Home Posts tagged #v4newskarnataka (Page 189)

ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಮಾರಾಟ ಆರೋಪ: ಬೈಂದೂರು ತಹಶೀಲ್ದಾರ್ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕುಂದಾಪುರ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಅಂಗಡಿಯೊಂದರಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶಾಲಾ ಮಕ್ಕಳಿಗೆ ವಿತರಿಸುವ ಅಡುಗೆ ಎಣ್ಣೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ

ಚೀನಾದಲ್ಲಿ ಧಾರಕಾರ ಮಳೆ: 12 ಮಂದಿ ಸಾವು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯ ಸ್ಥಳಾಂತರ

ಚೀನಾದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಇದುವರೆಗೂ 12 ಮಂದಿ ಸಾವನ್ನಪ್ಪಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಹೆನ್ನಾನ್ ಪ್ರಾಂತ್ಯದ ಝೆಂಗ್ಜು ಪ್ರದೇಶದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 201.9 ಮಿ,ಮೀ ಮಳೆಯಾಗಿದೆ. ಝೆಂಗ್ಜು ಪ್ರದೇಶದ ತಗ್ಗುಪ್ರದೇಶಗಳಿಗೆ ನೀರು ಹರಿಯುತ್ತಿದ್ದು, ನೂರಾರು ಮನೆ ಮಠಗಳು ನಾಶವಾಗಿವೆ. ಇದುವರೆಗೂ 12 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಮುಂಜಾಗೃತಾ

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗಿದ್ದ ವಿಶಾಲ ಗಾಣಿಗ ಕೊಲೆಯನ್ನು ಪತಿಯೇ

ಉದ್ಘಾಟನೆಗೆ ಮುನ್ನವೇ ಕುಸಿಯುವ ಭೀತಿಯಲ್ಲಿ ಅವರಾಲು-ಮುಲ್ಕಿ ಸೇತುವೆ

ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಅಂತರಾಷ್ಟ್ರೀಯ ಮಾನ್ಯತೆಗೆ ದಿಟ್ಟ ಹೆಜ್ಜೆ: ದಯಾನಂದ ಕತ್ತಲ್‌ ಸಾರ್‌

ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ

ಕೊಂಚಾಡಿ ರಸ್ತೆಯಲ್ಲಿ ಗಲೀಜು ನೀರು: ಪಾಲಿಕೆಯ ಶವ ನೇತು ಹಾಕಿ ಚಳುವಳಿ

ಕೊಂಚಾಡಿಯ ಕೆನರಾ ಅಪಾರ್ಟ್ಮೆಂಟ್ ನವರು ಸಾರ್ವಜನಿಕ ರಸ್ತೆಗೆ ಮಲ ಮಿಶ್ರಿತ ಗಲೀಜು ನೀರನ್ನು ಬಿಡುತ್ತಿರುವ ಬಗ್ಗೆ ಹಲವಾರು ಬಾರಿ ದೂರು, ಮನವಿಗಳನ್ನು ನೀಡಿದರು, ಕ್ರಮ ಕೈಗೊಳ್ಳದ ನಗರ ಪಾಲಿಕೆಯ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ನಡೆಸಿದ ನಂತರವೂ ಮತ್ತದೇ ರೀತಿಯಲ್ಲಿ ಗಲೀಜು ನೀರು ಸಾರ್ವಜನಿಕ ರಸ್ತೆಗೆ ಬಿಡುತ್ತಿರುವ ವಿರುದ್ಧ ಇಲ್ಲಿನ ಜನಪರ ಸಂಘಟನೆಗಳು ನಗರ ಪಾಲಿಕೆಯವರೇ ಗಲೀಜು ನೀರನ್ನು ಸಾರ್ವಜನಿಕ ರಸ್ತೆಗೆ ಬಿಡಲು ಸಹಕರಿಸುತ್ತಿದ್ದಾರೆಂದು ಆರೋಪಿಸಿ

ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಡಿ.ವಿ.ಸದಾನಂದಗೌಡ

ಬೆಂಗಳೂರು: ರಾಜ್ಯದ ಜನರ ಬೆಂಬಲ ಹಾಗೂ ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗಿನ ಸಾಮರಸ್ಯ ನೋಡಿದರೆ ಸದ್ಯಕ್ಕೆ ಬದಲಾವಣೆ ಇಲ್ಲ ಎಂದೆನಿಸುತ್ತದೆ. ಆದರೆ, ಮುಂದಿನದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎಂದರೆ ಹೀಗೆ ದಿನಕ್ಕೊಂದು ತಿರುವುಗಳು ಸಣ್ಣಪುಟ್ಟ ವ್ಯತ್ಯಾಸಗಳು ಆಗುತ್ತಿರುತ್ತವೆ. ನನಗೆ ತಿಳಿದ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿ ಪೂಜಾರಿ ಕಣ್ಣೀರು

ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು ಹಾಕಿದ್ದಾರೆ. ಅಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕಾಂಗ್ರೆಸ್‌ನ ಹಲವು ಮುಖಂಡರು ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಜನಾರ್ದನ ಪೂಜಾರಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಎಂ.ಬಿ ಪಾಟೀಲ್

ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಬುಧವಾರದಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು. ತದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡ್ತಾ ಇದ್ದಾರೆ.ಮಣಿಪಾಲ್ ವೈದ್ಯರು