ಕಳ ಹೆತ್ತವರಿಗೆ ಮಕ್ಕಳ ಶಿಕ್ಷಣದ ಬಗೆಗಿನ ಹಾಗು ಹೋಗುಗಳ ಸಣ್ಣ ಅಗತ್ಯತೆಗಳನ್ನು ನೀಗಿಸಲು ಸಮಸ್ಯೆಯಾಗುತ್ತಿದ್ದು, ಈ


















