ಮಳೆಗಾಲ ಬಂತೆಂದರೆ ಸಾಕು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಿರಿಬಾಗಿಲು ಎನ್ನುವ ಗ್ರಾಮ ಇತರ ಪ್ರದೇಶಗಳ ಸಂಪರ್ಕವನ್ನೇ ಕಳೆದುಕೊಂಡು ದ್ವೀಪವಾಗಿ ಬಿಡುತ್ತದೆ. ಶಿರಾಢಿಘಾಟ್ ನ ಮಧ್ಯಭಾಗದಲ್ಲಿರುವ ಈ ಗ್ರಾಮದ ಸುತ್ತ ಮೂರು ಹೊಳೆಗಳು ಹರಿಯುತ್ತಿದೆ, ಸೇತುವೆಯಿಲ್ಲದ ಕಾರಣ ಮಳೆಗಾಲದಲ್ಲಿ ಈ ಹೊಳೆಗಳು ತುಂಬಿ ಹರಿಯುವ ಕಾರಣ ಇಲ್ಲಿನ ಜನರಿಗೆ ಅಗತ್ಯ
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಕೋವಿಡ್ನ 2 ನೆ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ದೇಶ ಅಂದರೆ ಅದು ನರೇಂದ್ರ ಮೋದಿ ಸರಕಾರದ ಭಾರತ ದೇಶ, ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಲ್ಲದೆ ಬರೀ ಮೂರು ವರ್ಷದಲ್ಲಿ ಬೆಳ್ತಂಗಡಿ
ಕಾರ್ಕಳ: ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಸೆ ಬಗೆಹರಿಯಲಿದೆ. ರಾಜ್ಯದಲ್ಲಿ ಒಟ್ಟು 15 ಲಕ್ಷ ಹೆಕ್ಟೇರ್ ಪ್ರದೇಶವು ಡೀಮ್ಡ್ ಫಾರೆಸ್ಟ್ ಒಳಗೊಂಡಿದ್ದು, ಜಿಲ್ಲೆಯಲ್ಲಿ 34ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ನಲ್ಲಿದೆ. ಅದನ್ನು ಮುಕ್ತ ಮಾಡುವುದು ಸರಕಾರದ ಬದ್ಧತೆಯಾಗಿದೆ. ಕುಮ್ಕಿ ಸಮಸ್ಸೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಮುಂದಿಡಲಾಗಿದೆ. ಹಿಂದಿನ ಕಾಂಗ್ರೆಸ್ ಸರಕಾರದ ಇದರ ಬಗ್ಗೆ ನಿರ್ಲಕ್ಷ್ಯ ತೋರಿತ್ತೆಂದು ಧಾರ್ಮಿಕ ದತ್ತಿ ಸಚಿವ ಕೋಟಾ
ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ
ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸೂಚನೆ
ಮಂಗಳೂರಿನ ಫಳ್ನೀರ್ನ ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು ರಾತ್ರಿ 8ಗಂಟೆಗೆ ನಗರದ ಹೋಟೆಲೊಂದರಲ್ಲಿ ರ್ಯಾಗಿಂಗ್ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು
ಕಡಬ ತಾಲೂಕಿನ ಪೆರಾಬೆ ಗ್ರಾಮದ ಮಾರ್ ಇವಾನಿಯೋಸ್ ಮಹಿಳಾ ಬಿಎಡ್ ಕಾಲೇಜಿನ ಕಟ್ಟಡದ ಹಿಂಬದಿಯಲಲ್ಲಿ ಮುಖಕ್ಕೆ ಬಟ್ಟೆಯನ್ನು ಕಟ್ಟಿ ವ್ಯಕ್ತಿಯ ಗುರುತು ಸಿಗದಂತೆ ಅಡಗಿ ಕುಳಿತುಕೊಂಡೊಬ್ಬನನ್ನು, ರಾತ್ರಿ ಗಸ್ತು ತಿರುಗುತ್ತಿದ್ದ ಕಡಬ ಠಾಣೆಯ ಸಹಾಯಕ ಉಪನರೀಕ್ಷಕರಾದ ಸುರೇಶ್ ಸಿಟಿಯವರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶರತ್ (34) ಮರವೂರು, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯ ಸಿಬ್ಬಂದಿಗಳು ಈ ಮಾರ್ಗವಾಗಿ ಗಸ್ತು ತಿರುಗುತ್ತಿದ್ದ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೋಟ್ ಬುಕ್ ವಿತರಿಸಿ ಮಾತನಾಡಿದ ಭಾರತೀಯ ರೆಡ್
ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯ ಪ್ರತಿಯೊಂದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲದೆ ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಗಡಿ ಭಾಗಗಳಲ್ಲಿ ಕೂಡಾ ಚೆಕ್ ಪೋಸ್ಟ್ ತೆರೆದು ಶಾಂತಿಯುತವಾಗಿ
ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು, ಹಿರಿಯರು, ಅನಾರೋಗ್ಯ ಪೀಡಿತರು ವಾಸ ಮಾಡುವ ಬಡ ಎರ್ಮಾಳು ಭರತ್ ನಗರ ನಿವಾಸಿಗಳಾದ ನಾವು ಮಳೆ ಬಂದರೆ


















