Home Posts tagged #v4newskarnataka (Page 25)

ಕುಂಜತ್ತೂರಿನಲ್ಲಿ ನಿರ್ಮಾಣಗೊಂಡ ಅಂಡರ್‍ ಪಾಸ್ ನಿಂದ ಸಂಚರಿಸಲು ತೊಂದರೆ

ಮಂಜೇಶ್ವರ: ಕುಂಜತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಡರ್ ಪಾಸ್ ನಿಂದ ಬುಧವಾರ ಬೆಳಗ್ಗಿನಿಂದ ವಾಹನ ಸಂಚಾರ ಆರಂಭಗೊಂಡಿತು.ಅಂಡರ್ ಪಾಸ್ ನೀಡುವುದಾಗಿ ಅಧಿಕಾರಿಗಳ ಭಾಗದಿಂದ ಹಸಿರು ನಿಶಾನೆ ಲಭಿಸಿದಾಗ ಸ್ಥಳೀಯರು ಅತೀವ ಸಂತೋಷಪಟ್ಟಿದ್ದರೂ ಈ ರೀತಿಯ ಅಂಡರ್ ಪಾಸ್ ಸಿಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲವೆಂಬುದಾಗಿ ಜನರು ಆಡಿಕೊಳ್ಳುತಿದ್ದಾರೆ. ಅಂಡರ್ ಪಾಸ್

ಮಾ.10ರಂದು ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಆರಂಭ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ

ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಉಚಿತ ತಪಾಸಣಾ ಶಿಬಿರ

ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಖ್ಯಾತ ನೆಫ್ರೊಲೊಜಿಸ್ಟ್ ಡಾ. ಮೇಘಾ ಪೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ

ಕಾರ್ಕಳದ ಜೋಡು ರಸ್ತೆಯಲ್ಲಿ ಅಲಂಕಾರಿಕ ದೀಪ ಉದ್ಘಾಟನೆ

ಕಾರ್ಕಳದ ಅಭಿವೃದ್ಧಿಯಲ್ಲಿ ಮೂಲಸೌಕರ್ಯ ಜೊತೆಗೆ ಸಾರ್ವಜನಿಕರ ವೇಗಕ್ಕೆ ತಕ್ಕಂತೆ ಮಹತ್ತರವಾದ ದೂರವನ್ನು ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರಮಿಸಿದ್ದೇನೆ. 10 ದಿಕ್ಕಿನಲ್ಲೂ ರಸ್ತೆಗಳು ಹೊಸತನಕ್ಕೆ ಮಗ್ಗು ಬದಲಿಸಿಕೊಂಡಿವೆ. ಇಡೀ ಕಾರ್ಕಳಕ್ಕೆ ಹೊಸ ರೂಪ ನೀಡಲಾಗಿದೆ ಎಂದು ಇಂದಿನ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ನಗರ ಭಾಗಕ್ಕೆ ಹತ್ತಿರದಲ್ಲಿರುವ ಜೋಡು ರಸ್ತೆಯಲ್ಲಿ 6.50 ಕೋಟಿ ವೆಚ್ಚದ ಸಮಗ್ರವಾಗಿ ಅಭಿವೃದ್ಧಿ ಕಾಮಗಾರಿ ಅಲಂಕಾರಿಕ ದೀಪ ಉದ್ಘಾಟಿಸಿ

ಉಳಿಯಾರಗೋಳಿ : ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಸಮುದ್ರ ಪಾಲು

ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರದ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ. ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆ ಯಾಗಿರುವ ವ್ಯಕ್ತಿ. ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ

ನಶಿಸಿ ಹೋಗುತ್ತಿರುವ ಕಂಗೀಲು ಧಾರ್ಮಿಕ ಆಚರಣೆ ಹೆಜಮಾಡಿಯಲ್ಲಿ ಇಂದಿಗೂ ಜೀವಂತ

ತೆರೆಮರೆಯ ಕಡೆ ವಾಲುತ್ತಿರುವ ಧಾರ್ಮಿಕ ಆಚರಣೆಯಲ್ಲಿ ಕಂಗೀಲು ಕೂಡಾ ಒಂದು..ಬಹುತೇಕ ಕಡೆ ಇಲ್ಲವಾಗಿರುವ ಕಂಗೀಲು ಹೆಜಮಾಡಿಯಲ್ಲಿ ಇಂದೂ ಜೀವಂತ ಎಂಬುದು ಸಂತೋಷ.. ಹೆಜಮಾಡಿ ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಮೂಲಕ ಹತ್ತು ಸಮಸ್ತರನ್ನು ಸೇರಿಸಿ ವರ್ಷಂಪ್ರತಿಯಂತೆ ಹೆಜಮಾಡಿ ಆಲಡೆ ಜಾತ್ರೆಯ ಮರುದಿನ ಮಾಯಿ ಹುಣ್ಣುಮೆ ದಿನದಂದ್ದು, ಶ್ರೀದೈವಸ್ಥಾನಕ್ಕೆ ಸಂಬಂಧಿಸಿದ ಮಂದಿ ಸೇರಿ ಹಿರಿಯರು ನಡೆದು ಕೊಂಡು ಬಂದ ಧಾರ್ಮಿಕ ವಿಧಿವಿಧಾನಗಳಂತೆ ಹತ್ತು ಸಮಸ್ತರನ್ನು

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ನಡೆಯಲಿದೆ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ

ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಭಾಗವಹಿಸುವ ರೋಗಿಗಳಿಗೆ ರಕ್ತದ ಸಾಮಾನ್ಯ ಪರೀಕ್ಷೆಗಳು (CBC), ರಕ್ತದ ಸಕ್ಕರೆ ಅಂಶದ

ಪುತ್ತೂರಿನಲ್ಲಿ ಎಸ್‍ಟಿ ಮೋರ್ಚಾದ ಜಿಲ್ಲಾ ಸಮಾವೇಶ

ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ

ಮೂಡುಬಿದರೆಯ ಆದರ್ಶ ಸಂಸ್ಥೆಯಿಂದ ಸ್ವಾವಲಂಬನಾ ದಿನಾಚರಣೆ

ಮೂಡುಬಿದಿರೆ: ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ (ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸಂಸ್ಥೆಯ ಮೂಲಕ ಪ್ರವರ್ತಿಸಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ 23ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆಯು ವಿಜಯನಗರದ ಆದರ್ಶಧಾಮದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇದರ ನಿರ್ದೇಶಕಿ ಭಾರತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಬದುಕಲು ಉತ್ತಮವಾದ ಆರೋಗ್ಯ

ಎನ್‍ಐಎ ತಂಡ ಸಂಚರಿಸುತಿದ್ದ ಪೊಲೀಸ್ ವಾಹನಕ್ಕೆ ಬೈಕ್ ಢಿಕ್ಕಿ…!

ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ