ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜನವರಿ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷರಾದ ಶ್ರೀಧರ್ ಜಿ. ಭಿಡೆ ವಹಿಸಲಿದ್ದಾರೆ.
ನೂತನವಾಗಿ ಲೋಕಾರ್ಪಣೆಯಾದ ಬಿರುವೆರ್ ಕುಡ್ಲ( ರಿ) ಪೈವಳಿಕೆ ಘಟಕ ಕಾಸರಗೋಡು ಜಿಲ್ಲೆ ಇದರ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಯಿಕಟ್ಟೆಯಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಲುವಾಗಿ ಶ್ರೀ ಮಹಾಗಣಪತಿ ದೇವರಿಗೆ ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ ) ಇದರ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ಬಳ್ಳಾಲ್ ಬಾಗ್
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ಆಂಟನಿ ವೇಸ್ಟ್ ಮ್ಯಾನೆಜ್ಮೆಂಟ್ ನ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಪೂರೈಸುವಂತೆ ಆಗ್ರಹಿಸಿ ಸಫಾಯಿ ಕರ್ಮಾಚಾರಿ ಕಾರ್ಮಿಕರು ಇಂದು ಕುಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಆಂಟನೀ ವೇಸ್ಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ಸಿಗಬೇಕಾದ ಬೋನಸ್ಸು, ಭತ್ಯೆ, ವಿಶೇಷ ರಜಾ ವೇತನ ಕನಿಷ್ಟ ವೇತನ ಮತ್ತು ವಿಡಿಎ, ಬೆಳಗಿನ ಉಪಹಾರ ಭತ್ತೆ, ಇತ್ಯಾದಿ ಬೇಡಿಕೆ
ಉಳ್ಳಾಲ: ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು
ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ
ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಅಟಗಾರ ಎಮ್ ಎಸ್ ಧೋನಿ ಕಾಣಿಸಿಕೊಂಡಿದ್ರು.ಕಾಸರಗೋಡಿನ ಬೇಕಲ್ ಪೆÇರ್ಟ್ ನಲ್ಲಿ ಬುಕ್ ರೀಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದರು. ಧೋನಿ ಜೊತೆಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಸಿದ್ದರು ಭದ್ರತೆಯ ದೃಷ್ಟಿಯಿಂದ ಸೆಲ್ಪಿ ಪ್ರಿಯರಿಗೆ ನಿರಾಸೆ ಉಂಟಾಯಿತು…
ಮಣಿಪಾಲ, 7ನೇ ಜನವರಿ 23:2023 ರ ಜನವರಿ 7 ಮತ್ತು 8 ರಂದು ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು ಜಂಟಿಯಾಗಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದಲ್ಲಿ 200 ಕ್ಕೂ ಹೆಚ್ಚು ದೇಶ ವಿದೇಶಗಳ ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕಿಗಳು ಭಾಗವಹಿಸಿದ್ದಾರೆ.
ಆಲೂರು ತಾಲೂಕು ಹಂಜಿಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಯೋಗೇಶ್ ಎಂಬುವವರ ಜೋಳದ ರಾಶಿಗೆ ಅಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಜೋಳ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಲೂರು ಸಕಲೇಶಪುರ ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಚಂಚಲ ಕುಮಾರಸ್ವಾಮಿ, ಜೆ ಡಿಎಸ್ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷರಾದ ಕಣದಳ್ಳಿ ಮಂಜಣ್ಣ, ತಹಸೀಲ್ದಾರ್ ಕೆ.ಸಿ ಸೌಮ್ಯ. ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಚ್ ಕೆ ಕುಮಾರಸ್ವಾಮಿ
ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು ದೀಪಬೆಳಗಿಸಿ ಬಿಡುಗಡೆಗೊಳಿಸುದರು. ಈ ಸಮಯದಲ್ಲಿ ನಾಲ್ಕು ಗ್ರಾಹಕರಿಗೆ ವಾಹನಗಳನ್ನ ನೀಡಲಾಯಿತು.
ನಗರದ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಶುಕ್ರವಾರ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಕೂಡ ಬೆಂಕಿ ಉರಿಯುತ್ತಲೇ ಇದೆ. ವಾಸನೆಯುಕ್ತ ದಟ್ಟ ಹೊಗೆಯು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಎಂಆರ್ಪಿಎಲ್, ಎನ್ಎಂಪಿಟಿ, ಕೆಐಓಸಿಎಲ್ ಸಹಿತ ವಿವಿಧ ಭಾಗದ 10 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿತು. ವಾಹನಗಳಲ್ಲದೆ 12 ಜೆಸಿಬಿ-ಹಿಟಾಚಿಗಳ ಮೂಲಕವೂ ಬೆಂಕಿ ನಂದಿಸಲು ಕಾರ್ಯಾಚರಣೆ