Home Posts tagged #v4newskarnataka (Page 183)

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣ ಹಿನ್ನೆಲೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ – ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಲೋಕಾರ್ಪಣೆಗೊಳಿಸುವ ಮುನ್ನ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ಪರಿಶೀಲನೆ ನಡೆಸಲು ಪಚ್ಚನಾಡಿ ರೈಲ್ವೇ ಬ್ರಿಡ್ಜ್ ಕಾಮಗಾರಿ

ಕೃಷಿ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ : ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ

ಮೂರು ಕೃಷಿ ಮಸೂದೆ ರೈತರ ಹೋರಾಟಕ್ಕೆ ಸಂದ ಜಯ : ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ

ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಡೀ ಭಾರತದ ದೇಶದಲ್ಲಿ ಎಲ್ಲಾ ಜನರು ಒಗ್ಗಟ್ಟಾಗಿ ಹೋರಾಟಕ್ಕೆ

ಸೋಲಿನಿಂದ ಮೋದಿ ಸರ್ಕಾರ ಎಚ್ಚೆತ್ತುಕೊಂಡಿದೆ : ಮಾಜಿ ಸಚಿವ ರಮಾನಾಥ ರೈ

ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ

ಕ.ಸಾ.ಪಗೆ ಒಂದು ಸಾವಿರ ಕೋಟಿ ರೂ ಶಾಶ್ವತ ನಿಧಿ ಸ್ಥಾಪನೆ ತಮ್ಮ ಗುರಿ ; ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ

ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ ಕ.ಸಾ.ಪ ಚುನಾವಣೆಗೆ ಬೆಂಗಳೂರು ನಗರದ ಜಿಲ್ಲೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲೇಖಕ ಎಂ. ತಿಮ್ಮಯ್ಯ

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರಧಾನಿ  ಅವರಿಗೆ ರಕ್ಷಾ ರಾಮಯ್ಯ ಒತ್ತಾಯ ; ರಾಜ್ಯಪಾಲರಿಗೆ ನಿಯೋಗದ ಮೂಲಕ ಮನವಿ ಸಲ್ಲಿಕೆ

ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ

ಹದಗೆಟ್ಟ ಕಾನ-ಕುಳಾಯಿ ರೈಲ್ವೆ ಸೇತುವೆ ದುರಸ್ತಿಗೆ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್‌ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ

ಉಳ್ಳಾಲ: ಪೊಲೀಸರಿಗೆ ತಲವಾರು ತೋರಿಸಿದ ರೌಡಿಶೀಟರ್

ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು

ಪಿಎಂ ಕೇರ್ಸ್ ಯೋಜನೆ ಪಾರದರ್ಶಕತೆ ಹೊಂದಿರಲಿಲ್ಲ: ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ

ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು   ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಡಳಿತದಲ್ಲಿರುವ ಸರಕಾರಗಳಿಗೆ

ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್: ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ

ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ ಬಂದಿದ್ದು, ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ರಕ್ತದಾನ ಶಿಬಿರ ಆಯೋಜಿಸಿದೆ. ಮುಂದಿನ ದಿನಗಳಲ್ಲಿ