Home Posts tagged #v4newskarnataka (Page 4)

ಕುಸಿದುಬಿದ್ದು ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಉಡುಪಿ : ಕುಸಿದುಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಡಿಸೋಜ ಕಡೇಕಾರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದ ದಾತ್ರಿ ಮೆಡಿಕಲ್ ಸಿಬ್ಬಂದಿಯೋರ್ವರು ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡುದರು.

ಬೀಡಿನಗುಡ್ಡೆಯಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ : ದಾರಿಯಲ್ಲಿ ನಡೆದುಕೊಂಡು‌ ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು‌ ತೋಡಿನಿಂದ ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು

ಸೇನೆ ಸೇರುವ ಕನಸುಗಳಿಗೆ ‘ಕೋಟಿ ಚೆನ್ನಯ’ ತರಬೇತಿ

ಉಡುಪಿ : ಸೇನೆಗೆ ಸೇರಬೇಕು, ದೇಶ ಸೇವೆ ಮಾಡಬೇಕು ಅನ್ನೋದು ಸಾವಿರಾರು ಯುವಕರ ಕನಸು. ಆದರೆ ಸೂಕ್ತ ಮಾಹಿತಿ ಹಾಗೂ ತರಬೇತಿಯ ಕೊರತೆಯಿಂದ ಕನಸು ನನಸಾಗೋದೆ ಇಲ್ಲ. ಇಂತಹ ದೇಶ ಸೇವೆಯ ಕನಸು ಹೊತ್ತ ಯುವಕರಿಗೆ ತರಬೇತಿ ನೀಡಿ, ಸೈನಿಕರಾಗಲು ಪ್ರೇರೆಪಿಸುತ್ತಿದೆ ಉಡುಪಿಯ ಕೋಟಿ ಚೆನ್ನಯ ಸೇನಾ ತರಬೇತಿ ಪೂರ್ವ ಸಂಸ್ಥೆ. ಇದು ಸೈಕರಾಗಿ ದೇಶ ಕಾಯಲು ಹೊರಟ ಯುವಕರಿಗೆ ತರಬೇತಿ ನೀಡುವ ಸೇನಾ ಪೂರ್ವ ತರಬೇತಿ ಶಾಲೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ

ಉಡುಪಿಯ ಹಳೆ ಜೈಲಿನ ನೆಲಸಮಕ್ಕೆ ಆದೇಶ : ಕಾಂತಾರ ಚಿತ್ರೀಕರಣಗೊಂಡ ಸ್ವಾತಂತ್ರ್ಯ ಪೂರ್ವದ ಜೈಲು

ಉಡುಪಿ : ಸ್ವಾತಂತ್ರ ಪೂರ್ವದಲ್ಲಿ ನಿರ್ಮಾಣಗೊಂಡ ಸರಿಸುಮಾರು 117 ವರ್ಷಗಳ ಇತಿಹಾಸ ಇರುವ ಉಡುಪಿ ನಗರದ ಹಳೆ ಸಬ್‌ಜೈಲು ಇನ್ನಿಲ್ಲದಂತಾಗುವಂತಿದೆ. ಕಾಂತಾರ ಸಿನಿಮಾದ ಕೆಲ ಭಾಗಗಳು ಚಿತ್ರೀಕರಣಗೊಂಡ, ಉಡುಪಿಯ ಏಕೈಕ ಪಾರಂಪರಿಕ ಕಟ್ಟಡದ ನೆಲಸಮಕ್ಕೆ ಇದೀಗ ಆದೇಶ ನೀಡಲಾಗಿದೆ. ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ಪಾರಂಪರಿಕ ಜೈಲನ್ನು‌ ಕೆಡವಲು ಉಡುಪಿ ನಗರಸಭೆ ಮೂದಾಗಿರುವುದು, ಆರ್ಕಿಟೆಕ್ಟ್‌ಗಳು ಹಾಗೂ ಕಲಾವಿದರಿಂದ ಬಾರೀ ವಿರೋಧ ವ್ಯಕ್ತವಾಗುತ್ತಿದೆ. ಉಡುಪಿ,

ಕರಾವಳಿಯ ಸೊಬಗಿನಲ್ಲಿ ರಂಗೇರಿತು “ಕೆಸರ್ಡ್ ಒಂಜಿ ದಿನ”

ಉಡುಪಿ : ಕರಾವಳಿಯ ಮಣ್ಣಿನ ಸೊಬಗು, ಆಚರಣೆಯ ಸೊಗಡು ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಕರಾವಳಿಯಲ್ಲಿ ಮಳೆ ಬಂದರೆ ಸಾಕು ಅನೇಕ ಪದ್ಧತಿಗಳು, ಆಟೋಟ ಸ್ಪರ್ದೆಗಳು ಆರಂಭವಾಗುತ್ತವೆ. ಮಳೆಗಾಲ ಬಂದಾಗ ಕರಾವಾಳಿಯ ಗದ್ದೆಗಳು ತುಂಬಿ ತುಳುಕುತ್ತವೆ, ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ ಇಂದಿನ ಕಂಪ್ಯೂಟರ್ ಯುಗದಲ್ಲಿ ಪಾರಂಪರಿಕವಾಗಿ ಬೆಳೆದು ಬಂದ ಹಳ್ಳಿ ಜನಪದ ಕ್ರೀಡೆಗಳು ಮೂಲೆ ಗುಂಪಾಗುತ್ತಿರುವುದರಿಂದ, ಕೆಸರುಗದ್ದೆ ಜನಪದ ಕ್ರೀಡೆಯನ್ನು ಉಳಿಸುವ

ಕಾರ್ಕಳದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಸಮ್ಮೇಳನ

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ನಗರ ಸಮ್ಮೇಳನ ಜುಲೈ 2 ರಂದು ಕಾರ್ಕಳದ ವೇಣುಗೋಪಾಲ ಕೃಷ್ಣ ದೇವಸ್ಥಾನ ಕಾಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಎಬಿವಿಪಿಯ ಹಿರಿಯ ಕಾರ್ಯಕರ್ತ ರಾಜೇಂದ್ರ ಅಮಿನ್ ಅವರು, ದೇಶ ಸೇವೆಗೆ ತಮ್ಮ ಸಮಯವನ್ನು ಮೀಸಲಿಡುವ ಮೂಲಕ ತಮ್ಮ ವಿದ್ಯಾರ್ಥಿ ಜೀವನವನ್ನು ಸಮರ್ಪಕವಾಗಿಸಿಕೊಳ್ಳಬೇಕೆಂದು ಹೇಳಿದರು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಸಹ

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ

ಉಡುಪಿ: ಪ್ರಥಮ ಏಕಾದಶಿ ಪ್ರಯುಕ್ತ ಪೆರ್ಡೂರು ಬ್ರಾಹ್ಮಣ ಸೇವಾ ಸಮಿತಿಯ ವತಿಯಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಶ್ರೀ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ಸುದರ್ಶನ ಹೋಮ ನಡೆಸಿ, ಪೂರ್ಣಾಹುತಿಯ ನಂತರ ಶೀರೂರು ಮಠದ ಸ್ವಾಮಿಗಳಾದ ಶ್ರೀ ಶ್ರೀ ವೇದದವರ್ಧನ ತೀರ್ಥರು ತಾಮ್ರದಿಂದ ತಯಾರಿಸಿದ ಸುದರ್ಶನ ಹಾಗೂ ಪಾಂಚಜನ್ಯ ಮುದ್ರೆಯನ್ನು, ಅದೇ ಅಗ್ನಿಯಲ್ಲಿ ಕಾಯಿಸಿ ಎಲ್ಲಾ

ರೋಗರುಜಿನಗಳಿಂದ ರಕ್ಷಣೆಗಾಗಿ ‘ತಪ್ತ ಮುದ್ರಾಧಾರಣೆ’ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮುದ್ರಾಧಾರಣೆಗೆ ಮುಂದಾದ ಭಕ್ತರು

ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ ಮಾಡುವ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯನ್ನು ಚಾತುರ್ಮಾಸ್ಯದ ಮೊದಲ ದಿನ ಸರ್ವೈಕಾದಶಿಯಂದೇ ನಡೆಸಲಾಗುತ್ತದೆ. ಈ ಸಲುವಾಗಿ ಇಂದು ಉಡುಪಿಯ ಶ್ರೀ ಕೃಷ್ಣ ಮಠ ಹಾಗೂ ಅಷ್ಟಮಠಗಳಲ್ಲಿ ಮುದ್ರಾಧಾರಣೆ ನಡೆಯಿತು. ಮಳೆಗಾಲದ

ಉಡುಪಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಉಡುಪಿ : ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಉಡುಪಿ ನಗರದ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು. ಇನ್ನೂ ಕೆಲವೆಡೆ ಮಳೆಯ ನಡುವೆ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇದನ್ನು

ರಸ್ತೆಯಲೆಲ್ಲಾ ಡೀಸೆಲ್ ಚೆಲ್ಲಿ ವಾಹನ ಸವಾರರ ಪರದಾಟ

ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ಒಂದರಿಂದ ರಸ್ತೆಯ ಮೇಲೆ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15ರಿಂದ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ