Home Posts tagged #v4newskarnataka (Page 176)

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ : ಉಪ್ಪುಕಳ ಗ್ರಾಮಕ್ಕೆ ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ

ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ.

ಮಳೆಗೆ ಸಂಪೂರ್ಣವಾಗಿ ಹದಗೆಟ್ಟ ಮುಖ್ಯರಸ್ತೆ : ಚರಂಡಿ ಮೋರಿಗಳಿಗೆ ಕೋಟ್ಯಾಂತರ ರೂಪಾಯಿ ಖರ್ಚು

ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ ರಸ್ತೆಯ ಡಾಮರು ಎದ್ದು ಹೊಂಡಗಳು ಬಿದ್ದು ಪಾದಾಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ಹೋಗುವುದೇ ಒಂದು

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ : ಪುತ್ತೂರಿನ ಉರ್ಲಾಂಡಿಯಲ್ಲಿ ನಡೆದ ಘಟನೆ

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು

ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ: ಅಪಾಯ ಸ್ಥಿತಿಯಲ್ಲಿದೆ ಹತ್ತಕ್ಕೂ ಅಧಿಕ ಮನೆಗಳು

• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು • ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ

ನಳಿನ್ ಕುಮಾರ್ ಮಹಾ ಜಾತಿವಾದಿ : ಸತ್ಯಜಿತ್ ಸುರತ್ಕಲ್ ಆರೋಪ

ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ

ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆ

ಮಂಗಳೂರು ವಕೀಲರ ಸಂಘದ ವತಿಯಿಂದ ಮುಂಬರುವ ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆಯನ್ನು ದ. ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಶ್ರೀ. ರವೀಂದ್ರ ಎo. ಜೋಶಿ ಯವರು ದಿನಾಂಕ 8.7.2022ರಂದು ಉದ್ಘಾಟಿಸಿದರು. ಯುವ ನ್ಯಾಯವಾದಿಗಳು ಇಂತಹ ಕಾರ್ಯಕ್ರಮಗಳ ಉಪಯೋಗವನ್ನು ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. : ನೂತನ ಕೊಡಾಜೆ ಶಾಖೆ ಉದ್ಘಾಟನೆ

ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 10 ನೇ ಕೊಡಾಜೆ ಶಾಖೆಯು ನೇರಳಕಟ್ಟೆ ಬಳಿಯ ಕೊಡಾಜೆಯ ನಿಧಾ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿ ದೀಪ ಪ್ರಜ್ವಲಿಸಿದರು.ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂದರ್ ಜೈನ್ ಭದ್ರತಾ ಕೊಠಡಿ ಉದ್ಘಾಟಿಸಿದರು. ನೆಟ್ಲಮುಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುಷ್ಪರಾಜ ಚೌಟ ಕಂಪ್ಯೂಟರ್ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ

ಮಂಜೇಶ್ವರದಲ್ಲಿ ಭಾರೀ ಮಳೆಯ ಅವಾಂತರ : ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜಲಾವೃತ

ಮಂಜೇಶ್ವರದದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮಂಜೇಶ್ವರ ಗ್ರಾ.ಪಂ.ನ 13ನೇ ವಾರ್ಡ್ ವಾಮಂಜೂರು ಕಜೆಯ ಕೊಪ್ಪಳ ಪ್ರದೇಶದಲ್ಲಿ ಕಳೆ ಎರಡು-ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಪರಿಸರದ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಈ ಪರಿಸರದಲ್ಲಿ ಉಪ್ಪಳ ಹೊಳೆ ತುಂಬಿ ಹರಿಯುತ್ತಿದ್ದು, ಹೊಳೆ ಸಂಗಮಿಸುವ ಪರಿಸರದ ಅನೇಕ ಹಳ್ಳ, ತೊರೆಗಳು ನೀರು ತುಂಬಿ ಮನೆಗಳನ್ನು ಆಕ್ರಮಿಸಿ, ಮನೆಗಳಿಗೆ ನೀರು ನುಗ್ಗಿದೆ. ಪರಿಸರದಲ್ಲಿ 20ರಷ್ಟು

ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಕಾನೂನು ಜಾರಿ , ಪುತ್ತೂರಿನ ನಗರಸಭೆಯ ವಾರ್ಡ್ ಸದಸ್ಯರು ಸಹಕಾರ ನೀಡಬೇಕು : ಅಧ್ಯಕ್ಷ ಕೆ. ಜೀವಂಧರ್ ಜೈನ್ ಮನವಿ

ಪುತ್ತೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಾನೂನನ್ನು ಕಟ್ಟುನಿಟ್ಟಿನ ಜಾರಿಗೆ ಮುಂದಾಗಿದ್ದಾರೆ. ಜು.1 ರಿಂದಲೇ ಇದರ ಅನುಷ್ಠಾನಕ್ಕೆ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಾಗೃತಿ ಹಾಗೂ ಪಾಲನೆಯಲ್ಲಿ ನಗರಸಭೆಯ ಎಲ್ಲಾ ವಾರ್ಡಗಳ ಸದಸ್ಯರು ಸಹಕಾರ ನೀಡಬೇಕು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮನವಿ ಮಾಡಿದ್ದಾರೆ. ನಗರಸಭಾ ಸಾಮಾನ್ಯ ಸಭೆಯು ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. 2016ರಲ್ಲಿ ಏಕ ಬಳಕೆ

ಬಂಟ್ವಾಳದ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ಅವಲೋಕನ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದ ಶಾಸಕರು

ಬಂಟ್ವಾಳ : ಕ್ಷೇತ್ರದ 39 ಗ್ರಾ.ಪಂ.ನ ಪಿಡಿಒ, ಗ್ರಾಮಕರಣಿಕರು, ಅಧ್ಯಕ್ಷ, ಉಪಾಧ್ಯಕ್ಷರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ತಮ್ಮ ಬಿ.ಸಿ.ರೋಡಿನ ಕಚೇರಿಯಿಂದ ತಹಶೀಲ್ದಾರ್, ತಾ.ಪಂ.ಇಒ ಹಾಗು ಇತರೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೂಗೂಲ್ ಮೀಟ್ ಮೂಲಕ ಸಂವಾದ ನಡೆಸಿದರು. ಗ್ರಾ.ಪಂ.ವ್ಯಾಪ್ತಿಯಲ್ಲಿರುವ ವಿವಿಧ ಸಮಸ್ಯೆಯನ್ನು ಆಲಿಸಿದ ಶಾಸಕರು, ತಹಶೀಲ್ದಾರ್ ಡಾ.ಸ್ಮಿತಾ ರಾಮು, ಇಒ ರಾಜಣ್ಣ ಅವರು ಪರಿಹಾರದ ನಿಟ್ಟಿನಲ್ಲಿ ಸೂಕ್ತ ಸಲಹೆ,