Home Posts tagged #v4newskarnataka (Page 23)

ಸಾಹಿತ್ಯ ಅಕಾಡೆಮಿ ದೆಹಲಿ ಕೊಂಕಣಿ ಭಾಷಾ ಮುಖ್ಯಸ್ಥರಾಗಿ ಮಂಗಳೂರು ಮೂಲದ ಕವಿ ಮೆಲ್ವಿನ್ ರೊಡ್ರಿಗಸ್ ಆಯ್ಕೆ

ಕೊಂಕಣಿ ಕವಿ, ಕಾರ್ಯಕರ್ತ ಹಾಗು ಕೊಂಕಣಿ ಕಾವ್ಯದ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಕವಿತಾ ಟ್ರಸ್ಟ್ ಇದರ ಸ್ಥಾಪಕ ಕರಾವಳಿ ಮೂಲದ ಕವಿ ಮೆಲ್ವಿನ್ ರೊಡ್ರಿಗಸ್ ಸಾಹಿತ್ಯ ಅಕಾಡೆಮಿ, ದೆಹಲಿಯಲ್ಲಿ ಕೊಂಕಣಿ ಭಾಷೆಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಇಂದು ದಿನಾಂಕ 11 ಮಾರ್ಚ್ 2023 ರಂದು, ಸಂವಿಧಾನದ ಎಂಟನೆ ಪರಿಚ್ಚೇದದಲ್ಲಿ ಮಾನ್ಯತೆ ಪಡೆದಿರುವ ಭಾರತದ ಎಲ್ಲಾ

ಮೀನುಗಾರಿಕಾ ಇಲಾಖೆಯಿಂದ 5 ಸಾವಿರ ಮೀನು ಮರಿಗಳ ವಿತರಣೆ

ಸುಳ್ಯ. ಮೀನುಗಾರಿಕೆ ಇಲಾಖೆಯ ವತಿಯಿಂದ 5 ಸಾವಿರ ಮೀನು ಮರಿಗಳ ವಿತರಣೆ ಕಾರ್ಯಕ್ರಮ ನಡೆಯಿತು. ಸಚಿವ ಎಸ್. ಅಂಗಾರ ಅವರು ಸುಮಾರು 80 ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಇಲಾಖೆಯಿಂದ ಮೀನು ಮರಿಗಳನ್ನು ವಿತರಿಸಿ ಮತನಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಎ ವಿ ತೀರ್ಥರಾಮ , ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ರಾಧಾಕೃಷ್ಣ ಬೋಳ್ಳೂರ್, ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುಳಾ ಶ್ರೀ ಶೆಣೈ, ಮೀನುಗಾರಿಕಾ

ನೀರ್ಕೆರೆಯಲ್ಲಿ ಕುಡುಬಿ ಜನಾಂಗದಿಂದ ಹೋಳಿ ಉತ್ಸವ

ಮೂಡುಬಿದಿರೆ ತಾಲೂಕಿನ ರಾಧಾಕೃಷ್ಣ ಭಜನಾ ಮಂದಿರ ನೀರ್ಕೆರೆ ಪೂಮಾವಾರದಲ್ಲಿ ರಾತ್ರಿ ಹೋಳಿ ಉತ್ಸವ ನಡೆಯಿತು.ಹೋಳಿ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಕರಾವಳಿಯಲ್ಲಿ ಕೃಷಿಯನ್ನೇ ತಮ್ಮ ಬದುಕನ್ನಾಗಿಸಿ, ಮೂಲತಃ ಗೋವಾ ವಲಸಿಗರಾಗಿರುವ ಕೊಂಕಣಿ ಭಾಷೆಕ ಕುಡುಬಿ ಸಮುದಾಯಕ್ಕೆ ಹೋಳಿ ಹಬ್ಬವು ಶಿವರಾತ್ರಿಯಿಂದ ಯುಗಾದಿಯವರೆಗೆ ತಮ್ಮ ತಮ್ಮ ಕೂಡುಕಟ್ಟುಗಳಲ್ಲಿ ಆಚರಿಸುವ ಒಂದು ವಿಶಿಷ್ಟ ಸಂಪ್ರದಾಯ ಸಂಸ್ಕೃತಿಯ

ರಸ್ತೆ ದಾಟಲು ನಿಂತಿದ್ದ ಬಾಲಕಿ ಮೇಲೆ ಹರಿದ ಖಾಸಗಿ ಬಸ್ – ಬಾಲಕಿ ಮೃತ್ಯು

ಬಹಳಷ್ಟು ಅಮಾಯಕರ ಬಲಿ ಪಡೆದ ರಾಷ್ಟ್ರೀಯ ಹೆದ್ದಾರಿ ಇದೀಗ ರಸ್ತೆ ದಾಟಲು ನಿಂತಿದ್ದ, ಬಾಲಕಿ ಮೇಲೆ ತಡೆರಹಿತ ಖಾಸಗಿ ಬಸ್ ಹರಿದು ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ದಂಢತೀರ್ಥ ಶಾಲಾ ಎಂಟನೇ ತರಗತಿ ಬಾಲಕಿ ವರ್ಷೀತಾ ಶೇರ್ವೇಗಾರ್(13) ಎಂಬಾಕೆ ಮೃತಪಟ್ಟ ಬಾಲಕಿ. ಗಂಭೀರ ಗಾಯಗೊಂಡ ಬಾಲಕಿಯನ್ನು ಉಡುಪಿ ಆಸ್ಪತ್ರೆಗೆ ಸಾಗಿಸಿದರೂ ಫಲಕಾರಿಯಾಗದೆ ಬಾಲಕಿ ಮೃತ ಪಟ್ಟಿದ್ದಾಳೆ. ರಾಷ್ಟ್ರೀಯ ಹೆದ್ದಾರಿ ಅಗೆದು ಹಾಕಿ ನಿರ್ಲಕ್ಷ್ಯದಿಂದ ಆಮೆಗತಿಯ ಕಾಮಗಾರಿ ನಡೆಸುತ್ತಿದ್ದರಿಂದ

ಸ್ಕೇಟಿಂಗ್ ಚಾಂಪಿಯನ್ ಆರ್ನಾ ರಾಜೇಶ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ

ಮಂಗಳೂರು:ಕಿರಿಯ ವಯಸ್ಸಿನಲ್ಲೇ ಸ್ಕೇಟಿಂಗ್ ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಕುಮಾರಿ‌ ಆರ್ನಾ ರಾಜೇಶ್ ಗೆ ಈ ವರ್ಷದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಇದರ ವತಿಯಿಂದ 2023 ರ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭೆ ಪ್ರಶಸ್ತಿಯನ್ನು

ಗುಂಡಿಬೈಲು ಶ್ರೀ ಶನೈಶ್ವರ ಕ್ಷೇತ್ರ : ಮಾರ್ಚ್ 12 ಮತ್ತು 13 ರಂದು ನಡೆಯಲಿದೆ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ನಡೆಯಲಿದೆ. ಈ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಲಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಗುವುದು. ನಂತರ ಮಾರ್ಚ್ 13, 2023 ರ

ಉಡುಪಿ ಜಿಲ್ಲಾ ಫಲಾನುಭವಿಗಳ ಬೃಹತ್ ಸಮಾವೇಶ

ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಕಟಪಾಡಿ ಗ್ರೀನ್ ವ್ಯಾಲಿಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶವು ಉದ್ಘಾಟನೆ ಗೊಂಡಿತು. ಸಮಾವೇಷವನ್ನು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಎಸ್ ಅಂಗಾರ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಒಟ್ಟು 155 ಗ್ರಾಪಂನ ವಿವಿಧ ಯೋಜನೆಗಳಡಿ ಸುಮಾರು 15 ಸಾವಿರ ಫಲಾನುಭವಿಗಳು ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಸಂಖ್ಯೆಯ 94ಸಿ/94ಸಿಸಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೈಸೂರಿನ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿ, ಎರಡನೇ ಬಾರಿ ಕೊಳ್ಳೇಗಾಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಚಾಮರಾಜನಗರ ಕ್ಷೇತ್ರದಿಂದ

ಕೊನೆಗೂ ಉದ್ಘಾಟನೆಗೊಂಡ ಗುಣನಾಥ್ ಅವರ ಭಾರ್ಗವಿ ಬಿಲ್ಡರ್ಸ್‍ನ ಕೈಲಾಶ ಅಪಾರ್ಟ್‍ಮೆಂಟ್…!

ಗುಣನಾಥ್ ಪ್ರಮ್ ದುಬೈ ಅವರ ಕನಸು ಕೊನೆಗೂ ನನಸಾಗಿದೆ. ಭಾರ್ಗವಿ ಬಿಲ್ಡರ್ಸ್‍ನವರ ಕೈಲಾಶ್ ಅಪಾರ್ಟ್‍ಮೆಂಟ್‍ನ್ನು ಆಯ್ಕೆ ಮಾಡಿಕೊಂಡ ಗುಣನಾಥ್ ಅವರು, ತಮ್ಮ ಕನಸಿನ ಲಕ್ಷುರಿ ಅಪಾರ್ಟ್‍ಮೆಂಟ್ ಸುಂದರವಾಗಿ ನಿರ್ಮಾಣಗೊಂಡಿದ್ದು, ಇಂದು ಪ್ರತಿಷ್ಠಿತ ಗಣ್ಯರ ಸಮ್ಮುಖದಲ್ಲಿ ಮೊಕ್ ಅಪ್ ಪ್ಲಾಟ್ ಉದ್ಘಾಟನೆಗೊಂಡಿತು. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಗುಣನಾಥ್ ಅವರು ತನ್ನ ಪ್ರೀತಿಯ ಶಿಲ್ಪನಿಗಾಗಿ ಹೈ ಲಿವಿಂಗ್ ಐಷಾರಾಮಿ

ಕೇಂದ್ರದ ಬಿಜೆಪಿ ಆಡಳಿತದ ಜನವಿರೋಧಿ ನೀತಿಗೆ ಖಂಡನೆ : ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಜೇಶ್ವರ: ಭಾರತದ ಆಯಕಟ್ಟಿನ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಭಾರೀ ಬಂಡವಾಳದ ಕುಳಗಳಾದ ಅದಾನಿ ಮತ್ತು ಅಂಬಾನಿ ಎಂಬ ಆಧುನಿಕ ಕುಬೇರರ ಪಾದಗಳಿಗೆ ಸಮರ್ಪಿಸಿ ದೇಶದ ಆರ್ಥಿಕತೆಯನ್ನು ಪಾತಾಳಕ್ಕಿಳಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಹಿತವನ್ನು ಸಂಪೂರ್ಣವಾಗಿ ಮರೆತಿದೆ. ಜನವಿರೋಧಿ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ತನಕ ಹೋರಾಟ ಮುಂದುವರಿಸಲಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ