Home Posts tagged #v4newskarnataka (Page 18)

ಬಾವಿಗೆ ಬಿದ್ದ ಶ್ವಾನದ ರಕ್ಷಣೆ : ವಿಡಿಯೋ ವೈರಲ್

ಮುದರಂಗಡಿಯಲ್ಲಿ ತೆರೆದ ಬಾವಿಯಲ್ಲಿ ಸ್ಥಳೀಯ ಸಾಕು ನಾಯಿ ಬಿದ್ದ ಮಾಹಿತಿ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ಸಿಬ್ಬಂದಿಗಳು ಬಾವಿಯಲ್ಲಿ ಬಿದ್ದ ನಾಯಿಯನ್ನು ರಕ್ಷಿಸಿದ ಘಟನೆ ಮುದರಂಗಡಿಯಲ್ಲಿ ನಡೆದಿದೆ.ಇವರ ಈ ಕಾರ್ಯಕ್ಕೆ ಸ್ಥಳೀಯರ ಮೆಚ್ಚುಗೆ ವ್ಯಕ್ತವಾಗಿದೆ

Bantwala : ಲೋಕಾಯುಕ್ತ ಎಸ್ಪಿಯಿಂದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ

ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು. ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ

ರಾಸಾಯನಿಕ ಲೋಡ್‍ನ ಟ್ಯಾಂಕರ್ ಪಲ್ಟಿ : ಗ್ಯಾಸ್ ಲೀಕೇಜ್ ನಡುವೆ ತಡರಾತ್ರಿ ವರೆಗೆ ತೆರವು ಕಾರ್ಯಾಚರಣೆ

ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ. ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !ಲಾರಿ ಹಾಗೂ

ಕಾಪು-ಪಡುಬಿದ್ರಿ ಜಾತ್ರೆಗಳಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಿರಲು ಮನವಿ

ಕಾಪುವಿನಲ್ಲಿ ನಡೆಯುವ ಮಾರಿಪೂಜೆ ಹಾಗೂ ಪಡುಬಿದ್ರಿ ದೇವಳದಲ್ಲಿ ನಡೆಯುವ ರಥೋತ್ಸವ ಸಂದರ್ಭ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಳಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿಯವರಿಗೆ ಬಜರಂಗದಳ ಕಾಪು ಪ್ರಖಂಡ ಸದಸ್ಯರು ಮನವಿ ಸಲ್ಲಿಸಿದ್ದಾರೆ. ದೇಶದ ಕಾನೂನನ್ನು ಹಾಗೂ ಹಿಂದೂ ಸನಾತನ ಧರ್ಮದ ಆಚಾರ-ವಿಚಾರಗಳನ್ನು ಗೌರವಿಸದ ಅನ್ಯಧರ್ಮಿಯರಿಗೆ ಜಾತ್ರಾ ಸಂಧರ್ಭದಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ ಮನವಿಯನ್ನು

ಮೂಡುಬಿದರೆ : ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಸಮಾವೇಶ

ಮೂಡುಬಿದಿರೆ: ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್‍ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ ಇಂದು ವಿಶ್ವದಲ್ಲೇ ನಂ.1 ಪಕ್ಷಗಾಗಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ

ಚೇಳ್ಯಾರು ಮತ್ತು ಮುಂಚೂರಿನಲ್ಲಿ ಅಕ್ರಮ ಮರಳು ದಾಸ್ತಾನು ವಶಕ್ಕೆ ಪಡೆದ ಸುರತ್ಕಲ್ ಪೊಲೀಸರು

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳಾಯರು ಮತ್ತು ಮುಂಚೂರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 250-300 ಲೋಡ್ ಮರಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಬಳಿ ರಸ್ತೆ ಬದಿಯ ಕಾಂಪೌಂಡ್ ಒಳಭಾಗದಲ್ಲಿ ಸಿಸಿ ಕ್ಯಾಮಾರ ಕಣ್ಗಾವಲಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 150-200 ಲೋಡ್ ಮರಳು ಹಾಗೂ ಮುಂಚೂರು ರಸ್ತೆಯ ಬದಿಯ ಕಾಂಪೌಂಡ್‍ನ ಒಳಭಾಗದಲ್ಲಿ ರಸ್ತೆಯಲ್ಲಿ ಸಂಚರಿಸುವವರಿಗೆ ಕಾಣದಿರಲು ಮರ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ ಬೈಂದೂರು ಮಂಡಲದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ sc ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಲ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್,ರಾಜ್ಯ sc ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಪ್ರಧಾನ

ಬೆಳ್ತಂಗಡಿಯಲ್ಲಿ ಲೋಕ ಸಂಪರ್ಕ-2023 ಸದ್ಭಾವ ಸಂಕಲ್ಪ ಸಮಾವೇಶ

ಬೆಳ್ತಂಗಡಿ: ಲೋಕ ಸಂಪರ್ಕ-2023 ಧ್ಯೇಯವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸದ್ಭಾವ ಸಂಕಲ್ಪ ಸಮಾವೇಶ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್. ಅವರು ಮುಂಬರುವ ವಿಧಾನ ಸಭಾ ಚುನಾವಣೆ ಹಾಗೂ ಲೋಕ‌ ಸಂಪರ್ಕದ ಕುರಿತು ಮಾರ್ಗದರ್ಶನ ಮಾಡಿದರು.ಸಂತ ಶಕ್ತಿ, ಸುಪ್ತ ಶಕ್ತಿ, ಮಾತೃ ಶಕ್ತಿ, ಸದ್ಬಾವ ಶಕ್ತಿ, ಯುವ ಶಕ್ತಿ

ರೋಹನ್ ಕಾರ್ಪೋರೇಷನ್‍ಗೆ ಟೈಮ್ಸ್ ಆಫ್ ಇಂಡಿಯಾ : 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ

ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಮತ್ತು ಎಸ್‍ಪಿಎದಲ್ಲಿ ನಡೆದ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಸಮಾರಂಭದಲ್ಲಿ ಅವರ ಪರವಾಗಿ ಜನರಲ್ ಮ್ಯಾನೇಜರ್ ದೀಮಂತ್ ಸುವರ್ಣ ಮತ್ತು ಸೇಲ್ಸ್ ಅಸೋಸಿಯೇಟ್ ಅಲ್ಫೋನ್ಸ್ ಫೆರ್ನಾಂಡಿಸ್ ಅವರು

ಜೈ ಭೀಮ್ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಉದ್ಘಾಟಿಸಿ ಮಾತನಾಡಿದ ಅವರು, ಅದೇಷ್ಟೋ ಪ್ರತಿಭೆಗಳಿದ್ದರೂ ಅವಕಾಶ ವಂಚಿತವಾಗಿ ಕಮರಿ ಹೋಗುತ್ತಿದೆ. ಆ ನಿಟ್ಟಿನಲ್ಲಿ ಇಂಥಹ ಕ್ರೀಡೆಗಳನ್ನು