Home Posts tagged #v4newskarnataka (Page 179)

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ.

ಗೊನ್ಝಾಗ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ

ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆಯು ಅಂತರ್ಜಾಲ ಮುಖಾಂತರ ನಡೆಯಿತು. ಉದ್ಘಾಟಿಸಿ ಮಾತನಾಡಿದ ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ವಂ. ಫಾ. ಮೆಲ್ವಿನ್ ಪಿಂಟೊ ಎಸ್.ಜೆ.ಅವರು ‘ಆದ್ಯತೆಯ ಮೇರೆಗೆ ಇಡೀ ದಿನದ ವೇಳಾಪಟ್ಟಿ ತಯಾರಿಸುವುದು ಹಾಗೂ ಸೃಜನಶೀಲತೆಯನ್ನು ಬೆಳೆಸುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪ್ರಚಲಿತ ಸನ್ನಿವೇಶವನ್ನು ಸಮರ್ಥವಾಗಿ ಹೇಗೆ ಎದುರಿಸಬಹುದು’ ಎಂಬ ಬಗ್ಗೆ ಕಿವಿಮಾತು

ಮಂಗಳೂರು: ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ: ಕಾಸರಗೋಡಿನ ವ್ಯಕ್ತಿ ವಶಕ್ಕೆ

ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ

ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್‌ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.

ಜನದಟ್ಟಣೆ ನಿಯಂತ್ರಿಸಲು ಗಿಲ್ಬರ್ಟ್ ಡಿಸೋಜಾರವರ ಸರಳ ಸೂತ್ರ….!

ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ ನೇತೃತ್ವದ ತಂಡ ಪ್ರಸ್ತಾಪಿಸಿದೆ. ಕಳೆದ ವರ್ಷ ಹಂಪನಕಟ್ಟೆ, ಕಂಕನಾಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದ

ಉಡುಪಿಯಲ್ಲಿ ನಾಗರಿಕ ಸಮಿತಿಯಿಂದ ಅನಾಥ ಶವಗಳ ಅಂತ್ಯಸಂಸ್ಕಾರ

ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ, ಸಮಕ್ಷಮದಲ್ಲಿ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ, ಅಪರಿಚಿತ ಮಹಿಳೆಯ ಶವ, ಮತ್ತು ನಗರದ ಸಾರ್ವಜನಿಕ ಸ್ಥಳದಲ್ಲಿ ಮೃತಪಟ್ಟಿರುವ ಅಪರಿಚಿತ

ಪತ್ರಿಕಾ ದಿನಾಚರಣೆ : ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭ

ಕೊರೊನಾ ಹಿನ್ನಲೆ ಲಾಕ್‌ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು ಬದ್ಧವಾಗಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿತ್ತು. ಆದರೆ ತಾಂತ್ರಿಕ ಕಾರಣ ಹಾಗೂ ತೆರಿಗೆ ವಿನಾಯಿತಿ, ಬಸ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ ಖಾಸಗಿ ಬಸ್ ಮಾಲಕರು ಸರ್ಕಾರದ ಜೊತೆ ಮಾತುಕತೆ ನಂತರ ಇಂದಿನಿಂದ ತಮ್ಮ ಸಂಚಾರ ಆರಂಭಿಸಿಲು