ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಬಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ
ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ. ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ
ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ ಇವೆ. ಮಹಾಯಾಗದ ಪ್ರಯುಕ್ತ ಫೆಬ್ರವರಿ 20, 2023 ರ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಅವರು ಆಗಮಿಸಿ, ದೇಗುಲದಲ್ಲಿ ನಡೆಯುತ್ತಿರುವ ಸಕಲ ತಯಾರಿಗಳನ್ನು ವೀಕ್ಷಿಸಿ,
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಿಂದ ಮಾರ್ಚ್ 05, 2023 ರ ಭಾನುವಾರದವರೆಗೆ ಸಂಪನ್ನಗೊಳ್ಳಲಿರುವ ‘ಅತಿರುದ್ರ ಮಹಾಯಾಗ’ ಪ್ರಯುಕ್ತ ಪ್ರತೀದಿನ ಗ್ರಾಮವಾರು ಹೊರೆಕಾಣಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಪಾವನ ಕಾರ್ಯಕ್ಕೆ ಭಕ್ತಾದಿಗಳು ಧವಾಸಧಾನ್ಯ, ಬೆಳೆಕಾಳು, ತರಕಾರಿ, ಅಕ್ಕಿ, ತೆಂಗಿನಕಾಯಿ ಮತ್ತಿತರ ದ್ರವ್ಯಗಳನ್ನು ಹೊರೆಕಾಣಿಕೆಯಾಗಿ ಸಮರ್ಪಿಸಲು ಸುವರ್ಣಾವಕಾಶ ಇದಾಗಿದೆ. ಈ ಪುಣ್ಯಕಾರ್ಯದಲ್ಲಿ
ಮಂಗಳೂರು ತಾಲೂಕಿನ ಹರೇಕಳ ಗ್ರಾಮದಲ್ಲಿ ಗೇಣಿದಾರ ರೈತರ, ಹೆಂಚು, ನೇಯ್ಗೆ, ಬೀಡಿ ಕಾರ್ಮಿಕರ ಹೋರಾಟದ ನೇತೃತ್ವ ವಹಿಸಿ ಕಮ್ಯೂನಿಸ್ಟ್ ಪಕ್ಷವನ್ನು ಮುನ್ನಡೆಸಿದ್ದ ಹಿರಿಯ ಸಂಗಾತಿ ಕಡೆಂಜ ಕಾಮಣ್ಣ ರೈಗಳ ಸ್ಮರಣಾರ್ಥವಾಗಿ ಹರೇಕಳದಲ್ಲಿ ಕಾಂ. ಕಾಮಣ್ಣ ರೈ ಭವನ ಡಿವೈಎಫ್ಐ ನವೀಕೃತ ಕಟ್ಟಡವು ನಿರ್ಮಾಣಗೊಳ್ಳುತ್ತಿದೆ. ಹರೇಕಳದಲ್ಲಿ ಡಿವೈಎಫ್ಐ 90 ರ ದಶಕದಲ್ಲಿ ಊರಿನ ಜನನಾಯಕ ಕಾಮ್ರೇಡ್ ಕಾಮಣ್ಣ ರೈ ನೆನಪಿನಲ್ಲಿ ಸ್ವಂತ ಕಟ್ಟಡವನ್ನು ಕಟ್ಟಿತು. ಈ ಕಟ್ಟಡ ನಂತರ ಗ್ರಾಮದ
ಸಾರಿಗೆ ಇಲಾಖೆಗೆ ಮತ್ತು ಸಾರಿಗೆ ಸಚಿವರಿಗೆ ಚಾಲಕರಿಗಾಗಿ 1. ಚಾಲಕರ ನಿಗಮ ಮಂಡಳಿ ಮಾಡಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಟುಂಬ ನಿರ್ವಹಣೆಗೆ ಅನುಕೂಲ ಅನುಕೂಲ ಮಾಡಿಕೊಡುವಂತೆ 2. ಚಾಲಕರ ದಿನಾಚರಣೆ ಎಚ್ ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಘೋಷಣೆಯಾಗಿದ್ದು ಪ್ರತಿ ಜಿಲ್ಲೆಯಲ್ಲಿ 10 ಚಾಲಕರಿಗೆ ಸಾರಥಿ ನಂಬರ್ ಒನ್ ಪ್ರಶಸ್ತಿ ಜೊತೆಗೆ 25,000 ಧನಸಹಾಯ ನೀಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ತೋರಿಸಿದರು ಕೂಡ ಈಡೇರಿಸಿದೆ ಇರುವುದು 3. ಓಲಾ ಉಬರ್ ನಂತಹ ಮಹಾ ವಂಚಕ
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮ, ರುದ್ರ ಮಂತ್ರ ಪಠನ,ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮಾರ್ಚನೆ, ಮಹಾ ಮೃತ್ಯುಂಜಯ ಹೋಮ,ಸತ್ಸಂಗ, ಮಹಾ ಸುದರ್ಶನ ಹೋಮ, ಕಳಶ ಪೂಜೆ,ಪಂಚಗವ್ಯ,ನವಕ, ಮಹಾ ಅಭಿಷೇಕ, ಧಾರಾ, ಆರತಿ
ಉಳ್ಳಾಲ: ಉಳ್ಳಾಲ್ ಕ್ರಿಕೆಟ್ ಬೋರ್ಡ್ ವತಿಯಿಂದ ಎಂಟನೇ ಅವಧಿಯ ಟೆನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಳ್ಳಾಲ್ ಪ್ರೀಮಿಯರ್ ಲೀಗ್ ಫೆ.20 ರಿಂದ ಫೆ.25 ರವರೆಗೆ ಐದು ದಿನಗಳ ಕಾಲ ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಉಳ್ಳಾಲ್ ಕ್ರಿಕೆಟ್ ಬೋರ್ಡ್ ಇದರ ಅಧ್ಯಕ್ಷ ಯು.ಬಿ ಸಲೀಂ ಹೇಳಿದರು. ಅವರು ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ
ಹೆಜಮಾಡಿಕೋಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯ 6 ವರ್ಷದ ಒಳಗಿನ ಪುಟಾಣಿ, ಮಕ್ಕಳ ಪ್ರತಿಭೆಯನ್ನು ವ್ಯಕ್ತ ಪಡಿಸಲು ವೇದಿಕೆಯನ್ನು ನಿರ್ಮಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಮೋಜಿನ ಆಟಗಳನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅದ್ರಷ್ಟಶಾಲಿ ಮಗುವನ್ನು ಆಯ್ಕೆ ಮಾಡಿ, ಆ ಮಗುವಿಗೆ ಒಂದು.. ವರ್ಷದ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವೈಧ್ಯಾಧಿಕಾರಿ ಡಾ.ಕ್ರಷ್ಣ



























